ಖಾಸಗಿ ಉದ್ಯಮಗಳಲ್ಲೂ ಕನ್ನಡಿಗರಿಗೆ ಉದ್ಯೋಗ ಖಾತ್ರಿ: ಸಿಎಂ ಜತೆ ಚರ್ಚಿಸಿ ಗೊಂದಲಗಳಿಗೆ ತೆರೆ- ಸಚಿವ ಎಂ.ಬಿ ಪಾಟೀಲ

ಬೆಂಗಳೂರು: ಖಾಸಗಿ ಉದ್ಯಮಗಳಲ್ಲಿ ಕೂಡ ಕನ್ನಡಿಗರಿಗೆ ಕೆಲವು ಶ್ರೇಣಿಯ ಹುದ್ದೆಗಳನ್ನು ನೂರಕ್ಕೆ ನೂರರಷ್ಟು ಮೀಸಲಿಡಲಾಗುವುದು. ಇದೇ ಸಂದರ್ಭದಲ್ಲಿ ಉದ್ಯಮಗಳ ಹಿತಾಸಕ್ತಿಗಳನ್ನು ಸಹ ಕಾಪಾಡಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಬುಧವಾರ ಇಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಈ ಸಂಬಂಧ ಸರಕಾರವು ವಿಧೇಯಕಕ್ಕೆ ಅನುಮೋದನೆ ನೀಡಿದೆ. ಈ ವಿಚಾರವಾಗಿ ಸದ್ಯದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಐಟಿ-ಬಿಟಿ, ಕಾನೂನು ಮತ್ತು ಕಾರ್ಮಿಕ ಸಚಿವರುಗಳ ಜೊತೆ ಚರ್ಚಿಸಿ, ಗೊಂದಲಗಳಿಗೆ ತೆರೆ ಎಳೆಯಲಾಗುವುದು ಎಂದರು.

ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗಲೇಬೇಕು ಎನ್ನುವುದರಲ್ಲಿ ಎರಡು ಮಾತಿಲ್ಲ. ತಯಾರಿಕಾ ವಲಯ ಮತ್ತು ಕೈಗಾರಿಕಾ ಕ್ರಾಂತಿಯ ಉಜ್ವಲ ಅವಕಾಶಗಳನ್ನು ನಾವು ಕಳೆದುಕೊಳ್ಳುವಂತಿಲ್ಲ ಎಂದು ಅವರು ಪ್ರತಿಪಾದಿಸಿದರು.

ಸ್ಥಳೀಯರ ಹಿತಾಸಕ್ತಿಗಳನ್ನು ಕಾಪಾಡಲು ಸರಕಾರ ಬದ್ಧವಾಗಿದೆ. ಹಾಗೆಯೇ ಉದ್ಯಮ ವಲಯದವರ ಹಿತಾಸಕ್ತಿಗೂ ಧಕ್ಕೆಯಾಗದಂತೆ ನಿಗಾ ವಹಿಸಲಾಗುವುದು. ಈ ಕುರಿತು ಸಂಬಂಧಪಟ್ಟ ಎಲ್ಲರ ಜೊತೆಗೂ ಮಾತುಕತೆ ನಡೆಸಲಾಗುವುದು. ಈ ವಿಷಯದಲ್ಲಿ ಯಾವುದೇ ಆತಂಕ ಬೇಕಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕವು ಪುರೋಗಾಮಿ ರಾಜ್ಯವಾಗಿದೆ. ‘ಗ್ಲೋಬಲ್ ಚೈನಾ ಒನ್’ ನೀತಿಯಿಂದ ಒದಗಿ ಬಂದಿರುವ ಸದವಕಾಶವನ್ನು ನಾವು ಕಳೆದುಕೊಳ್ಳುವಂತಿಲ್ಲ. ಇದು ಶತಮಾನಕ್ಕೊಮ್ಮೆ ಒದಗಿ ಬರುವ ಅವಕಾಶ ಎಂದು ಪಾಟೀಲ ಬಣ್ಣಿಸಿದ್ದಾರೆ.

Ramesh Babu

Journalist

Recent Posts

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

27 minutes ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

1 hour ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

6 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

9 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

11 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

11 hours ago