ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ ಪಡೆದ ಭೂ ಮಾಪಕರು ಮಂಗಳವಾರ ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಭೂ ಮಾಪಕ ರಾಜಶೇಖರ್, ಕಳೆದ ಫೆಬ್ರವರಿ 20ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಂಡಿದ್ದೇವೆ. ಈವರೆಗೂ ಸರ್ಕಾರದ ಸಚಿವರಾಗಲಿ, ಅಧಿಕಾರಿಗಳಾಗಲಿ ಕನಿಷ್ಠ ಸೌಜನ್ಯಕ್ಕೂ ನಮ್ಮನ್ನ ಕರೆದು ಮಾತನಾಡಿಲ್ಲ. ಹಾಲಿ ಸಿಎಂ ಸಿದ್ದರಾಮಯ್ಯ ವಿರೋಧ ಪಕ್ಷದಲ್ಲಿದ್ದ ಸಮಯದಲ್ಲಿ ನಮ್ಮ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು. ಇದೀಗ ತಾವೇ ಸಿಎಂ ಆಗಿದ್ದರೂ ನಮ್ಮ ಸಮಸ್ಯೆಗಳನ್ನು ಕೇಳುತ್ತಿಲ್ಲ. ಕಂದಾಯ ಸಚಿವ ಕೃಷ್ಣಬೈರೇಗೌಡರು ನೀಡಿದ್ದ ಭರಸವೆ ಹುಸಿಯಾಗಿದೆ. ತಾಲ್ಲೂಕಿನಲ್ಲಿ 38 ಮಂದಿ ಸರ್ಕಾರಿ ಪರವಾನಗಿ ಪಡೆದ ಭೂ ಮಾಪಕರಿದ್ದೇವೆ. ನಮಗೆ ಯಾವುದೇ ಕೆಲಸದ ಭದ್ರತೆ ಇಲ್ಲ. ಜೀವನ ನಿರ್ವಹಣೆ ಸಂಕಷ್ಟಕರವಾಗಿದೆ. ಇಲಾಖೆ ಸೂಚಿಸಿದ ಎಲ್ಲಾ ಕೆಲಸಗಳನ್ನು ಮಾಡುತ್ತೇವೆ. ಆದರೆ ನಮಗೆ ಯಾವುದೇ ಪ್ರಯೋಜನವಿಲ್ಲದಂತಾಗಿದೆ ಆಕ್ರೋಶ ಹೊರಹಾಕಿದರು.

ಮತ್ತೋರ್ವ ಭೂಮಾಪಕ ಕಾಂತರಾಜು ಮಾತನಾಡಿ, ನಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಹೈಕೋರ್ಟ್ ಕೂಡ ಸರ್ಕಾರಕ್ಕೆ ಸೂಚನೆ ನೀಡಿದೆ. ಸರ್ಕಾರದ ಪರವಾನಗಿ ಪಡೆದು 2002 ರಿಂದಲೂ ಸೇವೆ ಸಲ್ಲಿಸುತ್ತಿರುವ 6 ಸಾವಿರಕ್ಕೂ ಹೆಚ್ಚು ಭೂ ಮಾಪಕರಿಗೆ ಸೇವಾ ಭದ್ರತೆ ಇಲ್ಲ. ಸರ್ಕಾರಿ ಭೂ ಮಾಪಕರಂತೆ ಸಮಾನ ಕೆಲಸ ಮಾಡುತ್ತಿರುವ ನಮಗೆ ಸಮಾನ ವೇತನ ನೀಡಬೇಕು. ಜೊತೆಗೆ ಸೇವೆ ಖಾಯಂ ಮಾಡಬೇಕು ಎಂದು ಒತ್ತಾಯಿಸಿದರು.

