ಬೆಂಗಳೂರು: ಖಾಸಗಿ ಉದ್ಯಮಗಳಲ್ಲಿ ಕೂಡ ಕನ್ನಡಿಗರಿಗೆ ಕೆಲವು ಶ್ರೇಣಿಯ ಹುದ್ದೆಗಳನ್ನು ನೂರಕ್ಕೆ ನೂರರಷ್ಟು ಮೀಸಲಿಡಲಾಗುವುದು. ಇದೇ ಸಂದರ್ಭದಲ್ಲಿ ಉದ್ಯಮಗಳ ಹಿತಾಸಕ್ತಿಗಳನ್ನು ಸಹ ಕಾಪಾಡಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.
ಬುಧವಾರ ಇಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಈ ಸಂಬಂಧ ಸರಕಾರವು ವಿಧೇಯಕಕ್ಕೆ ಅನುಮೋದನೆ ನೀಡಿದೆ. ಈ ವಿಚಾರವಾಗಿ ಸದ್ಯದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಐಟಿ-ಬಿಟಿ, ಕಾನೂನು ಮತ್ತು ಕಾರ್ಮಿಕ ಸಚಿವರುಗಳ ಜೊತೆ ಚರ್ಚಿಸಿ, ಗೊಂದಲಗಳಿಗೆ ತೆರೆ ಎಳೆಯಲಾಗುವುದು ಎಂದರು.
ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗಲೇಬೇಕು ಎನ್ನುವುದರಲ್ಲಿ ಎರಡು ಮಾತಿಲ್ಲ. ತಯಾರಿಕಾ ವಲಯ ಮತ್ತು ಕೈಗಾರಿಕಾ ಕ್ರಾಂತಿಯ ಉಜ್ವಲ ಅವಕಾಶಗಳನ್ನು ನಾವು ಕಳೆದುಕೊಳ್ಳುವಂತಿಲ್ಲ ಎಂದು ಅವರು ಪ್ರತಿಪಾದಿಸಿದರು.
ಸ್ಥಳೀಯರ ಹಿತಾಸಕ್ತಿಗಳನ್ನು ಕಾಪಾಡಲು ಸರಕಾರ ಬದ್ಧವಾಗಿದೆ. ಹಾಗೆಯೇ ಉದ್ಯಮ ವಲಯದವರ ಹಿತಾಸಕ್ತಿಗೂ ಧಕ್ಕೆಯಾಗದಂತೆ ನಿಗಾ ವಹಿಸಲಾಗುವುದು. ಈ ಕುರಿತು ಸಂಬಂಧಪಟ್ಟ ಎಲ್ಲರ ಜೊತೆಗೂ ಮಾತುಕತೆ ನಡೆಸಲಾಗುವುದು. ಈ ವಿಷಯದಲ್ಲಿ ಯಾವುದೇ ಆತಂಕ ಬೇಕಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕವು ಪುರೋಗಾಮಿ ರಾಜ್ಯವಾಗಿದೆ. ‘ಗ್ಲೋಬಲ್ ಚೈನಾ ಒನ್’ ನೀತಿಯಿಂದ ಒದಗಿ ಬಂದಿರುವ ಸದವಕಾಶವನ್ನು ನಾವು ಕಳೆದುಕೊಳ್ಳುವಂತಿಲ್ಲ. ಇದು ಶತಮಾನಕ್ಕೊಮ್ಮೆ ಒದಗಿ ಬರುವ ಅವಕಾಶ ಎಂದು ಪಾಟೀಲ ಬಣ್ಣಿಸಿದ್ದಾರೆ.
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…