ದೇವನಹಳ್ಳಿ: ರಾಜ್ಯ ಸಚಿವ ಸಂಪುಟದ ಖಾತೆ ಹಂಚಿಕೆ ಹಾಗೂ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆ ಕುರಿತ ರಾಜಕೀಯ ಚಟುವಟಿಕೆಗಳ ನಡುವೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ.
ಸಿಎಂ ಜೊತೆಗೆ ಹಲವು ಸಚಿವಾಕಾಂಕ್ಷಿಗಳು ಹಾಗೂ ಶಾಸಕರು ಕೂಡ ದೆಹಲಿಯತ್ತ ಪ್ರಯಾಣ ಬೆಳೆಸಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಖಾತೆ ಹಂಚಿಕೆ ಕುರಿತ ಅಸಮಾಧಾನ ಹಾಗೂ ಸಚಿವ ಸಂಪುಟದ ಎರಡನೇ ಪಟ್ಟಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಮಹತ್ವದ ಚರ್ಚೆಗಳು ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಇದೇ ವೇಳೆ ಖಾತೆ ಬದಲಾವಣೆಗೆ ಪಟ್ಟು ಬಿಡದ ಸಚಿವ ಕೆ.ಎಚ್ ಮುನಿಯಪ್ಪ ತಮ್ಮ ಲಾಬಿ ಮುಂದುವರಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಿಎಂ ಜೊತೆ ನಿರಂತರ ಸಂಪರ್ಕದಲ್ಲಿರುವ ಮುನಿಯಪ್ಪ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲೂ ವಿಮಾನ ನಿಲ್ದಾಣದಲ್ಲೇ ಮಾತುಕತೆ ನಡೆಸಿದ್ದರು.
ಇಂದು ಕೂಡ ಸಿಎಂ ದೆಹಲಿಗೆ ತೆರಳುವ ಮುನ್ನ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಮುನಿಯಪ್ಪ ಅವರು ಸಿಎಂ ಜೊತೆ ಚರ್ಚೆ ನಡೆಸಿದ್ದಾರೆ.
ಖಾತೆ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳುವಂತೆ ಮನವಿ ಮಾಡುವಂತೆ ಸಿಎಂಗೆ ಅವರು ಒತ್ತಾಯಿಸಿರುವ ಸಾಧ್ಯತೆ ಇದೆ. ಬಳಿಕ ಸಿಎಂ ಅವರನ್ನು ಬೀಳ್ಕೊಟ್ಟು ಮುನಿಯಪ್ಪ ಬೆಂಗಳೂರಿನತ್ತ ಮರಳಿದರು.
ರಾಜ್ಯದಲ್ಲಿ ಖಾತೆ ಹಂಚಿಕೆ ಕುರಿತ ಅಸಮಾಧಾನ, ಸಚಿವ ಸಂಪುಟ ವಿಸ್ತರಣೆ ಹಾಗೂ ಪ್ರಮುಖ ಖಾತೆಗಳ ಮರುಹಂಚಿಕೆ ಕುರಿತು ಚರ್ಚೆಗಳು ಜೋರಾಗಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನಡೆಯಲಿರುವ ಸಭೆಗಳತ್ತ ಕಾಂಗ್ರೆಸ್ ವಲಯದ ಗಮನ ಕೇಂದ್ರೀಕೃತವಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…
Footpath...... ಫುಟ್ ಪಾತ್...... ( ಗೂಡಂಗಡಿಯ ಜನರ ಕರುಳ ಬಳ್ಳಿಯ ಕರೆ....) ಫುಟ್ ಪಾತ್ ಎಂದು ಆಂಗ್ಲ ಭಾಷೆಯಲ್ಲಿ ಕರೆಯಲ್ಪಡುವ…
ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಗೆ ಸಂಬಂಧಿಸಿದಂತೆ ಆನ್ಲೈನ್ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಯ ದಿನಾಂಕವನ್ನು ವಿಸ್ತರಿಸಲಾಗಿದೆ. ಜೊತೆಗೆ, ಈಗಾಗಲೇ…