ರೈತ ಕೆಸ್ತೂರು ರಮೇಶ್ ಮಾತನಾಡಿ, ಜಮೀನು ಸರ್ವೇಗೆ ಬೇಸಿಗೆ ಸೂಕ್ತ ಕಾಲ. ಉಳಿದ ಸಮಯದಲ್ಲಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ಬೇಸಿಗೆಯಲ್ಲಿ ಒಂದಷ್ಟು ಬಿಡುವಿನಲ್ಲಿ ಇರುತ್ತಾರೆ. ಭೂಮಿ ಅಳತೆ, ಪರಿವರ್ತನೆಗೆ ಇದು ಒಳ್ಳೆಯ ಸಮಯ. ಇಂತಹ ವೇಳೆಯಲ್ಲಿಯೇ ಭೂಮಾಪಕರು ಸಿಗುತ್ತಿಲ್ಲ. ಇದು ಕೃಷಿ ಜತೆಗೆ ಇತರೆ ವಲಯಗಳಿಗೂ ಪೆಟ್ಟು ಕೊಟ್ಟಿದೆ. ಇವತ್ತು, ನಾಳೆ ಎನ್ನುತ್ತಾ ಸಮಯ ಮುಂದೂಡುವುದು ಸರಿಯಲ್ಲ. ಖಾಸಗಿಯವರನ್ನು ಕರೆದು ಸಮೀಕ್ಷೆ ಮಾಡಿಸಲು ಆಗುವುದಿಲ್ಲ. ಪ್ರತಿಯೊಂದು ಕೆಲಸಕ್ಕೂ ಭೂಮಾಪಕರ ಅಗತ್ಯ ಇದೆ. ಅವರು ಜಾಗ ಗುರುತಿಸಿದರೆ ಮುಂದಿನ ಕಾರ್ಯ ನಡೆಯುತ್ತದೆ. ಇಲ್ಲದಿದ್ದರೆ ಎಲ್ಲವೂ ಸ್ಥಗಿತಗೊಳ್ಳುತ್ತದೆ. ಸರ್ಕಾರ ಇದನ್ನು ಅರಿತು ಒಂದು ನಿರ್ಧಾರ ಕೈಗೊಳ್ಳಬೇಕು. ನಮ್ಮ ತಾಲ್ಲೂಕಿನಲ್ಲಿ ಜಮೀನಿನ ಹದ್ದುಬಸ್ತು, ಪೋಡಿ, 11 ಇ ಸ್ಕೆಚ್, ಭೂ ಪರಿವರ್ತನೆ ಒಳಗೊಂಡಂತೆ ಒಟ್ಟು 9 ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಾಕಿ ಇವೆ. ಭೂ ಮಾಪಕರು ಸಂಪೂರ್ಣವಾಗಿ ಕೆಲಸ ನಿಲ್ಲಿಸಿದ್ದು, ಭೂಮಿ ಖರೀದಿ ಮತ್ತು ಮಾರಾಟಕ್ಕೆ ಸಹ ತೊಡಕಾಗಿದೆ. ಪ್ರತಿಯೊಂದು ಕೆಲಸಕ್ಕೆ 11 ಇ ಅನಿವಾರ್ಯವಾಗಿದೆ. ಹೀಗಾಗಿ ರೈತರ ಯಾವುದೇ ಕೆಲಸ ಸಕಾಲಕ್ಕೆ ಆಗುತ್ತಿಲ್ಲ ಎಂದರು.

ಈ ವೇಳೆ ಭೂ ಮಾಪಕರಾದ ರಾಜಶೇಖರ್, ಕಾಂತರಾಜು, ಮಂಜುನಾಥ, ಜಯಶಂಕರ್, ಪ್ರಸಾದ್ , ಗುರುರಾಜು, ನರಸಿಂಹಮೂರ್ತಿ, ವಾಸು ಸೇರಿದಂತೆ ಇತರರು ಇದ್ದರು.

Ramesh Babu

Journalist

Recent Posts

ನಗರಸಭೆ ಅಧ್ಯಕ್ಷರಾಗಿ ಪ್ರಭ ನಾಗರಾಜ್ ಆಯ್ಕೆ: ಗಣ್ಯರಿಂದ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ನೂತನ ಅಧ್ಯಕ್ಷರಾಗಿ ಪ್ರಭ ನಾಗರಾಜ್ ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಪ್ರಭ ನಾಗರಾಜ್ ಅವರಿಗೆ ಗಣ್ಯರು…

2 hours ago

ಸಂಬಂಧಗಳ ಬಲೆಯೊಳಗೆ….

ಸಂಬಂಧಗಳ ಬಲೆಯೊಳಗೆ.... ಪೂರ್ವ ನಿರ್ಧಾರಿತ ಬಂಧನದಲ್ಲಿ.... ಒಂದು ನಿಗದಿತ ವ್ಯವಸ್ಥೆಯ ಜೈಲಿನಲ್ಲಿ.... ಹಿಂದಿನವರ ಅನುಭವದ ಗೋಡೆಗಳೊಳಗೆ..... ಹುಟ್ಟುತ್ತಾ ವಿಶ್ವಮಾನವರು, ಬೆಳೆಯುತ್ತಾ......…

10 hours ago

ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ತಪಾಸಣೆ ಬಳಿಕ ಹುಸಿ ಕರೆ ಎಂದು ಸ್ಪಷ್ಟ

ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್‌ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…

1 day ago

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

2 days ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

3 days ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

3 days ago