ಗ್ಯಾಸ್ ಲಿಕೇಜ್ನಿಂದ ಮನೆ ಹೊತ್ತಿ ಉರಿದಿದ್ದು, ಇಬ್ಬರು ಸಜೀವದಹನವಾಗಿರುವಂತಹ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯಲ್ಲಿ ನಡೆದಿದೆ.
ನಾಗರಾಜ್(50) ಮತ್ತು ಶ್ರೀನಿವಾಸ್(50) ಮೃತ ದುರ್ದೈವಿಗಳು.
ಅಭಿಷೇಕ್, ಶಿವಶಂಕರ್, ಲಕ್ಷ್ಮೀದೇವಿ ಮತ್ತು ಬಸವ ಎಂಬುವವರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಂಗಯ್ಯ ಎಂಬುವವರಿಗೆ ಎರಡು ಬಾಡಿಗೆ ಮನೆಗಳು ಸೇರಿದ್ದು, ಬಳ್ಳಾರಿಯ ನಾಗರಾಜ್ ಕುಟುಂಬ ಒಂದು ಮನೆಯಲ್ಲಿ ಬಾಡಿಗೆಗೆ ಇತ್ತು. ಬೆಳಗ್ಗೆ ಕೆಲಸಕ್ಕೆ ತೆರಳುವಾಗ ನಾಗರಾಜ್ ದೇವರ ಮುಂದೆ ದೀಪ ಹಚ್ಚಿದ್ದರು. ಈ ವೇಳೆ ಖಾಲಿಯಾಗಿದ್ದ ಸಿಲಿಂಡರ್ ಬದಲಾಯಿಸಲು ಮಗ ಅಭಿಷೇಕ್ ಮುಂದಾಗಿದ್ದ. ಅಜಾಗರೂಕತೆಯಿಂದ ಸಿಲಿಂಡರ್ ಫಿಟ್ ಮಾಡುತ್ತಿದ್ದ ವೇಳೆ ಗ್ಯಾಸ್ ಲೀಕ್ ಆಗಿ ದೀಪದ ಬೆಂಕಿ ತಗುಲಿದೆ. ಬೆಂಕಿಯ ತೀವ್ರತೆಗೆ ನಾಗರಾಜ್ ಹಾಗೂ ಶ್ರೀನಿವಾಸ್ ಮೃತಪಟ್ಟಿದ್ದಾರೆ.
ಮೂಲತಃ ಬಳ್ಳಾರಿಯವರಾಗಿರುವ ನಾಗರಾಜ್ ಕುಟುಂಬ ಎರಡು ವರ್ಷದ ಹಿಂದೆ ಬಾಡಿಗೆಗೆ ಬಂದಿದ್ದರು. ನಾಗರಾಜ್ ಪತ್ನಿ ಲಕ್ಷ್ಮಿ ದೇವಿ (35), ಮಕ್ಕಳಾದ ಬಸನಗೌಡ (19) ಅಭಿಷೇಕ್ ಗೌಡ (18) ವಾಸವಿದ್ದರು. ಮನೆ ಹೊತ್ತಿ ಉರಿದಾಗ ನಾಗರಾಜ್, ಲಕ್ಷ್ಮಿದೇವಿ, ಬಸವನಗೌಡ, ಅಭಿಷೇಕ್ ಕೂಡ ಬೆಂಕಿಯಲ್ಲಿ ಸಿಲುಕಿದ್ದರು. ಈ ವೇಳೆ ಲಕ್ಷ್ಮಿದೇವಿ, ಬಸವನಗೌಡ ಮನೆಯಿಂದ ಓಡಿ ಬಂದಿದ್ದು, ನಾಗರಾಜ್ ಹಾಗೂ ಅಭಿ ಬೆಂಕಿಗೆ ಸಿಲುಕಿ ನರಳಾಡಿದ್ದಾರೆ.
ಈ ವೇಳೆ ಪಕ್ಕದ ಮನೆಯಲ್ಲಿದ್ದ ಶ್ರೀನಿವಾಸ್ ಹಾಗೂ ಮನೆ ಮಾಲೀಕ ಶಿವಶಂಕರ್ ಬೆಂಕಿ ಹಾರಿಸಲು ಮುಂದಾಗಿದ್ದರು. ಅಭಿಷೇಕ್ನನ್ನು ಉಳಿಸಲು ಶ್ರೀನಿವಾಸ್ ಹೋಗಿದ್ದು, ಇತ್ತ ನಾಗರಾಜ್ರನ್ನು ಉಳಿಸಲು ಹೋಗಿದ್ದ ಶಿವಶಂಕರ್ಗೆ ಬೆಂಕಿ ತಗುಲಿದೆ. ಕೂಡಲೇ ಸ್ಥಳಿಯರು ಬೆಂಕಿ ತಗುಲಿದವರನ್ನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…