ಖಾತೆಯಿಲ್ಲದೆ, ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ನೋಂದಣಿ ಮಾಡುವ ಪ್ರಕ್ರಿಯೆಗೆ ಕಡಿವಾಣ ಹಾಕಿ- ಸಿಎಂ ಸಿದ್ದರಾಮಯ್ಯ

ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತು ಇಂದು ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಮಾಹಿತಿ ಹಾಗೂ ಸೂಚನೆಗಳು

• ಬಿಬಿಎಂಪಿಯಲ್ಲಿ ಸುಮಾರು 15 ಲಕ್ಷ ಆಸ್ತಿಗಳು ಖಾತಾ ದಾಖಲೆಗಳನ್ನು ಹೊಂದಿರುವುದಿಲ್ಲ. ಇದರಿಂದ ತೆರಿಗೆಯೂ ಕಟ್ಟದ ಕಾರಣ ಸಾವಿರಾರು ಕೋಟಿ ರೂ. ತೆರಿಗೆ ಪ್ರತೀ ವರ್ಷ ಸರ್ಕಾರಕ್ಕೆ ನಷ್ಟ ಉಂಟಾಗುತ್ತಿದೆ.

• ಸ್ಥಳೀಯ ಸಂಸ್ಥೆಗಳಲ್ಲಿ ಅಂದಾಜು 30 ಲಕ್ಷ ಆಸ್ತಿಗಳಿಗೆ ಖಾತೆಗಳು ಇರುವುದಿಲ್ಲ‌, ಗ್ರಾಮ ಪಂಚಾಯತ್‌ಗಳಲ್ಲಿ ಅಂದಾಜು 90 ಲಕ್ಷ ಆಸ್ತಿಗಳು ಖಾತಾ ದಾಖಲೆಗಳನ್ನು ಹೊಂದಿರುವುದಿಲ್ಲ.

• ಖಾತೆಯಿಲ್ಲದೆ, ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ನೋಂದಣಿ ಮಾಡುವ ಪ್ರಕ್ರಿಯೆಗೆ ಕಡಿವಾಣ ಹಾಕಬೇಕು. ಇದು ಸ್ಥಳೀಯ ಸಂಸ್ಥೆಗಳು ಮತ್ತು ನೋಂದಣಿ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು.

• ಸ್ಥಳೀಯ ಸಂಸ್ಥೆಗಳು ಖಾತಾ ನೀಡಿರುವ ಆಸ್ತಿಗಳನ್ನು ಮಾತ್ರ ನೋಂದಣಿ ಇಲಾಖೆಯಡಿ ನೋಂದಣಿ ಮಾಡಬೇಕು. ಸ್ಥಳೀಯ ಸಂಸ್ಥೆಗಳು ನೀಡಿರುವ ಖಾತಾ ದಾಖಲೆಗಳ ಡಾಟಾಬೇಸ್‌ ಕಂಪ್ಯೂಟರ್‌ನಲ್ಲಿ ಇರಬೇಕು. ಈ ಡಾಟಾ ಬೇಸ್‌ ಆಧರಿಸಿ ನೋಂದಣಿ ಪ್ರಕ್ರಿಯೆ ಮಾಡಬೇಕು.

• ನೋಂದಣಿ ಪ್ರಕ್ರಿಯೆ ಇಂಟಿಗ್ರೇಷನ್‌ ಆದ ಮೇಲೆ ಅಕ್ರಮಗಳ ಮೇಲೆ ಕಡಿವಾಣ ಸಾಧ್ಯವಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಒನ್ ಟೈಮ್‌ ಪರಿಹಾರ ನೀಡುವ ಬಗ್ಗೆ ಮುಂದಿನ ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು.

• ಬಿಬಿಎಂಪಿಯಲ್ಲಿ ವ್ಯಾಪ್ತಿಯಲ್ಲಿ ಖಾತಾ ನೀಡಿರುವುದನ್ನು ಡಾಟಾ ಬೇಸ್‌ನಲ್ಲಿ ಹಾಕಬೇಕು. ಇದರಿಂದ ಖಾತೆ ಆದ ಆಸ್ತಿಗಳನ್ನು ಮಾತ್ರ ನೋಂದಣಿ ಮಾಡಬಹುದು. ಕಾಗದ ದಾಖಲೆಗಳ ಆಧಾರದಲ್ಲಿ ಯಾವುದೇ ಕಾರಣಕ್ಕೂ ನೋಂದಣಿಗೆ ಪರಿಗಣಿಸಬಾರದು.

• ಬಿಬಿಎಂಪಿ, ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಅಭಿಯಾನದ ಮಾದರಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ನಡೆಸಬೇಕು. ಫೆಬ್ರವರಿ 10ರ ಒಳಗಾಗಿ ನಿಗದಿತ ಅವಧಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.

• ಬಿಬಿಎಂಪಿ ವ್ಯಾಪ್ತಿಯಲ್ಲಿ 23 ಲಕ್ಷ ಆಸ್ತಿಗಳ ಡಿಜಿಟಲೈಸ್‌ ಮಾಡಲಾಗಿದೆ. ಈಗಾಗಲೇ 15 ಲಕ್ಷ ಖಾತೆಗಳನ್ನು ಡೌನ್‌ಲೋಡ್‌ ಮಾಡಲಾಗಿದೆ.

• ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಕ್ರಮಬದ್ಧವಲ್ಲದ ಸ್ವತ್ತುಗಳ ನಕಲಿ ಖಾತೆಗಳನ್ನು ಸೃಜಿಸಿ ವಂಚನೆಯಿಂದ ಹೆಚ್ಚು ದಸ್ತಾವೇಜುಗಳ ನೋಂದಣಿ ಮಾಡುವ ಪ್ರಕ್ರಿಯೆಗೆ ಸಂಪೂರ್ಣ ಕಡಿವಾಣ ಹಾಕಬೇಕು.

• ಇನ್ನು ಮುಂದೆ ಕಂದಾಯ ಜಮೀನಿನಲ್ಲಿ ಲೇಔಟ್‌ ನಿರ್ಮಾಣಕ್ಕೆ ಅವಕಾಶ ನೀಡಬಾರದು. ಇದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಈಗಾಗಲೇ ಇರುವ ಅಂತಹ ಲೇಔಟ್‌ಗಳ ಕುರಿತು ಸೂಕ್ತ ಕ್ರಮ‌ ಕೈಗೊಳ್ಳಬೇಕು.

• ನಿವೇಶನಗಳಲ್ಲಿರುವ ರಸ್ತೆಗಳನ್ನು ಸಾರ್ವಜನಿಕ ರಸ್ತೆಗಳಾಗಿ ಪರಿಗಣಿಸುವ ಕುರಿತು ಕ್ರಮ ಪರಿಶೀಲಿಸಬೇಕು.

• ನಗರ ಪ್ರದೇಶಗಳಲ್ಲಿ ಆಸ್ತಿಗಳ ಅಕ್ರಮ ನೋಂದಣಿ ತಡೆಗಟ್ಟಲು ಹಾಗೂ ಆಸ್ತಿ ನೋಂದಣಿ ಮತ್ತು ಖಾತಾ ನಮೂದನ್ನು ಇನ್ನಷ್ಟು ಸರಳೀಕರಣಗೊಳಿಸಲು ಕಾವೇರಿ ಮತ್ತು ಇ-ಆಸ್ತಿ ತಂತ್ರಾಂಶಗಳ ಸಂಯೋಜನೆಯನ್ನು ಕಡ್ಡಾಯಗೊಳಿಸಲಾಗಿದೆ.

• ಈ ವರ್ಷ ಡಿಸೆಂಬರ್‌ ಕೊನೆಗೆ ರೂ.16,993 ಕೋಟಿ ರಾಜಸ್ವ ಸಂಗ್ರಹಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.17ರಷ್ಟು ಹೆಚ್ಚುವರಿ ಪ್ರಗತಿ ಸಾಧಿಸಲಾಗಿದೆ.

• ಕಂದಾಯ ಇಲಾಖೆಯಲ್ಲಿ ಸರ್ವೇ ನಂಬರ್‌ಗಳಲ್ಲಿ ನಿರ್ಮಿಸಿದ ಅನಧಿಕೃತ ಬಡಾವಣೆಗಳು/ನಿವೇಶನಗಳ ದತ್ತಾಂಶ ಮಾಹಿತಿ ಇದ್ದು, ಸದರಿ ಮಾಹಿತಿಯನ್ನು ಆಧರಿಸಿ ಒಂದೇ ಯೋಜನೆಯಲ್ಲಿ ಸದರಿ ಸ್ವತ್ತುಗಳಿಗೆ ಖಾತಾ ದಾಖಲೆಗಳನ್ನು ನೀಡುವ ಪ್ರಕ್ರಿಯೆಗೆ ಚಾಲನೆ ನೀಡಬೇಕು.

• ಗ್ರಾಮ ಪಂಚಾಯತ್‌ಗಳಲ್ಲಿ 44 ಲಕ್ಷ ಆಸ್ತಿಗಳಿಗೆ ಮಾತ್ರ ಖಾತೆಯಿದೆ. ಇದರಿಂದ 800 ಕೋಟಿ ರೂ. ಆದಾಯ ಪ್ರತಿ ವರ್ಷ ಬರುತ್ತಿದೆ. ಆದರೆ ಸುಮಾರು 96 ಲಕ್ಷ ಆಸ್ತಿಗಳಿಗೆ ಇನ್ನೂ ಈ ಖಾತಾ ಇರುವುದಿಲ್ಲ. ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಖಾತೆ ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸುವ ಕುರಿತು ಕ್ರಮ ವಹಿಸಬೇಕು.

Ramesh Babu

Journalist

Recent Posts

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

2 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

2 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

3 hours ago

ಗೌರಿ ಗಣೇಶ ಹಬ್ಬ: ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ-ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…

4 hours ago

ಜೇನುತುಪ್ಪಕ್ಕೂ ವರುಣನ ಬರೆ! ಮಳೆ ಕೊರತೆ ಹಿನ್ನೆಲೆಯಲ್ಲಿ ಒಣಗಿದ ಸಸ್ಯಗಳು: ಆಹಾರ ಅರಸಿ ಕಿಮೀಗಟ್ಟಲೆ ಜೇನುಹುಳುಗಳ ವಲಸೆ: ಜೇನುತುಪ್ಪ ಉತ್ಪಾದನೆಗೆ ಹೊಡೆತ

ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…

8 hours ago