ಇದು ಉತ್ತರಪ್ರದೇಶವಲ್ಲ, ಬಿಹಾರವೂ ಅಲ್ಲ… ಬದಲಿಗೆ ವಿಶ್ವಗುರು ನರೇಂದ್ರ ಮೋದಿಯವರ ತವರು ರಾಜ್ಯ ಗುಜರಾತ್ನಲ್ಲಿ ಖಾಸಗೀ ಕಂಪನಿಯ ಉದ್ಯೋಗಕ್ಕಾಗಿ ಒದ್ದಾಡುತ್ತಿರುವ ಯುವಜನತೆಯ ದೃಶ್ಯ.
ಗುಜರಾತ್ನ ಜಗಾಡಿಯಾದ ಭರೂಚ್ನಲ್ಲಿರುವ ಇಂಜಿನಿಯರಿಂಗ್ ಕಂಪನಿಯೊಂದು ಪ್ರಕಟಿಸಿದ 10 ಖಾಲಿ ಹುದ್ದೆಗಳಿಗೆ 1,800ಕ್ಕೂ ಹೆಚ್ಚು ಜನರು ಮುಕ್ತ ಸಂದರ್ಶನಕ್ಕೆ ಹಾಜರಾಗಿದ್ದರು.
ಸಂದರ್ಶನ ನಡೆಯುತ್ತಿದ್ದ ಹೊಟೇಲ್ನ ಪ್ರವೇಶದ್ವಾರಕ್ಕೆ ಎರಡೂ ಕಡೆಯಿಂದ ಎರಡು ಮೆಟ್ಟಿಲುಗಳ ಮೂಲಕ ನೂರಾರು ಮಂದಿ ಸರತಿ ಸಾಲಿನಲ್ಲಿ ಸಾಗುತ್ತಿರುವುದು ಕಂಡುಬಂದಿದೆ.
ನೇರ ಸಂದರ್ಶನಕ್ಕೆ ಅವಕಾಶ ಇದ್ದುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದ ಯುವಕರು ಸಂದರ್ಶನ ನೀಡಲು ನಾ ಮುಂದು ತಾ ಮುಂದು ಎಂದು ನುಗ್ಗಿದ್ದಾರೆ ಈ ವೇಳೆ ನೂಕು ನುಗ್ಗಲು ಉಂಟಾಗಿ ಹೋಟೆಲ್ ಕಟ್ಟಡ ರೇಲಿಂಗ್ಸ್ ಮುರಿದು ಹೋಗಿದೆ.
ದೇಶದಲ್ಲಿ ನಿರುದ್ಯೋಗ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದಕ್ಕೆ ಇದು ಉದಾಹರಣೆಯಾಗಿದೆ. ವರ್ಷಕ್ಕೆ ಲೆಕ್ಕಕ್ಕೆ ಇಲ್ಲದಷ್ಟು ಯುವಕ, ಯುವತಿಯರು ವಿದ್ಯಾಭ್ಯಾಸ ಮುಗಿಸಿ ಕೆಲಸ ಹುಡುಕಲು ಆರಂಭಿಸುತ್ತಾರೆ. ಆದರೆ, ಕೆಲವರಿಗೆ ವಿದ್ಯಾಭ್ಯಾಸ ಮುಗಿಯುವ ಹೊತ್ತಿಗೆ ಕೆಲಸ ಸಿಕ್ಕರೆ ಇನ್ನು ಕೆಲವರು ಉದ್ಯೋಗದಿಂದ ವಂಚಿತರಾಗುತ್ತಾರೆ.
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಯುವಕರ ನೂಕು ನುಗ್ಗಲಿನ ವಿಡಿಯೋ ವೈರಲ್ ಆಗಿದ್ದು ದೇಶದಲ್ಲಿ ನಿರುದ್ಯೋಗ ಯಾವ ಮಟ್ಟಿಗೆ ಇದೆ ಎಂಬುದನ್ನು ತೋರಿಸುವಂತಿದೆ.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…