ಗ್ಯಾಸ್ ಲಿಕೇಜ್ನಿಂದ ಮನೆ ಹೊತ್ತಿ ಉರಿದಿದ್ದು, ಇಬ್ಬರು ಸಜೀವದಹನವಾಗಿರುವಂತಹ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯಲ್ಲಿ ನಡೆದಿದೆ.
ನಾಗರಾಜ್(50) ಮತ್ತು ಶ್ರೀನಿವಾಸ್(50) ಮೃತ ದುರ್ದೈವಿಗಳು.
ಅಭಿಷೇಕ್, ಶಿವಶಂಕರ್, ಲಕ್ಷ್ಮೀದೇವಿ ಮತ್ತು ಬಸವ ಎಂಬುವವರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಂಗಯ್ಯ ಎಂಬುವವರಿಗೆ ಎರಡು ಬಾಡಿಗೆ ಮನೆಗಳು ಸೇರಿದ್ದು, ಬಳ್ಳಾರಿಯ ನಾಗರಾಜ್ ಕುಟುಂಬ ಒಂದು ಮನೆಯಲ್ಲಿ ಬಾಡಿಗೆಗೆ ಇತ್ತು. ಬೆಳಗ್ಗೆ ಕೆಲಸಕ್ಕೆ ತೆರಳುವಾಗ ನಾಗರಾಜ್ ದೇವರ ಮುಂದೆ ದೀಪ ಹಚ್ಚಿದ್ದರು. ಈ ವೇಳೆ ಖಾಲಿಯಾಗಿದ್ದ ಸಿಲಿಂಡರ್ ಬದಲಾಯಿಸಲು ಮಗ ಅಭಿಷೇಕ್ ಮುಂದಾಗಿದ್ದ. ಅಜಾಗರೂಕತೆಯಿಂದ ಸಿಲಿಂಡರ್ ಫಿಟ್ ಮಾಡುತ್ತಿದ್ದ ವೇಳೆ ಗ್ಯಾಸ್ ಲೀಕ್ ಆಗಿ ದೀಪದ ಬೆಂಕಿ ತಗುಲಿದೆ. ಬೆಂಕಿಯ ತೀವ್ರತೆಗೆ ನಾಗರಾಜ್ ಹಾಗೂ ಶ್ರೀನಿವಾಸ್ ಮೃತಪಟ್ಟಿದ್ದಾರೆ.
ಮೂಲತಃ ಬಳ್ಳಾರಿಯವರಾಗಿರುವ ನಾಗರಾಜ್ ಕುಟುಂಬ ಎರಡು ವರ್ಷದ ಹಿಂದೆ ಬಾಡಿಗೆಗೆ ಬಂದಿದ್ದರು. ನಾಗರಾಜ್ ಪತ್ನಿ ಲಕ್ಷ್ಮಿ ದೇವಿ (35), ಮಕ್ಕಳಾದ ಬಸನಗೌಡ (19) ಅಭಿಷೇಕ್ ಗೌಡ (18) ವಾಸವಿದ್ದರು. ಮನೆ ಹೊತ್ತಿ ಉರಿದಾಗ ನಾಗರಾಜ್, ಲಕ್ಷ್ಮಿದೇವಿ, ಬಸವನಗೌಡ, ಅಭಿಷೇಕ್ ಕೂಡ ಬೆಂಕಿಯಲ್ಲಿ ಸಿಲುಕಿದ್ದರು. ಈ ವೇಳೆ ಲಕ್ಷ್ಮಿದೇವಿ, ಬಸವನಗೌಡ ಮನೆಯಿಂದ ಓಡಿ ಬಂದಿದ್ದು, ನಾಗರಾಜ್ ಹಾಗೂ ಅಭಿ ಬೆಂಕಿಗೆ ಸಿಲುಕಿ ನರಳಾಡಿದ್ದಾರೆ.
ಈ ವೇಳೆ ಪಕ್ಕದ ಮನೆಯಲ್ಲಿದ್ದ ಶ್ರೀನಿವಾಸ್ ಹಾಗೂ ಮನೆ ಮಾಲೀಕ ಶಿವಶಂಕರ್ ಬೆಂಕಿ ಹಾರಿಸಲು ಮುಂದಾಗಿದ್ದರು. ಅಭಿಷೇಕ್ನನ್ನು ಉಳಿಸಲು ಶ್ರೀನಿವಾಸ್ ಹೋಗಿದ್ದು, ಇತ್ತ ನಾಗರಾಜ್ರನ್ನು ಉಳಿಸಲು ಹೋಗಿದ್ದ ಶಿವಶಂಕರ್ಗೆ ಬೆಂಕಿ ತಗುಲಿದೆ. ಕೂಡಲೇ ಸ್ಥಳಿಯರು ಬೆಂಕಿ ತಗುಲಿದವರನ್ನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ.
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…
ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…
ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ SCSP-TSP ಅನುದಾನವನ್ನು ಸಮರ್ಪಕವಾಗಿ ಬಳಸದ ಇಲಾಖೆಗಳ ಮುಂದಿನ ಹಣಕಾಸು…
ದೊಡ್ಡಬಳ್ಳಾಪುರ: ತಾಲೂಕಿನ ಕೋಡಿಗೆಹಳ್ಳಿಯಲ್ಲಿರುವ ಆತ್ರೇಯ ಆಯುರ್ವೇದ ಕಾಲೇಜು ಆಡಳಿತ ಮಂಡಳಿಯು ಬ್ಯಾಂಕ್ ಸಾಲ ಮರುಪಾವತಿಸದ ಹಿನ್ನೆಲೆಯಲ್ಲಿ ಕಾಲೇಜಿಗೆ ಬೀಗ…