ಖಾಲಿಯಾಗಿದ್ದ ಸಿಲಿಂಡರ್ ಬದಲಾಯಿಸುವಾಗ ಅಜಾಗರೂಕತೆ: ಗ್ಯಾಸ್ ಲಿಕೇಜ್​ನಿಂದ ಹೊತ್ತಿ ಉರಿದ ಮನೆ: ಇಬ್ಬರು ಸಜೀವ ದಹನ

ಗ್ಯಾಸ್ ಲಿಕೇಜ್​ನಿಂದ ಮನೆ ಹೊತ್ತಿ ಉರಿದಿದ್ದು, ಇಬ್ಬರು ಸಜೀವದಹನವಾಗಿರುವಂತಹ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯಲ್ಲಿ ನಡೆದಿದೆ.

ನಾಗರಾಜ್(50) ಮತ್ತು ಶ್ರೀನಿವಾಸ್(50) ಮೃತ ದುರ್ದೈವಿಗಳು.

ಅಭಿಷೇಕ್, ಶಿವಶಂಕರ್, ಲಕ್ಷ್ಮೀದೇವಿ ಮತ್ತು ಬಸವ ಎಂಬುವವರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಂಗಯ್ಯ ಎಂಬುವವರಿಗೆ ಎರಡು ಬಾಡಿಗೆ ಮನೆಗಳು ಸೇರಿದ್ದು, ಬಳ್ಳಾರಿಯ ನಾಗರಾಜ್​ ಕುಟುಂಬ ಒಂದು ಮನೆಯಲ್ಲಿ ಬಾಡಿಗೆಗೆ ಇತ್ತು. ಬೆಳಗ್ಗೆ ಕೆಲಸಕ್ಕೆ ತೆರಳುವಾಗ ನಾಗರಾಜ್ ದೇವರ ಮುಂದೆ ದೀಪ ಹಚ್ಚಿದ್ದರು. ಈ ವೇಳೆ ಖಾಲಿಯಾಗಿದ್ದ ಸಿಲಿಂಡರ್ ಬದಲಾಯಿಸಲು ಮಗ ಅಭಿಷೇಕ್ ಮುಂದಾಗಿದ್ದ. ಅಜಾಗರೂಕತೆಯಿಂದ ಸಿಲಿಂಡರ್ ಫಿಟ್ ಮಾಡುತ್ತಿದ್ದ ವೇಳೆ ಗ್ಯಾಸ್ ಲೀಕ್ ಆಗಿ ದೀಪದ ಬೆಂಕಿ ತಗುಲಿದೆ. ಬೆಂಕಿಯ ತೀವ್ರತೆಗೆ ನಾಗರಾಜ್ ಹಾಗೂ ಶ್ರೀನಿವಾಸ್ ಮೃತಪಟ್ಟಿದ್ದಾರೆ.

ಮೂಲತಃ ಬಳ್ಳಾರಿಯವರಾಗಿರುವ ನಾಗರಾಜ್ ಕುಟುಂಬ ಎರಡು ವರ್ಷದ ಹಿಂದೆ ಬಾಡಿಗೆಗೆ ಬಂದಿದ್ದರು. ನಾಗರಾಜ್ ಪತ್ನಿ ಲಕ್ಷ್ಮಿ ದೇವಿ (35), ಮಕ್ಕಳಾದ ಬಸನಗೌಡ (19) ಅಭಿಷೇಕ್ ಗೌಡ (18) ವಾಸವಿದ್ದರು. ಮನೆ ಹೊತ್ತಿ ಉರಿದಾಗ ನಾಗರಾಜ್, ಲಕ್ಷ್ಮಿದೇವಿ, ಬಸವನಗೌಡ, ಅಭಿಷೇಕ್​ ಕೂಡ ಬೆಂಕಿಯಲ್ಲಿ ಸಿಲುಕಿದ್ದರು. ಈ ವೇಳೆ ಲಕ್ಷ್ಮಿದೇವಿ, ಬಸವನಗೌಡ ಮನೆಯಿಂದ ಓಡಿ ಬಂದಿದ್ದು, ನಾಗರಾಜ್ ಹಾಗೂ ಅಭಿ ಬೆಂಕಿಗೆ ಸಿಲುಕಿ ನರಳಾಡಿದ್ದಾರೆ.

ಈ ವೇಳೆ ಪಕ್ಕದ ಮನೆಯಲ್ಲಿದ್ದ ಶ್ರೀನಿವಾಸ್ ಹಾಗೂ ಮನೆ ಮಾಲೀಕ ಶಿವಶಂಕರ್ ಬೆಂಕಿ ಹಾರಿಸಲು ಮುಂದಾಗಿದ್ದರು. ಅಭಿಷೇಕ್​ನನ್ನು ಉಳಿಸಲು ಶ್ರೀನಿವಾಸ್ ಹೋಗಿದ್ದು, ಇತ್ತ ನಾಗರಾಜ್​ರನ್ನು ಉಳಿಸಲು ಹೋಗಿದ್ದ ಶಿವಶಂಕರ್​ಗೆ ಬೆಂಕಿ ತಗುಲಿದೆ. ಕೂಡಲೇ ಸ್ಥಳಿಯರು ಬೆಂಕಿ ತಗುಲಿದವರನ್ನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ.

Ramesh Babu

Journalist

Recent Posts

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚನೆ

‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…

8 hours ago

ಯೂರಿಯಾ ಅಕ್ರಮ ದಾಸ್ತಾನು ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ…18 ಲಕ್ಷ ಮೌಲ್ಯದ ಗೊಬ್ಬರ ವಶ..1296 ಮೂಟೆ ಯೂರಿಯಾ ವಶ…

ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…

9 hours ago

ಖಾಸಗಿ‌ ಕಂಪನಿ ಅವರಣದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಅಸ್ಥಿಪಂಜರ ಪತ್ತೆ

ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…

14 hours ago

ಲಾರಿ ಪಲ್ಟಿ, ರಸ್ತೆಗೆ ಚೆಲ್ಲಿದ ಡೀಸೆಲ್: 112 ಸಿಬ್ಬಂದಿ ಸಮಯಪ್ರಜ್ಞೆಗೆ ಶ್ಲಾಘನೆ

ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…

15 hours ago

ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ…!

ದೇವರಹಿಪ್ಪರಗಿ: ‍ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…

19 hours ago

ವಾಹನ ತಪಾಸಣ ಪೊಲೀಸರಿಗೆ ಹೆದರಿ ಜೀವ ಕಳೆದುಕೊಂಡ ಬೈಕ್ ಸವಾರ ಪತಿ….ಕಾಲುಗಳು ಮುರಿದು ಆಪರೇಷನ್ ರೂಮಿನಲ್ಲಿ  ಪತ್ನಿ….

ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…

20 hours ago