ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ ಪಡೆದ ಭೂ ಮಾಪಕರು ಮಂಗಳವಾರ ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಭೂ ಮಾಪಕ ರಾಜಶೇಖರ್, ಕಳೆದ ಫೆಬ್ರವರಿ 20ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಂಡಿದ್ದೇವೆ. ಈವರೆಗೂ ಸರ್ಕಾರದ ಸಚಿವರಾಗಲಿ, ಅಧಿಕಾರಿಗಳಾಗಲಿ ಕನಿಷ್ಠ ಸೌಜನ್ಯಕ್ಕೂ ನಮ್ಮನ್ನ ಕರೆದು ಮಾತನಾಡಿಲ್ಲ. ಹಾಲಿ ಸಿಎಂ ಸಿದ್ದರಾಮಯ್ಯ ವಿರೋಧ ಪಕ್ಷದಲ್ಲಿದ್ದ ಸಮಯದಲ್ಲಿ ನಮ್ಮ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು. ಇದೀಗ ತಾವೇ ಸಿಎಂ ಆಗಿದ್ದರೂ ನಮ್ಮ ಸಮಸ್ಯೆಗಳನ್ನು ಕೇಳುತ್ತಿಲ್ಲ. ಕಂದಾಯ ಸಚಿವ ಕೃಷ್ಣಬೈರೇಗೌಡರು ನೀಡಿದ್ದ ಭರಸವೆ ಹುಸಿಯಾಗಿದೆ. ತಾಲ್ಲೂಕಿನಲ್ಲಿ 38 ಮಂದಿ ಸರ್ಕಾರಿ ಪರವಾನಗಿ ಪಡೆದ ಭೂ ಮಾಪಕರಿದ್ದೇವೆ. ನಮಗೆ ಯಾವುದೇ ಕೆಲಸದ ಭದ್ರತೆ ಇಲ್ಲ. ಜೀವನ ನಿರ್ವಹಣೆ ಸಂಕಷ್ಟಕರವಾಗಿದೆ. ಇಲಾಖೆ ಸೂಚಿಸಿದ ಎಲ್ಲಾ ಕೆಲಸಗಳನ್ನು ಮಾಡುತ್ತೇವೆ. ಆದರೆ ನಮಗೆ ಯಾವುದೇ ಪ್ರಯೋಜನವಿಲ್ಲದಂತಾಗಿದೆ ಆಕ್ರೋಶ ಹೊರಹಾಕಿದರು.

ಮತ್ತೋರ್ವ ಭೂಮಾಪಕ ಕಾಂತರಾಜು ಮಾತನಾಡಿ, ನಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಹೈಕೋರ್ಟ್ ಕೂಡ ಸರ್ಕಾರಕ್ಕೆ ಸೂಚನೆ ನೀಡಿದೆ. ಸರ್ಕಾರದ ಪರವಾನಗಿ ಪಡೆದು 2002 ರಿಂದಲೂ ಸೇವೆ ಸಲ್ಲಿಸುತ್ತಿರುವ 6 ಸಾವಿರಕ್ಕೂ ಹೆಚ್ಚು ಭೂ ಮಾಪಕರಿಗೆ ಸೇವಾ ಭದ್ರತೆ ಇಲ್ಲ. ಸರ್ಕಾರಿ ಭೂ ಮಾಪಕರಂತೆ ಸಮಾನ ಕೆಲಸ ಮಾಡುತ್ತಿರುವ ನಮಗೆ ಸಮಾನ ವೇತನ ನೀಡಬೇಕು. ಜೊತೆಗೆ ಸೇವೆ ಖಾಯಂ ಮಾಡಬೇಕು ಎಂದು ಒತ್ತಾಯಿಸಿದರು.

