ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ ಪಡೆದ ಭೂ ಮಾಪಕರು ಮಂಗಳವಾರ ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಭೂ ಮಾಪಕ ರಾಜಶೇಖರ್, ಕಳೆದ ಫೆಬ್ರವರಿ 20ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಂಡಿದ್ದೇವೆ. ಈವರೆಗೂ ಸರ್ಕಾರದ ಸಚಿವರಾಗಲಿ, ಅಧಿಕಾರಿಗಳಾಗಲಿ ಕನಿಷ್ಠ ಸೌಜನ್ಯಕ್ಕೂ ನಮ್ಮನ್ನ ಕರೆದು ಮಾತನಾಡಿಲ್ಲ. ಹಾಲಿ ಸಿಎಂ ಸಿದ್ದರಾಮಯ್ಯ ವಿರೋಧ ಪಕ್ಷದಲ್ಲಿದ್ದ ಸಮಯದಲ್ಲಿ ನಮ್ಮ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು. ಇದೀಗ ತಾವೇ ಸಿಎಂ ಆಗಿದ್ದರೂ ನಮ್ಮ ಸಮಸ್ಯೆಗಳನ್ನು ಕೇಳುತ್ತಿಲ್ಲ. ಕಂದಾಯ ಸಚಿವ ಕೃಷ್ಣಬೈರೇಗೌಡರು ನೀಡಿದ್ದ ಭರಸವೆ ಹುಸಿಯಾಗಿದೆ. ತಾಲ್ಲೂಕಿನಲ್ಲಿ 38 ಮಂದಿ ಸರ್ಕಾರಿ ಪರವಾನಗಿ ಪಡೆದ ಭೂ ಮಾಪಕರಿದ್ದೇವೆ. ನಮಗೆ ಯಾವುದೇ ಕೆಲಸದ ಭದ್ರತೆ ಇಲ್ಲ. ಜೀವನ ನಿರ್ವಹಣೆ ಸಂಕಷ್ಟಕರವಾಗಿದೆ. ಇಲಾಖೆ ಸೂಚಿಸಿದ ಎಲ್ಲಾ ಕೆಲಸಗಳನ್ನು ಮಾಡುತ್ತೇವೆ. ಆದರೆ ನಮಗೆ ಯಾವುದೇ ಪ್ರಯೋಜನವಿಲ್ಲದಂತಾಗಿದೆ ಆಕ್ರೋಶ ಹೊರಹಾಕಿದರು.

ಮತ್ತೋರ್ವ ಭೂಮಾಪಕ ಕಾಂತರಾಜು ಮಾತನಾಡಿ, ನಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಹೈಕೋರ್ಟ್ ಕೂಡ ಸರ್ಕಾರಕ್ಕೆ ಸೂಚನೆ ನೀಡಿದೆ. ಸರ್ಕಾರದ ಪರವಾನಗಿ ಪಡೆದು 2002 ರಿಂದಲೂ ಸೇವೆ ಸಲ್ಲಿಸುತ್ತಿರುವ 6 ಸಾವಿರಕ್ಕೂ ಹೆಚ್ಚು ಭೂ ಮಾಪಕರಿಗೆ ಸೇವಾ ಭದ್ರತೆ ಇಲ್ಲ. ಸರ್ಕಾರಿ ಭೂ ಮಾಪಕರಂತೆ ಸಮಾನ ಕೆಲಸ ಮಾಡುತ್ತಿರುವ ನಮಗೆ ಸಮಾನ ವೇತನ ನೀಡಬೇಕು. ಜೊತೆಗೆ ಸೇವೆ ಖಾಯಂ ಮಾಡಬೇಕು ಎಂದು ಒತ್ತಾಯಿಸಿದರು.

