ದೇವನಹಳ್ಳಿ: ರಾಜ್ಯ ಸಚಿವ ಸಂಪುಟದ ಖಾತೆ ಹಂಚಿಕೆ ಹಾಗೂ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆ ಕುರಿತ ರಾಜಕೀಯ ಚಟುವಟಿಕೆಗಳ ನಡುವೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ.
ಸಿಎಂ ಜೊತೆಗೆ ಹಲವು ಸಚಿವಾಕಾಂಕ್ಷಿಗಳು ಹಾಗೂ ಶಾಸಕರು ಕೂಡ ದೆಹಲಿಯತ್ತ ಪ್ರಯಾಣ ಬೆಳೆಸಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಖಾತೆ ಹಂಚಿಕೆ ಕುರಿತ ಅಸಮಾಧಾನ ಹಾಗೂ ಸಚಿವ ಸಂಪುಟದ ಎರಡನೇ ಪಟ್ಟಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಮಹತ್ವದ ಚರ್ಚೆಗಳು ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಇದೇ ವೇಳೆ ಖಾತೆ ಬದಲಾವಣೆಗೆ ಪಟ್ಟು ಬಿಡದ ಸಚಿವ ಕೆ.ಎಚ್ ಮುನಿಯಪ್ಪ ತಮ್ಮ ಲಾಬಿ ಮುಂದುವರಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಿಎಂ ಜೊತೆ ನಿರಂತರ ಸಂಪರ್ಕದಲ್ಲಿರುವ ಮುನಿಯಪ್ಪ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲೂ ವಿಮಾನ ನಿಲ್ದಾಣದಲ್ಲೇ ಮಾತುಕತೆ ನಡೆಸಿದ್ದರು.
ಇಂದು ಕೂಡ ಸಿಎಂ ದೆಹಲಿಗೆ ತೆರಳುವ ಮುನ್ನ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಮುನಿಯಪ್ಪ ಅವರು ಸಿಎಂ ಜೊತೆ ಚರ್ಚೆ ನಡೆಸಿದ್ದಾರೆ.
ಖಾತೆ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳುವಂತೆ ಮನವಿ ಮಾಡುವಂತೆ ಸಿಎಂಗೆ ಅವರು ಒತ್ತಾಯಿಸಿರುವ ಸಾಧ್ಯತೆ ಇದೆ. ಬಳಿಕ ಸಿಎಂ ಅವರನ್ನು ಬೀಳ್ಕೊಟ್ಟು ಮುನಿಯಪ್ಪ ಬೆಂಗಳೂರಿನತ್ತ ಮರಳಿದರು.
ರಾಜ್ಯದಲ್ಲಿ ಖಾತೆ ಹಂಚಿಕೆ ಕುರಿತ ಅಸಮಾಧಾನ, ಸಚಿವ ಸಂಪುಟ ವಿಸ್ತರಣೆ ಹಾಗೂ ಪ್ರಮುಖ ಖಾತೆಗಳ ಮರುಹಂಚಿಕೆ ಕುರಿತು ಚರ್ಚೆಗಳು ಜೋರಾಗಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನಡೆಯಲಿರುವ ಸಭೆಗಳತ್ತ ಕಾಂಗ್ರೆಸ್ ವಲಯದ ಗಮನ ಕೇಂದ್ರೀಕೃತವಾಗಿದೆ.
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಲಿಕುಂಟೆ ಟೋಲ್ ಸಮೀಪದ ಚಿಕ್ಕಲಯ್ಯನಪಾಳ್ಯ ಬಳಿ ನಿಂತಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ…
ದೇಶ ಮತ್ತು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ ಕೆಲವೇ ವರ್ಷಗಳಲ್ಲಿ ದೇಶದ ಆಂತರಿಕ ವ್ಯವಸ್ಥೆ ಕುಸಿಯುವುದು. ನಿಶ್ಚಿತ…
ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿ ರಂಗನ್ ವರದಿ ಕುರಿತ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು…
ಕೋಲಾರ : ನಗರದ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆಯಲ್ಲಿ ಬಡ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಖಾಸಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಕ್ಷೇತ್ರದ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ (ಡಿಪಿಎ) ಅಧ್ಯಕ್ಷ…
ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…