ಇದು ಉತ್ತರಪ್ರದೇಶವಲ್ಲ, ಬಿಹಾರವೂ ಅಲ್ಲ… ಬದಲಿಗೆ ವಿಶ್ವಗುರು ನರೇಂದ್ರ ಮೋದಿಯವರ ತವರು ರಾಜ್ಯ ಗುಜರಾತ್ನಲ್ಲಿ ಖಾಸಗೀ ಕಂಪನಿಯ ಉದ್ಯೋಗಕ್ಕಾಗಿ ಒದ್ದಾಡುತ್ತಿರುವ ಯುವಜನತೆಯ ದೃಶ್ಯ.
ಗುಜರಾತ್ನ ಜಗಾಡಿಯಾದ ಭರೂಚ್ನಲ್ಲಿರುವ ಇಂಜಿನಿಯರಿಂಗ್ ಕಂಪನಿಯೊಂದು ಪ್ರಕಟಿಸಿದ 10 ಖಾಲಿ ಹುದ್ದೆಗಳಿಗೆ 1,800ಕ್ಕೂ ಹೆಚ್ಚು ಜನರು ಮುಕ್ತ ಸಂದರ್ಶನಕ್ಕೆ ಹಾಜರಾಗಿದ್ದರು.
ಸಂದರ್ಶನ ನಡೆಯುತ್ತಿದ್ದ ಹೊಟೇಲ್ನ ಪ್ರವೇಶದ್ವಾರಕ್ಕೆ ಎರಡೂ ಕಡೆಯಿಂದ ಎರಡು ಮೆಟ್ಟಿಲುಗಳ ಮೂಲಕ ನೂರಾರು ಮಂದಿ ಸರತಿ ಸಾಲಿನಲ್ಲಿ ಸಾಗುತ್ತಿರುವುದು ಕಂಡುಬಂದಿದೆ.
ನೇರ ಸಂದರ್ಶನಕ್ಕೆ ಅವಕಾಶ ಇದ್ದುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದ ಯುವಕರು ಸಂದರ್ಶನ ನೀಡಲು ನಾ ಮುಂದು ತಾ ಮುಂದು ಎಂದು ನುಗ್ಗಿದ್ದಾರೆ ಈ ವೇಳೆ ನೂಕು ನುಗ್ಗಲು ಉಂಟಾಗಿ ಹೋಟೆಲ್ ಕಟ್ಟಡ ರೇಲಿಂಗ್ಸ್ ಮುರಿದು ಹೋಗಿದೆ.
ದೇಶದಲ್ಲಿ ನಿರುದ್ಯೋಗ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದಕ್ಕೆ ಇದು ಉದಾಹರಣೆಯಾಗಿದೆ. ವರ್ಷಕ್ಕೆ ಲೆಕ್ಕಕ್ಕೆ ಇಲ್ಲದಷ್ಟು ಯುವಕ, ಯುವತಿಯರು ವಿದ್ಯಾಭ್ಯಾಸ ಮುಗಿಸಿ ಕೆಲಸ ಹುಡುಕಲು ಆರಂಭಿಸುತ್ತಾರೆ. ಆದರೆ, ಕೆಲವರಿಗೆ ವಿದ್ಯಾಭ್ಯಾಸ ಮುಗಿಯುವ ಹೊತ್ತಿಗೆ ಕೆಲಸ ಸಿಕ್ಕರೆ ಇನ್ನು ಕೆಲವರು ಉದ್ಯೋಗದಿಂದ ವಂಚಿತರಾಗುತ್ತಾರೆ.
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಯುವಕರ ನೂಕು ನುಗ್ಗಲಿನ ವಿಡಿಯೋ ವೈರಲ್ ಆಗಿದ್ದು ದೇಶದಲ್ಲಿ ನಿರುದ್ಯೋಗ ಯಾವ ಮಟ್ಟಿಗೆ ಇದೆ ಎಂಬುದನ್ನು ತೋರಿಸುವಂತಿದೆ.
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…
ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…
ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…
ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…