ದೇವನಹಳ್ಳಿ: ರಾಜ್ಯ ಸಚಿವ ಸಂಪುಟದ ಖಾತೆ ಹಂಚಿಕೆ ಹಾಗೂ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆ ಕುರಿತ ರಾಜಕೀಯ ಚಟುವಟಿಕೆಗಳ ನಡುವೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ.
ಸಿಎಂ ಜೊತೆಗೆ ಹಲವು ಸಚಿವಾಕಾಂಕ್ಷಿಗಳು ಹಾಗೂ ಶಾಸಕರು ಕೂಡ ದೆಹಲಿಯತ್ತ ಪ್ರಯಾಣ ಬೆಳೆಸಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಖಾತೆ ಹಂಚಿಕೆ ಕುರಿತ ಅಸಮಾಧಾನ ಹಾಗೂ ಸಚಿವ ಸಂಪುಟದ ಎರಡನೇ ಪಟ್ಟಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಮಹತ್ವದ ಚರ್ಚೆಗಳು ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಇದೇ ವೇಳೆ ಖಾತೆ ಬದಲಾವಣೆಗೆ ಪಟ್ಟು ಬಿಡದ ಸಚಿವ ಕೆ.ಎಚ್ ಮುನಿಯಪ್ಪ ತಮ್ಮ ಲಾಬಿ ಮುಂದುವರಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಿಎಂ ಜೊತೆ ನಿರಂತರ ಸಂಪರ್ಕದಲ್ಲಿರುವ ಮುನಿಯಪ್ಪ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲೂ ವಿಮಾನ ನಿಲ್ದಾಣದಲ್ಲೇ ಮಾತುಕತೆ ನಡೆಸಿದ್ದರು.
ಇಂದು ಕೂಡ ಸಿಎಂ ದೆಹಲಿಗೆ ತೆರಳುವ ಮುನ್ನ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಮುನಿಯಪ್ಪ ಅವರು ಸಿಎಂ ಜೊತೆ ಚರ್ಚೆ ನಡೆಸಿದ್ದಾರೆ.
ಖಾತೆ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳುವಂತೆ ಮನವಿ ಮಾಡುವಂತೆ ಸಿಎಂಗೆ ಅವರು ಒತ್ತಾಯಿಸಿರುವ ಸಾಧ್ಯತೆ ಇದೆ. ಬಳಿಕ ಸಿಎಂ ಅವರನ್ನು ಬೀಳ್ಕೊಟ್ಟು ಮುನಿಯಪ್ಪ ಬೆಂಗಳೂರಿನತ್ತ ಮರಳಿದರು.
ರಾಜ್ಯದಲ್ಲಿ ಖಾತೆ ಹಂಚಿಕೆ ಕುರಿತ ಅಸಮಾಧಾನ, ಸಚಿವ ಸಂಪುಟ ವಿಸ್ತರಣೆ ಹಾಗೂ ಪ್ರಮುಖ ಖಾತೆಗಳ ಮರುಹಂಚಿಕೆ ಕುರಿತು ಚರ್ಚೆಗಳು ಜೋರಾಗಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನಡೆಯಲಿರುವ ಸಭೆಗಳತ್ತ ಕಾಂಗ್ರೆಸ್ ವಲಯದ ಗಮನ ಕೇಂದ್ರೀಕೃತವಾಗಿದೆ.
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…