ಇದು ಉತ್ತರಪ್ರದೇಶವಲ್ಲ, ಬಿಹಾರವೂ ಅಲ್ಲ… ಬದಲಿಗೆ ವಿಶ್ವಗುರು ನರೇಂದ್ರ ಮೋದಿಯವರ ತವರು ರಾಜ್ಯ ಗುಜರಾತ್ನಲ್ಲಿ ಖಾಸಗೀ ಕಂಪನಿಯ ಉದ್ಯೋಗಕ್ಕಾಗಿ ಒದ್ದಾಡುತ್ತಿರುವ ಯುವಜನತೆಯ ದೃಶ್ಯ.
ಗುಜರಾತ್ನ ಜಗಾಡಿಯಾದ ಭರೂಚ್ನಲ್ಲಿರುವ ಇಂಜಿನಿಯರಿಂಗ್ ಕಂಪನಿಯೊಂದು ಪ್ರಕಟಿಸಿದ 10 ಖಾಲಿ ಹುದ್ದೆಗಳಿಗೆ 1,800ಕ್ಕೂ ಹೆಚ್ಚು ಜನರು ಮುಕ್ತ ಸಂದರ್ಶನಕ್ಕೆ ಹಾಜರಾಗಿದ್ದರು.
ಸಂದರ್ಶನ ನಡೆಯುತ್ತಿದ್ದ ಹೊಟೇಲ್ನ ಪ್ರವೇಶದ್ವಾರಕ್ಕೆ ಎರಡೂ ಕಡೆಯಿಂದ ಎರಡು ಮೆಟ್ಟಿಲುಗಳ ಮೂಲಕ ನೂರಾರು ಮಂದಿ ಸರತಿ ಸಾಲಿನಲ್ಲಿ ಸಾಗುತ್ತಿರುವುದು ಕಂಡುಬಂದಿದೆ.
ನೇರ ಸಂದರ್ಶನಕ್ಕೆ ಅವಕಾಶ ಇದ್ದುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದ ಯುವಕರು ಸಂದರ್ಶನ ನೀಡಲು ನಾ ಮುಂದು ತಾ ಮುಂದು ಎಂದು ನುಗ್ಗಿದ್ದಾರೆ ಈ ವೇಳೆ ನೂಕು ನುಗ್ಗಲು ಉಂಟಾಗಿ ಹೋಟೆಲ್ ಕಟ್ಟಡ ರೇಲಿಂಗ್ಸ್ ಮುರಿದು ಹೋಗಿದೆ.
ದೇಶದಲ್ಲಿ ನಿರುದ್ಯೋಗ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದಕ್ಕೆ ಇದು ಉದಾಹರಣೆಯಾಗಿದೆ. ವರ್ಷಕ್ಕೆ ಲೆಕ್ಕಕ್ಕೆ ಇಲ್ಲದಷ್ಟು ಯುವಕ, ಯುವತಿಯರು ವಿದ್ಯಾಭ್ಯಾಸ ಮುಗಿಸಿ ಕೆಲಸ ಹುಡುಕಲು ಆರಂಭಿಸುತ್ತಾರೆ. ಆದರೆ, ಕೆಲವರಿಗೆ ವಿದ್ಯಾಭ್ಯಾಸ ಮುಗಿಯುವ ಹೊತ್ತಿಗೆ ಕೆಲಸ ಸಿಕ್ಕರೆ ಇನ್ನು ಕೆಲವರು ಉದ್ಯೋಗದಿಂದ ವಂಚಿತರಾಗುತ್ತಾರೆ.
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಯುವಕರ ನೂಕು ನುಗ್ಗಲಿನ ವಿಡಿಯೋ ವೈರಲ್ ಆಗಿದ್ದು ದೇಶದಲ್ಲಿ ನಿರುದ್ಯೋಗ ಯಾವ ಮಟ್ಟಿಗೆ ಇದೆ ಎಂಬುದನ್ನು ತೋರಿಸುವಂತಿದೆ.
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…