ಗ್ಯಾಸ್ ಲಿಕೇಜ್ನಿಂದ ಮನೆ ಹೊತ್ತಿ ಉರಿದಿದ್ದು, ಇಬ್ಬರು ಸಜೀವದಹನವಾಗಿರುವಂತಹ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯಲ್ಲಿ ನಡೆದಿದೆ.
ನಾಗರಾಜ್(50) ಮತ್ತು ಶ್ರೀನಿವಾಸ್(50) ಮೃತ ದುರ್ದೈವಿಗಳು.
ಅಭಿಷೇಕ್, ಶಿವಶಂಕರ್, ಲಕ್ಷ್ಮೀದೇವಿ ಮತ್ತು ಬಸವ ಎಂಬುವವರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಂಗಯ್ಯ ಎಂಬುವವರಿಗೆ ಎರಡು ಬಾಡಿಗೆ ಮನೆಗಳು ಸೇರಿದ್ದು, ಬಳ್ಳಾರಿಯ ನಾಗರಾಜ್ ಕುಟುಂಬ ಒಂದು ಮನೆಯಲ್ಲಿ ಬಾಡಿಗೆಗೆ ಇತ್ತು. ಬೆಳಗ್ಗೆ ಕೆಲಸಕ್ಕೆ ತೆರಳುವಾಗ ನಾಗರಾಜ್ ದೇವರ ಮುಂದೆ ದೀಪ ಹಚ್ಚಿದ್ದರು. ಈ ವೇಳೆ ಖಾಲಿಯಾಗಿದ್ದ ಸಿಲಿಂಡರ್ ಬದಲಾಯಿಸಲು ಮಗ ಅಭಿಷೇಕ್ ಮುಂದಾಗಿದ್ದ. ಅಜಾಗರೂಕತೆಯಿಂದ ಸಿಲಿಂಡರ್ ಫಿಟ್ ಮಾಡುತ್ತಿದ್ದ ವೇಳೆ ಗ್ಯಾಸ್ ಲೀಕ್ ಆಗಿ ದೀಪದ ಬೆಂಕಿ ತಗುಲಿದೆ. ಬೆಂಕಿಯ ತೀವ್ರತೆಗೆ ನಾಗರಾಜ್ ಹಾಗೂ ಶ್ರೀನಿವಾಸ್ ಮೃತಪಟ್ಟಿದ್ದಾರೆ.
ಮೂಲತಃ ಬಳ್ಳಾರಿಯವರಾಗಿರುವ ನಾಗರಾಜ್ ಕುಟುಂಬ ಎರಡು ವರ್ಷದ ಹಿಂದೆ ಬಾಡಿಗೆಗೆ ಬಂದಿದ್ದರು. ನಾಗರಾಜ್ ಪತ್ನಿ ಲಕ್ಷ್ಮಿ ದೇವಿ (35), ಮಕ್ಕಳಾದ ಬಸನಗೌಡ (19) ಅಭಿಷೇಕ್ ಗೌಡ (18) ವಾಸವಿದ್ದರು. ಮನೆ ಹೊತ್ತಿ ಉರಿದಾಗ ನಾಗರಾಜ್, ಲಕ್ಷ್ಮಿದೇವಿ, ಬಸವನಗೌಡ, ಅಭಿಷೇಕ್ ಕೂಡ ಬೆಂಕಿಯಲ್ಲಿ ಸಿಲುಕಿದ್ದರು. ಈ ವೇಳೆ ಲಕ್ಷ್ಮಿದೇವಿ, ಬಸವನಗೌಡ ಮನೆಯಿಂದ ಓಡಿ ಬಂದಿದ್ದು, ನಾಗರಾಜ್ ಹಾಗೂ ಅಭಿ ಬೆಂಕಿಗೆ ಸಿಲುಕಿ ನರಳಾಡಿದ್ದಾರೆ.
ಈ ವೇಳೆ ಪಕ್ಕದ ಮನೆಯಲ್ಲಿದ್ದ ಶ್ರೀನಿವಾಸ್ ಹಾಗೂ ಮನೆ ಮಾಲೀಕ ಶಿವಶಂಕರ್ ಬೆಂಕಿ ಹಾರಿಸಲು ಮುಂದಾಗಿದ್ದರು. ಅಭಿಷೇಕ್ನನ್ನು ಉಳಿಸಲು ಶ್ರೀನಿವಾಸ್ ಹೋಗಿದ್ದು, ಇತ್ತ ನಾಗರಾಜ್ರನ್ನು ಉಳಿಸಲು ಹೋಗಿದ್ದ ಶಿವಶಂಕರ್ಗೆ ಬೆಂಕಿ ತಗುಲಿದೆ. ಕೂಡಲೇ ಸ್ಥಳಿಯರು ಬೆಂಕಿ ತಗುಲಿದವರನ್ನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…