ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ ಪಡೆದ ಭೂ ಮಾಪಕರು ಮಂಗಳವಾರ ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಭೂ ಮಾಪಕ ರಾಜಶೇಖರ್, ಕಳೆದ ಫೆಬ್ರವರಿ 20ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಂಡಿದ್ದೇವೆ. ಈವರೆಗೂ ಸರ್ಕಾರದ ಸಚಿವರಾಗಲಿ, ಅಧಿಕಾರಿಗಳಾಗಲಿ ಕನಿಷ್ಠ ಸೌಜನ್ಯಕ್ಕೂ ನಮ್ಮನ್ನ ಕರೆದು ಮಾತನಾಡಿಲ್ಲ. ಹಾಲಿ ಸಿಎಂ ಸಿದ್ದರಾಮಯ್ಯ ವಿರೋಧ ಪಕ್ಷದಲ್ಲಿದ್ದ ಸಮಯದಲ್ಲಿ ನಮ್ಮ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು. ಇದೀಗ ತಾವೇ ಸಿಎಂ ಆಗಿದ್ದರೂ ನಮ್ಮ ಸಮಸ್ಯೆಗಳನ್ನು ಕೇಳುತ್ತಿಲ್ಲ. ಕಂದಾಯ ಸಚಿವ ಕೃಷ್ಣಬೈರೇಗೌಡರು ನೀಡಿದ್ದ ಭರಸವೆ ಹುಸಿಯಾಗಿದೆ. ತಾಲ್ಲೂಕಿನಲ್ಲಿ 38 ಮಂದಿ ಸರ್ಕಾರಿ ಪರವಾನಗಿ ಪಡೆದ ಭೂ ಮಾಪಕರಿದ್ದೇವೆ. ನಮಗೆ ಯಾವುದೇ ಕೆಲಸದ ಭದ್ರತೆ ಇಲ್ಲ. ಜೀವನ ನಿರ್ವಹಣೆ ಸಂಕಷ್ಟಕರವಾಗಿದೆ. ಇಲಾಖೆ ಸೂಚಿಸಿದ ಎಲ್ಲಾ ಕೆಲಸಗಳನ್ನು ಮಾಡುತ್ತೇವೆ. ಆದರೆ ನಮಗೆ ಯಾವುದೇ ಪ್ರಯೋಜನವಿಲ್ಲದಂತಾಗಿದೆ ಆಕ್ರೋಶ ಹೊರಹಾಕಿದರು.

ಮತ್ತೋರ್ವ ಭೂಮಾಪಕ ಕಾಂತರಾಜು ಮಾತನಾಡಿ, ನಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಹೈಕೋರ್ಟ್ ಕೂಡ ಸರ್ಕಾರಕ್ಕೆ ಸೂಚನೆ ನೀಡಿದೆ. ಸರ್ಕಾರದ ಪರವಾನಗಿ ಪಡೆದು 2002 ರಿಂದಲೂ ಸೇವೆ ಸಲ್ಲಿಸುತ್ತಿರುವ 6 ಸಾವಿರಕ್ಕೂ ಹೆಚ್ಚು ಭೂ ಮಾಪಕರಿಗೆ ಸೇವಾ ಭದ್ರತೆ ಇಲ್ಲ. ಸರ್ಕಾರಿ ಭೂ ಮಾಪಕರಂತೆ ಸಮಾನ ಕೆಲಸ ಮಾಡುತ್ತಿರುವ ನಮಗೆ ಸಮಾನ ವೇತನ ನೀಡಬೇಕು. ಜೊತೆಗೆ ಸೇವೆ ಖಾಯಂ ಮಾಡಬೇಕು ಎಂದು ಒತ್ತಾಯಿಸಿದರು.

ರೈತ ಕೆಸ್ತೂರು ರಮೇಶ್ ಮಾತನಾಡಿ, ಜಮೀನು ಸರ್ವೇಗೆ ಬೇಸಿಗೆ ಸೂಕ್ತ ಕಾಲ. ಉಳಿದ ಸಮಯದಲ್ಲಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ಬೇಸಿಗೆಯಲ್ಲಿ ಒಂದಷ್ಟು ಬಿಡುವಿನಲ್ಲಿ ಇರುತ್ತಾರೆ. ಭೂಮಿ ಅಳತೆ, ಪರಿವರ್ತನೆಗೆ ಇದು ಒಳ್ಳೆಯ ಸಮಯ. ಇಂತಹ ವೇಳೆಯಲ್ಲಿಯೇ ಭೂಮಾಪಕರು ಸಿಗುತ್ತಿಲ್ಲ. ಇದು ಕೃಷಿ ಜತೆಗೆ ಇತರೆ ವಲಯಗಳಿಗೂ ಪೆಟ್ಟು ಕೊಟ್ಟಿದೆ. ಇವತ್ತು, ನಾಳೆ ಎನ್ನುತ್ತಾ ಸಮಯ ಮುಂದೂಡುವುದು ಸರಿಯಲ್ಲ. ಖಾಸಗಿಯವರನ್ನು ಕರೆದು ಸಮೀಕ್ಷೆ ಮಾಡಿಸಲು ಆಗುವುದಿಲ್ಲ. ಪ್ರತಿಯೊಂದು ಕೆಲಸಕ್ಕೂ ಭೂಮಾಪಕರ ಅಗತ್ಯ ಇದೆ. ಅವರು ಜಾಗ ಗುರುತಿಸಿದರೆ ಮುಂದಿನ ಕಾರ್ಯ ನಡೆಯುತ್ತದೆ. ಇಲ್ಲದಿದ್ದರೆ ಎಲ್ಲವೂ ಸ್ಥಗಿತಗೊಳ್ಳುತ್ತದೆ. ಸರ್ಕಾರ ಇದನ್ನು ಅರಿತು ಒಂದು ನಿರ್ಧಾರ ಕೈಗೊಳ್ಳಬೇಕು. ನಮ್ಮ ತಾಲ್ಲೂಕಿನಲ್ಲಿ ಜಮೀನಿನ ಹದ್ದುಬಸ್ತು, ಪೋಡಿ, 11 ಇ ಸ್ಕೆಚ್, ಭೂ ಪರಿವರ್ತನೆ ಒಳಗೊಂಡಂತೆ ಒಟ್ಟು 9 ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಾಕಿ ಇವೆ. ಭೂ ಮಾಪಕರು ಸಂಪೂರ್ಣವಾಗಿ ಕೆಲಸ ನಿಲ್ಲಿಸಿದ್ದು, ಭೂಮಿ ಖರೀದಿ ಮತ್ತು ಮಾರಾಟಕ್ಕೆ ಸಹ ತೊಡಕಾಗಿದೆ. ಪ್ರತಿಯೊಂದು ಕೆಲಸಕ್ಕೆ 11 ಇ ಅನಿವಾರ್ಯವಾಗಿದೆ. ಹೀಗಾಗಿ ರೈತರ ಯಾವುದೇ ಕೆಲಸ ಸಕಾಲಕ್ಕೆ ಆಗುತ್ತಿಲ್ಲ ಎಂದರು.

ಈ ವೇಳೆ ಭೂ ಮಾಪಕರಾದ ರಾಜಶೇಖರ್, ಕಾಂತರಾಜು, ಮಂಜುನಾಥ, ಜಯಶಂಕರ್, ಪ್ರಸಾದ್ , ಗುರುರಾಜು, ನರಸಿಂಹಮೂರ್ತಿ, ವಾಸು ಸೇರಿದಂತೆ ಇತರರು ಇದ್ದರು.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

3 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

6 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

18 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

19 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

21 hours ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

23 hours ago