ರೈತ ಕೆಸ್ತೂರು ರಮೇಶ್ ಮಾತನಾಡಿ, ಜಮೀನು ಸರ್ವೇಗೆ ಬೇಸಿಗೆ ಸೂಕ್ತ ಕಾಲ. ಉಳಿದ ಸಮಯದಲ್ಲಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ಬೇಸಿಗೆಯಲ್ಲಿ ಒಂದಷ್ಟು ಬಿಡುವಿನಲ್ಲಿ ಇರುತ್ತಾರೆ. ಭೂಮಿ ಅಳತೆ, ಪರಿವರ್ತನೆಗೆ ಇದು ಒಳ್ಳೆಯ ಸಮಯ. ಇಂತಹ ವೇಳೆಯಲ್ಲಿಯೇ ಭೂಮಾಪಕರು ಸಿಗುತ್ತಿಲ್ಲ. ಇದು ಕೃಷಿ ಜತೆಗೆ ಇತರೆ ವಲಯಗಳಿಗೂ ಪೆಟ್ಟು ಕೊಟ್ಟಿದೆ. ಇವತ್ತು, ನಾಳೆ ಎನ್ನುತ್ತಾ ಸಮಯ ಮುಂದೂಡುವುದು ಸರಿಯಲ್ಲ. ಖಾಸಗಿಯವರನ್ನು ಕರೆದು ಸಮೀಕ್ಷೆ ಮಾಡಿಸಲು ಆಗುವುದಿಲ್ಲ. ಪ್ರತಿಯೊಂದು ಕೆಲಸಕ್ಕೂ ಭೂಮಾಪಕರ ಅಗತ್ಯ ಇದೆ. ಅವರು ಜಾಗ ಗುರುತಿಸಿದರೆ ಮುಂದಿನ ಕಾರ್ಯ ನಡೆಯುತ್ತದೆ. ಇಲ್ಲದಿದ್ದರೆ ಎಲ್ಲವೂ ಸ್ಥಗಿತಗೊಳ್ಳುತ್ತದೆ. ಸರ್ಕಾರ ಇದನ್ನು ಅರಿತು ಒಂದು ನಿರ್ಧಾರ ಕೈಗೊಳ್ಳಬೇಕು. ನಮ್ಮ ತಾಲ್ಲೂಕಿನಲ್ಲಿ ಜಮೀನಿನ ಹದ್ದುಬಸ್ತು, ಪೋಡಿ, 11 ಇ ಸ್ಕೆಚ್, ಭೂ ಪರಿವರ್ತನೆ ಒಳಗೊಂಡಂತೆ ಒಟ್ಟು 9 ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಾಕಿ ಇವೆ. ಭೂ ಮಾಪಕರು ಸಂಪೂರ್ಣವಾಗಿ ಕೆಲಸ ನಿಲ್ಲಿಸಿದ್ದು, ಭೂಮಿ ಖರೀದಿ ಮತ್ತು ಮಾರಾಟಕ್ಕೆ ಸಹ ತೊಡಕಾಗಿದೆ. ಪ್ರತಿಯೊಂದು ಕೆಲಸಕ್ಕೆ 11 ಇ ಅನಿವಾರ್ಯವಾಗಿದೆ. ಹೀಗಾಗಿ ರೈತರ ಯಾವುದೇ ಕೆಲಸ ಸಕಾಲಕ್ಕೆ ಆಗುತ್ತಿಲ್ಲ ಎಂದರು.

ಈ ವೇಳೆ ಭೂ ಮಾಪಕರಾದ ರಾಜಶೇಖರ್, ಕಾಂತರಾಜು, ಮಂಜುನಾಥ, ಜಯಶಂಕರ್, ಪ್ರಸಾದ್ , ಗುರುರಾಜು, ನರಸಿಂಹಮೂರ್ತಿ, ವಾಸು ಸೇರಿದಂತೆ ಇತರರು ಇದ್ದರು.

Ramesh Babu

Journalist

Recent Posts

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

6 minutes ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

38 minutes ago

ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ; ಚಾಲಕ ಸ್ಥಳದಲ್ಲೇ ಸಾವು ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಮುಂಜಾನೆ ದುರಂತ | ರಸ್ತೆಗೆ ಚೆಲ್ಲಾಪಿಲ್ಲಿಯಾದ ಸಿಮೆಂಟ್ ಮೂಟೆಗಳು

  ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…

4 hours ago

ಬಸ್ ಏರಿದ್ರೆ ಗಮ್ಯಸ್ಥಾನ ಸೇರುತ್ತೇವೆ ಅನ್ನೋ ಗ್ಯಾರಂಟಿ ಇಲ್ಲ!: ಗುಂಡಮ್ಮಗೆರೆ–ಹೊಸಹಳ್ಳಿ ಮಾರ್ಗದಲ್ಲಿ ಪದೇ ಪದೇ ಕೆಟ್ಟು ನಿಲ್ಲುವ ಸಾರಿಗೆ ಬಸ್‌ಗಳು

ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್‌ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…

4 hours ago

ಕೃಷ್ಣ ಜನ್ಮಾಷ್ಟಮಿಯ ನೆಪದಲ್ಲಿ ಒಂದಷ್ಟು ಚಿಂತನೆ……

ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…

7 hours ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ ರಾಜಶೇಖರ್ ಆಚಾರ್

  ಚಿಕ್ಕನಾಯಕನಹಳ್ಳಿ: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

17 hours ago