ಖಾತೆ ಹಂಚಿಕೆ ಕುರಿತು ಸಚಿವ ಕೆ.ಎಚ್. ಮುನಿಯಪ್ಪ ಅಸಮಾಧಾನ: “ಸಿನಿಯಾರಿಟಿಗೆ ಗೌರವ ಸಿಕ್ಕಿಲ್ಲ”- ಕೆ.ಎಚ್ ಮುನಿಯಪ್ಪ

ದೇವನಹಳ್ಳಿ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ಅವರು ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮತ್ತೆ ಆಹಾರ ಇಲಾಖೆ ನೀಡಿರುವುದಕ್ಕೆ ಬೇಸರ ವ್ಯಕ್ತಪಡಿಸಿರುವ ಅವರು, ಖಾತೆ ಹಂಚಿಕೆಯಲ್ಲಿ ಹಿರಿಯತೆ ಮತ್ತು ಸಮತೋಲನವನ್ನು ಪರಿಗಣಿಸಿಲ್ಲ ಎಂದು ಆರೋಪಿಸಿದ್ದಾರೆ.

ದೇವನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುನಿಯಪ್ಪ, “ನಾನು ಎಂಟು ಬಾರಿ ಚುನಾಯಿತನಾಗಿದ್ದೇನೆ. ಆದರೆ ಖಾತೆ ಹಂಚಿಕೆಯಲ್ಲಿ ನನ್ನ ಸಿನಿಯಾರಿಟಿಗೆ ತಕ್ಕ ಗೌರವ ಸಿಕ್ಕಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಾಯಿ ಸ್ಥಾನದಲ್ಲಿದ್ದು ಎಲ್ಲಾರನ್ನು ಸಮಾನವಾಗಿ ನೊಡಬೇಕು. ಆದರೆ, ಖಾತೆ ಹಂಚಿಕೆ ಆ ರೀತಿಯಲ್ಲಿ ನಡೆದಿಲ್ಲ” ಎಂದು ಹೇಳಿದರು.

“ಖಾತೆ ಹಂಚಿಕೆ ಸಮತೋಲನದಿಂದ ಆಗಬೇಕಿತ್ತು. ಹಿರಿಯತೆ ಪರಿಗಣಿಸಬೇಕಿತ್ತು. ಅದನ್ನು ಗಮನಿಸಿಲ್ಲ. ಇದೇ ರೀತಿ ಮುಂದುವರಿದರೆ 2028ರ ಚುನಾವಣೆಯಲ್ಲಿ ಪಕ್ಷಕ್ಕೆ ತೊಂದರೆಯಾಗಬಹುದು” ಎಂದು ಅವರು ಎಚ್ಚರಿಕೆ ನೀಡಿದರು.

ತಾವು ಈಗಾಗಲೇ ಮೂರು ವರ್ಷಗಳಿಂದ ಆಹಾರ ಇಲಾಖೆಯನ್ನು ನಿರ್ವಹಿಸುತ್ತಿದ್ದು, ಸಮಾಜ ಕಲ್ಯಾಣ ಅಥವಾ ಕೃಷಿ ಇಲಾಖೆಯಂತಹ ಜನಸೇವೆಗೆ ಹೆಚ್ಚು ಅವಕಾಶವಿರುವ ಖಾತೆಯನ್ನು ನೀಡುವಂತೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.

ಈ ಕುರಿತು ತಾವು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಎಲ್ಲ ಸಚಿವರನ್ನು ಸಮಾನವಾಗಿ ಪರಿಗಣಿಸುವಂತೆ ಮನವಿ ಮಾಡಿರುವುದಾಗಿ ಮುನಿಯಪ್ಪ ಹೇಳಿದರು.

ಪ್ರೊಟೊಕಾಲ್ ಪ್ರಕಾರ ಹಿರಿತನದ ಆಧಾರದ ಮೇಲೆ ಸಮಾಜಕ್ಕೆ ಉಪಯೋಗವಾಗುವ ಖಾತೆಗಳ ಹಂಚಿಕೆ ಆಗಬೇಕಿತ್ತು‌. ಈ ಬಗ್ಗೆ ಗೊಂದಲ ಉಂಟಾಗದಂತೆ ಪಕ್ಷದ ನಾಯಕತ್ವ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂಬ ನಂಬಿಕೆ ಇದೆ” ಎಂದು ಅವರು ಆಶಾಭಾವ ವ್ಯಕ್ತಪಡಿಸಿದರು.

ಸಚಿವ ಮುನಿಯಪ್ಪ ಅವರ ಈ ಹೇಳಿಕೆ ಕಾಂಗ್ರೆಸ್ ಸರ್ಕಾರದ ಖಾತೆ ಹಂಚಿಕೆ ವಿಚಾರದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಈ ಬೆಳವಣಿಗೆ ರಾಜಕೀಯವಾಗಿ ಮಹತ್ವ ಪಡೆಯುವ ಸಾಧ್ಯತೆ ಇದೆ.

Ramesh Babu

Journalist

Recent Posts

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

1 hour ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

11 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

12 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

21 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

3 days ago