ಖಾತೆ ಹಂಚಿಕೆ ಕುರಿತು ಸಚಿವ ಕೆ.ಎಚ್. ಮುನಿಯಪ್ಪ ಅಸಮಾಧಾನ: “ಸಿನಿಯಾರಿಟಿಗೆ ಗೌರವ ಸಿಕ್ಕಿಲ್ಲ”- ಕೆ.ಎಚ್ ಮುನಿಯಪ್ಪ

ದೇವನಹಳ್ಳಿ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ಅವರು ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮತ್ತೆ ಆಹಾರ ಇಲಾಖೆ ನೀಡಿರುವುದಕ್ಕೆ ಬೇಸರ ವ್ಯಕ್ತಪಡಿಸಿರುವ ಅವರು, ಖಾತೆ ಹಂಚಿಕೆಯಲ್ಲಿ ಹಿರಿಯತೆ ಮತ್ತು ಸಮತೋಲನವನ್ನು ಪರಿಗಣಿಸಿಲ್ಲ ಎಂದು ಆರೋಪಿಸಿದ್ದಾರೆ.

ದೇವನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುನಿಯಪ್ಪ, “ನಾನು ಎಂಟು ಬಾರಿ ಚುನಾಯಿತನಾಗಿದ್ದೇನೆ. ಆದರೆ ಖಾತೆ ಹಂಚಿಕೆಯಲ್ಲಿ ನನ್ನ ಸಿನಿಯಾರಿಟಿಗೆ ತಕ್ಕ ಗೌರವ ಸಿಕ್ಕಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಾಯಿ ಸ್ಥಾನದಲ್ಲಿದ್ದು ಎಲ್ಲಾರನ್ನು ಸಮಾನವಾಗಿ ನೊಡಬೇಕು. ಆದರೆ, ಖಾತೆ ಹಂಚಿಕೆ ಆ ರೀತಿಯಲ್ಲಿ ನಡೆದಿಲ್ಲ” ಎಂದು ಹೇಳಿದರು.

“ಖಾತೆ ಹಂಚಿಕೆ ಸಮತೋಲನದಿಂದ ಆಗಬೇಕಿತ್ತು. ಹಿರಿಯತೆ ಪರಿಗಣಿಸಬೇಕಿತ್ತು. ಅದನ್ನು ಗಮನಿಸಿಲ್ಲ. ಇದೇ ರೀತಿ ಮುಂದುವರಿದರೆ 2028ರ ಚುನಾವಣೆಯಲ್ಲಿ ಪಕ್ಷಕ್ಕೆ ತೊಂದರೆಯಾಗಬಹುದು” ಎಂದು ಅವರು ಎಚ್ಚರಿಕೆ ನೀಡಿದರು.

ತಾವು ಈಗಾಗಲೇ ಮೂರು ವರ್ಷಗಳಿಂದ ಆಹಾರ ಇಲಾಖೆಯನ್ನು ನಿರ್ವಹಿಸುತ್ತಿದ್ದು, ಸಮಾಜ ಕಲ್ಯಾಣ ಅಥವಾ ಕೃಷಿ ಇಲಾಖೆಯಂತಹ ಜನಸೇವೆಗೆ ಹೆಚ್ಚು ಅವಕಾಶವಿರುವ ಖಾತೆಯನ್ನು ನೀಡುವಂತೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.

ಈ ಕುರಿತು ತಾವು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಎಲ್ಲ ಸಚಿವರನ್ನು ಸಮಾನವಾಗಿ ಪರಿಗಣಿಸುವಂತೆ ಮನವಿ ಮಾಡಿರುವುದಾಗಿ ಮುನಿಯಪ್ಪ ಹೇಳಿದರು.

ಪ್ರೊಟೊಕಾಲ್ ಪ್ರಕಾರ ಹಿರಿತನದ ಆಧಾರದ ಮೇಲೆ ಸಮಾಜಕ್ಕೆ ಉಪಯೋಗವಾಗುವ ಖಾತೆಗಳ ಹಂಚಿಕೆ ಆಗಬೇಕಿತ್ತು‌. ಈ ಬಗ್ಗೆ ಗೊಂದಲ ಉಂಟಾಗದಂತೆ ಪಕ್ಷದ ನಾಯಕತ್ವ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂಬ ನಂಬಿಕೆ ಇದೆ” ಎಂದು ಅವರು ಆಶಾಭಾವ ವ್ಯಕ್ತಪಡಿಸಿದರು.

ಸಚಿವ ಮುನಿಯಪ್ಪ ಅವರ ಈ ಹೇಳಿಕೆ ಕಾಂಗ್ರೆಸ್ ಸರ್ಕಾರದ ಖಾತೆ ಹಂಚಿಕೆ ವಿಚಾರದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಈ ಬೆಳವಣಿಗೆ ರಾಜಕೀಯವಾಗಿ ಮಹತ್ವ ಪಡೆಯುವ ಸಾಧ್ಯತೆ ಇದೆ.

Ramesh Babu

Journalist

Recent Posts

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಆರಂಭದಲ್ಲೇ ರಾಜಕೀಯ ಆಘಾತ ಎದುರಾಗಿದೆ. ಸಚಿವ ರಾಮಲಿಂಗ ರೆಡ್ಡಿ ತಮ್ಮ…

4 hours ago

ಭಾರತದ ಮಧ್ಯಮ ವರ್ಗದವರ ಸಿಹಿ-ಕಹಿಗಳು, ನಿರಾಸೆ ಮತ್ತು ಜೀವನೋತ್ಸಾಹ…..

ಭಾರತದ ಬಹಳಷ್ಟು ಮಧ್ಯಮ ವರ್ಗದ ಜನರಲ್ಲಿ ಜೀವನೋತ್ಸಾಹ ಕಡಿಮೆಯಾಗುತ್ತಿದೇಯೇ ಎಂಬ ಅನುಮಾನ ಶುರುವಾಗಿದೆ. ನಿಜಕ್ಕೂ ಬೃಹತ್ ಸಂಖ್ಯೆಯ ಮಧ್ಯಮ ವರ್ಗದವರು…

8 hours ago

ದೊಡ್ಡಬಳ್ಳಾಪುರದಲ್ಲಿ ಕಳ್ಳರ ಹಾವಳಿ: ಸರ, ಬೈಕ್‌ನಿಂದ ಹಸುಗಳವರೆಗೆ ಕಳವು – ಜನರಲ್ಲಿ ಹೆಚ್ಚಿದ ಆತಂಕ

ದೊಡ್ಡಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಜನಸಾಮಾನ್ಯರ ನೆಮ್ಮದಿ ಕದಡಿದೆ. ಮಹಿಳೆಯರ ಚಿನ್ನಾಭರಣ,…

9 hours ago

ಸಿಎಂ, ಡಿಸಿಎಂ, ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ಸಿಗಲಿದೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ…

9 hours ago

ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…

20 hours ago

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

23 hours ago