ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ ಪಡೆದ ಭೂ ಮಾಪಕರು ಮಂಗಳವಾರ ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಭೂ ಮಾಪಕ ರಾಜಶೇಖರ್, ಕಳೆದ ಫೆಬ್ರವರಿ 20ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಂಡಿದ್ದೇವೆ. ಈವರೆಗೂ ಸರ್ಕಾರದ ಸಚಿವರಾಗಲಿ, ಅಧಿಕಾರಿಗಳಾಗಲಿ ಕನಿಷ್ಠ ಸೌಜನ್ಯಕ್ಕೂ ನಮ್ಮನ್ನ ಕರೆದು ಮಾತನಾಡಿಲ್ಲ. ಹಾಲಿ ಸಿಎಂ ಸಿದ್ದರಾಮಯ್ಯ ವಿರೋಧ ಪಕ್ಷದಲ್ಲಿದ್ದ ಸಮಯದಲ್ಲಿ ನಮ್ಮ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು. ಇದೀಗ ತಾವೇ ಸಿಎಂ ಆಗಿದ್ದರೂ ನಮ್ಮ ಸಮಸ್ಯೆಗಳನ್ನು ಕೇಳುತ್ತಿಲ್ಲ. ಕಂದಾಯ ಸಚಿವ ಕೃಷ್ಣಬೈರೇಗೌಡರು ನೀಡಿದ್ದ ಭರಸವೆ ಹುಸಿಯಾಗಿದೆ. ತಾಲ್ಲೂಕಿನಲ್ಲಿ 38 ಮಂದಿ ಸರ್ಕಾರಿ ಪರವಾನಗಿ ಪಡೆದ ಭೂ ಮಾಪಕರಿದ್ದೇವೆ. ನಮಗೆ ಯಾವುದೇ ಕೆಲಸದ ಭದ್ರತೆ ಇಲ್ಲ. ಜೀವನ ನಿರ್ವಹಣೆ ಸಂಕಷ್ಟಕರವಾಗಿದೆ. ಇಲಾಖೆ ಸೂಚಿಸಿದ ಎಲ್ಲಾ ಕೆಲಸಗಳನ್ನು ಮಾಡುತ್ತೇವೆ. ಆದರೆ ನಮಗೆ ಯಾವುದೇ ಪ್ರಯೋಜನವಿಲ್ಲದಂತಾಗಿದೆ ಆಕ್ರೋಶ ಹೊರಹಾಕಿದರು.
ಮತ್ತೋರ್ವ ಭೂಮಾಪಕ ಕಾಂತರಾಜು ಮಾತನಾಡಿ, ನಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಹೈಕೋರ್ಟ್ ಕೂಡ ಸರ್ಕಾರಕ್ಕೆ ಸೂಚನೆ ನೀಡಿದೆ. ಸರ್ಕಾರದ ಪರವಾನಗಿ ಪಡೆದು 2002 ರಿಂದಲೂ ಸೇವೆ ಸಲ್ಲಿಸುತ್ತಿರುವ 6 ಸಾವಿರಕ್ಕೂ ಹೆಚ್ಚು ಭೂ ಮಾಪಕರಿಗೆ ಸೇವಾ ಭದ್ರತೆ ಇಲ್ಲ. ಸರ್ಕಾರಿ ಭೂ ಮಾಪಕರಂತೆ ಸಮಾನ ಕೆಲಸ ಮಾಡುತ್ತಿರುವ ನಮಗೆ ಸಮಾನ ವೇತನ ನೀಡಬೇಕು. ಜೊತೆಗೆ ಸೇವೆ ಖಾಯಂ ಮಾಡಬೇಕು ಎಂದು ಒತ್ತಾಯಿಸಿದರು.
