ಗ್ಯಾಸ್ ಲಿಕೇಜ್ನಿಂದ ಮನೆ ಹೊತ್ತಿ ಉರಿದಿದ್ದು, ಇಬ್ಬರು ಸಜೀವದಹನವಾಗಿರುವಂತಹ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯಲ್ಲಿ ನಡೆದಿದೆ.
ನಾಗರಾಜ್(50) ಮತ್ತು ಶ್ರೀನಿವಾಸ್(50) ಮೃತ ದುರ್ದೈವಿಗಳು.
ಅಭಿಷೇಕ್, ಶಿವಶಂಕರ್, ಲಕ್ಷ್ಮೀದೇವಿ ಮತ್ತು ಬಸವ ಎಂಬುವವರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಂಗಯ್ಯ ಎಂಬುವವರಿಗೆ ಎರಡು ಬಾಡಿಗೆ ಮನೆಗಳು ಸೇರಿದ್ದು, ಬಳ್ಳಾರಿಯ ನಾಗರಾಜ್ ಕುಟುಂಬ ಒಂದು ಮನೆಯಲ್ಲಿ ಬಾಡಿಗೆಗೆ ಇತ್ತು. ಬೆಳಗ್ಗೆ ಕೆಲಸಕ್ಕೆ ತೆರಳುವಾಗ ನಾಗರಾಜ್ ದೇವರ ಮುಂದೆ ದೀಪ ಹಚ್ಚಿದ್ದರು. ಈ ವೇಳೆ ಖಾಲಿಯಾಗಿದ್ದ ಸಿಲಿಂಡರ್ ಬದಲಾಯಿಸಲು ಮಗ ಅಭಿಷೇಕ್ ಮುಂದಾಗಿದ್ದ. ಅಜಾಗರೂಕತೆಯಿಂದ ಸಿಲಿಂಡರ್ ಫಿಟ್ ಮಾಡುತ್ತಿದ್ದ ವೇಳೆ ಗ್ಯಾಸ್ ಲೀಕ್ ಆಗಿ ದೀಪದ ಬೆಂಕಿ ತಗುಲಿದೆ. ಬೆಂಕಿಯ ತೀವ್ರತೆಗೆ ನಾಗರಾಜ್ ಹಾಗೂ ಶ್ರೀನಿವಾಸ್ ಮೃತಪಟ್ಟಿದ್ದಾರೆ.
ಮೂಲತಃ ಬಳ್ಳಾರಿಯವರಾಗಿರುವ ನಾಗರಾಜ್ ಕುಟುಂಬ ಎರಡು ವರ್ಷದ ಹಿಂದೆ ಬಾಡಿಗೆಗೆ ಬಂದಿದ್ದರು. ನಾಗರಾಜ್ ಪತ್ನಿ ಲಕ್ಷ್ಮಿ ದೇವಿ (35), ಮಕ್ಕಳಾದ ಬಸನಗೌಡ (19) ಅಭಿಷೇಕ್ ಗೌಡ (18) ವಾಸವಿದ್ದರು. ಮನೆ ಹೊತ್ತಿ ಉರಿದಾಗ ನಾಗರಾಜ್, ಲಕ್ಷ್ಮಿದೇವಿ, ಬಸವನಗೌಡ, ಅಭಿಷೇಕ್ ಕೂಡ ಬೆಂಕಿಯಲ್ಲಿ ಸಿಲುಕಿದ್ದರು. ಈ ವೇಳೆ ಲಕ್ಷ್ಮಿದೇವಿ, ಬಸವನಗೌಡ ಮನೆಯಿಂದ ಓಡಿ ಬಂದಿದ್ದು, ನಾಗರಾಜ್ ಹಾಗೂ ಅಭಿ ಬೆಂಕಿಗೆ ಸಿಲುಕಿ ನರಳಾಡಿದ್ದಾರೆ.
ಈ ವೇಳೆ ಪಕ್ಕದ ಮನೆಯಲ್ಲಿದ್ದ ಶ್ರೀನಿವಾಸ್ ಹಾಗೂ ಮನೆ ಮಾಲೀಕ ಶಿವಶಂಕರ್ ಬೆಂಕಿ ಹಾರಿಸಲು ಮುಂದಾಗಿದ್ದರು. ಅಭಿಷೇಕ್ನನ್ನು ಉಳಿಸಲು ಶ್ರೀನಿವಾಸ್ ಹೋಗಿದ್ದು, ಇತ್ತ ನಾಗರಾಜ್ರನ್ನು ಉಳಿಸಲು ಹೋಗಿದ್ದ ಶಿವಶಂಕರ್ಗೆ ಬೆಂಕಿ ತಗುಲಿದೆ. ಕೂಡಲೇ ಸ್ಥಳಿಯರು ಬೆಂಕಿ ತಗುಲಿದವರನ್ನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ.
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…
ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…