ದೇವನಹಳ್ಳಿ: ರಾಜ್ಯ ಸಚಿವ ಸಂಪುಟದ ಖಾತೆ ಹಂಚಿಕೆ ಹಾಗೂ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆ ಕುರಿತ ರಾಜಕೀಯ ಚಟುವಟಿಕೆಗಳ ನಡುವೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ.
ಸಿಎಂ ಜೊತೆಗೆ ಹಲವು ಸಚಿವಾಕಾಂಕ್ಷಿಗಳು ಹಾಗೂ ಶಾಸಕರು ಕೂಡ ದೆಹಲಿಯತ್ತ ಪ್ರಯಾಣ ಬೆಳೆಸಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಖಾತೆ ಹಂಚಿಕೆ ಕುರಿತ ಅಸಮಾಧಾನ ಹಾಗೂ ಸಚಿವ ಸಂಪುಟದ ಎರಡನೇ ಪಟ್ಟಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಮಹತ್ವದ ಚರ್ಚೆಗಳು ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಇದೇ ವೇಳೆ ಖಾತೆ ಬದಲಾವಣೆಗೆ ಪಟ್ಟು ಬಿಡದ ಸಚಿವ ಕೆ.ಎಚ್ ಮುನಿಯಪ್ಪ ತಮ್ಮ ಲಾಬಿ ಮುಂದುವರಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಿಎಂ ಜೊತೆ ನಿರಂತರ ಸಂಪರ್ಕದಲ್ಲಿರುವ ಮುನಿಯಪ್ಪ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲೂ ವಿಮಾನ ನಿಲ್ದಾಣದಲ್ಲೇ ಮಾತುಕತೆ ನಡೆಸಿದ್ದರು.
ಇಂದು ಕೂಡ ಸಿಎಂ ದೆಹಲಿಗೆ ತೆರಳುವ ಮುನ್ನ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಮುನಿಯಪ್ಪ ಅವರು ಸಿಎಂ ಜೊತೆ ಚರ್ಚೆ ನಡೆಸಿದ್ದಾರೆ.
ಖಾತೆ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳುವಂತೆ ಮನವಿ ಮಾಡುವಂತೆ ಸಿಎಂಗೆ ಅವರು ಒತ್ತಾಯಿಸಿರುವ ಸಾಧ್ಯತೆ ಇದೆ. ಬಳಿಕ ಸಿಎಂ ಅವರನ್ನು ಬೀಳ್ಕೊಟ್ಟು ಮುನಿಯಪ್ಪ ಬೆಂಗಳೂರಿನತ್ತ ಮರಳಿದರು.
ರಾಜ್ಯದಲ್ಲಿ ಖಾತೆ ಹಂಚಿಕೆ ಕುರಿತ ಅಸಮಾಧಾನ, ಸಚಿವ ಸಂಪುಟ ವಿಸ್ತರಣೆ ಹಾಗೂ ಪ್ರಮುಖ ಖಾತೆಗಳ ಮರುಹಂಚಿಕೆ ಕುರಿತು ಚರ್ಚೆಗಳು ಜೋರಾಗಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನಡೆಯಲಿರುವ ಸಭೆಗಳತ್ತ ಕಾಂಗ್ರೆಸ್ ವಲಯದ ಗಮನ ಕೇಂದ್ರೀಕೃತವಾಗಿದೆ.
ದೊಡ್ಡಬಳ್ಳಾಪುರ: ದೇವಸ್ಥಾನಗಳನ್ನೇ ಗುರಿಯಾಗಿಸಿಕೊಂಡು ಸರಣಿ ಕಳ್ಳತನ ನಡೆಸುತ್ತಿದ್ದ ಅಪ್ಪ ಹಾಗೂ ಇಬ್ಬರು ಮಕ್ಕಳನ್ನೊಳಗೊಂಡ ಖತರ್ನಾಕ್ ಕಳ್ಳರ ಜಾಲವನ್ನು ದೊಡ್ಡಬೆಳವಂಗಲ ಠಾಣೆ…
ದೇವನಹಳ್ಳಿ: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಟ್ಯಾಬ್ಲೆಟ್ ರೂಪದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ…
ದೇವನಹಳ್ಳಿ: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ದೆಹಲಿ ಪ್ರವಾಸಕ್ಕೆ ತೆರಳುವ ಮುನ್ನ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ…
ಬೆಂಗಳೂರು ಗ್ರಾಮಾಂತರ: ರಾಜ್ಯ ಕಾಂಗ್ರೆಸ್ ನಲ್ಲಿ ಟ್ರಬಲ್ ಶೂಟರ್ ಎಂದೇ ಖ್ಯಾತಿ ಪಡೆದಿರುವ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಹೊಸ ಸರ್ಕಾರ ರಚನೆಯಾದ…
ಸಮಾಜದಲ್ಲಿ ದಲಿತ ಸಮುದಾಯಗಳು ಎದುರಿಸುತ್ತಿದ್ದ ಸಮಸ್ಯೆಗಳ ವಿರುದ್ಧ ಹೋರಾಟ ನಡೆಸಿದ ಪ್ರೊ. ಬಿ ಕೃಷ್ಣಪ್ಪ ಅವರು ಎಲ್ಲರಿಗೂ ಮಾದರಿ. ಅವರ…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 40 ವರ್ಷಗಳಿಂದ ರಾಜಕಾರಣ ಮಾಡುತ್ತಾ, ಮನೆ ಮಾತಾಗಿರುವ ಹುಸ್ಕೂರು ಟಿ. ಆನಂದ್ ಜೆಡಿಎಸ್ ಪಕ್ಷದಲ್ಲಿ ರಾಜ್ಯ ಪ್ರಧಾನ…