ರೈತ ಕೆಸ್ತೂರು ರಮೇಶ್ ಮಾತನಾಡಿ, ಜಮೀನು ಸರ್ವೇಗೆ ಬೇಸಿಗೆ ಸೂಕ್ತ ಕಾಲ. ಉಳಿದ ಸಮಯದಲ್ಲಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ಬೇಸಿಗೆಯಲ್ಲಿ ಒಂದಷ್ಟು ಬಿಡುವಿನಲ್ಲಿ ಇರುತ್ತಾರೆ. ಭೂಮಿ ಅಳತೆ, ಪರಿವರ್ತನೆಗೆ ಇದು ಒಳ್ಳೆಯ ಸಮಯ. ಇಂತಹ ವೇಳೆಯಲ್ಲಿಯೇ ಭೂಮಾಪಕರು ಸಿಗುತ್ತಿಲ್ಲ. ಇದು ಕೃಷಿ ಜತೆಗೆ ಇತರೆ ವಲಯಗಳಿಗೂ ಪೆಟ್ಟು ಕೊಟ್ಟಿದೆ. ಇವತ್ತು, ನಾಳೆ ಎನ್ನುತ್ತಾ ಸಮಯ ಮುಂದೂಡುವುದು ಸರಿಯಲ್ಲ. ಖಾಸಗಿಯವರನ್ನು ಕರೆದು ಸಮೀಕ್ಷೆ ಮಾಡಿಸಲು ಆಗುವುದಿಲ್ಲ. ಪ್ರತಿಯೊಂದು ಕೆಲಸಕ್ಕೂ ಭೂಮಾಪಕರ ಅಗತ್ಯ ಇದೆ. ಅವರು ಜಾಗ ಗುರುತಿಸಿದರೆ ಮುಂದಿನ ಕಾರ್ಯ ನಡೆಯುತ್ತದೆ. ಇಲ್ಲದಿದ್ದರೆ ಎಲ್ಲವೂ ಸ್ಥಗಿತಗೊಳ್ಳುತ್ತದೆ. ಸರ್ಕಾರ ಇದನ್ನು ಅರಿತು ಒಂದು ನಿರ್ಧಾರ ಕೈಗೊಳ್ಳಬೇಕು. ನಮ್ಮ ತಾಲ್ಲೂಕಿನಲ್ಲಿ ಜಮೀನಿನ ಹದ್ದುಬಸ್ತು, ಪೋಡಿ, 11 ಇ ಸ್ಕೆಚ್, ಭೂ ಪರಿವರ್ತನೆ ಒಳಗೊಂಡಂತೆ ಒಟ್ಟು 9 ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಾಕಿ ಇವೆ. ಭೂ ಮಾಪಕರು ಸಂಪೂರ್ಣವಾಗಿ ಕೆಲಸ ನಿಲ್ಲಿಸಿದ್ದು, ಭೂಮಿ ಖರೀದಿ ಮತ್ತು ಮಾರಾಟಕ್ಕೆ ಸಹ ತೊಡಕಾಗಿದೆ. ಪ್ರತಿಯೊಂದು ಕೆಲಸಕ್ಕೆ 11 ಇ ಅನಿವಾರ್ಯವಾಗಿದೆ. ಹೀಗಾಗಿ ರೈತರ ಯಾವುದೇ ಕೆಲಸ ಸಕಾಲಕ್ಕೆ ಆಗುತ್ತಿಲ್ಲ ಎಂದರು.
ಈ ವೇಳೆ ಭೂ ಮಾಪಕರಾದ ರಾಜಶೇಖರ್, ಕಾಂತರಾಜು, ಮಂಜುನಾಥ, ಜಯಶಂಕರ್, ಪ್ರಸಾದ್ , ಗುರುರಾಜು, ನರಸಿಂಹಮೂರ್ತಿ, ವಾಸು ಸೇರಿದಂತೆ ಇತರರು ಇದ್ದರು.
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…
ಬಸವಣ್ಣನವರ ಆದರ್ಶಗಳನ್ನು ಪಾಲಿಸಿದ ಡಾ.ಸಿದ್ಧರಾಮ ಶರಣರು 2025-26ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದು, ಅವರಿಗೆ ಅಭಿನಂದನೆಗಳು ಎಂದು…