ರೈತ ಕೆಸ್ತೂರು ರಮೇಶ್ ಮಾತನಾಡಿ, ಜಮೀನು ಸರ್ವೇಗೆ ಬೇಸಿಗೆ ಸೂಕ್ತ ಕಾಲ. ಉಳಿದ ಸಮಯದಲ್ಲಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ಬೇಸಿಗೆಯಲ್ಲಿ ಒಂದಷ್ಟು ಬಿಡುವಿನಲ್ಲಿ ಇರುತ್ತಾರೆ. ಭೂಮಿ ಅಳತೆ, ಪರಿವರ್ತನೆಗೆ ಇದು ಒಳ್ಳೆಯ ಸಮಯ. ಇಂತಹ ವೇಳೆಯಲ್ಲಿಯೇ ಭೂಮಾಪಕರು ಸಿಗುತ್ತಿಲ್ಲ. ಇದು ಕೃಷಿ ಜತೆಗೆ ಇತರೆ ವಲಯಗಳಿಗೂ ಪೆಟ್ಟು ಕೊಟ್ಟಿದೆ. ಇವತ್ತು, ನಾಳೆ ಎನ್ನುತ್ತಾ ಸಮಯ ಮುಂದೂಡುವುದು ಸರಿಯಲ್ಲ. ಖಾಸಗಿಯವರನ್ನು ಕರೆದು ಸಮೀಕ್ಷೆ ಮಾಡಿಸಲು ಆಗುವುದಿಲ್ಲ. ಪ್ರತಿಯೊಂದು ಕೆಲಸಕ್ಕೂ ಭೂಮಾಪಕರ ಅಗತ್ಯ ಇದೆ. ಅವರು ಜಾಗ ಗುರುತಿಸಿದರೆ ಮುಂದಿನ ಕಾರ್ಯ ನಡೆಯುತ್ತದೆ. ಇಲ್ಲದಿದ್ದರೆ ಎಲ್ಲವೂ ಸ್ಥಗಿತಗೊಳ್ಳುತ್ತದೆ. ಸರ್ಕಾರ ಇದನ್ನು ಅರಿತು ಒಂದು ನಿರ್ಧಾರ ಕೈಗೊಳ್ಳಬೇಕು. ನಮ್ಮ ತಾಲ್ಲೂಕಿನಲ್ಲಿ ಜಮೀನಿನ ಹದ್ದುಬಸ್ತು, ಪೋಡಿ, 11 ಇ ಸ್ಕೆಚ್, ಭೂ ಪರಿವರ್ತನೆ ಒಳಗೊಂಡಂತೆ ಒಟ್ಟು 9 ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಾಕಿ ಇವೆ. ಭೂ ಮಾಪಕರು ಸಂಪೂರ್ಣವಾಗಿ ಕೆಲಸ ನಿಲ್ಲಿಸಿದ್ದು, ಭೂಮಿ ಖರೀದಿ ಮತ್ತು ಮಾರಾಟಕ್ಕೆ ಸಹ ತೊಡಕಾಗಿದೆ. ಪ್ರತಿಯೊಂದು ಕೆಲಸಕ್ಕೆ 11 ಇ ಅನಿವಾರ್ಯವಾಗಿದೆ. ಹೀಗಾಗಿ ರೈತರ ಯಾವುದೇ ಕೆಲಸ ಸಕಾಲಕ್ಕೆ ಆಗುತ್ತಿಲ್ಲ ಎಂದರು.

ಈ ವೇಳೆ ಭೂ ಮಾಪಕರಾದ ರಾಜಶೇಖರ್, ಕಾಂತರಾಜು, ಮಂಜುನಾಥ, ಜಯಶಂಕರ್, ಪ್ರಸಾದ್ , ಗುರುರಾಜು, ನರಸಿಂಹಮೂರ್ತಿ, ವಾಸು ಸೇರಿದಂತೆ ಇತರರು ಇದ್ದರು.

Ramesh Babu

Journalist

Recent Posts

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

2 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

4 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

5 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

9 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

20 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

20 hours ago