ಇದು ಉತ್ತರಪ್ರದೇಶವಲ್ಲ, ಬಿಹಾರವೂ ಅಲ್ಲ… ಬದಲಿಗೆ ವಿಶ್ವಗುರು ನರೇಂದ್ರ ಮೋದಿಯವರ ತವರು ರಾಜ್ಯ ಗುಜರಾತ್ನಲ್ಲಿ ಖಾಸಗೀ ಕಂಪನಿಯ ಉದ್ಯೋಗಕ್ಕಾಗಿ ಒದ್ದಾಡುತ್ತಿರುವ ಯುವಜನತೆಯ ದೃಶ್ಯ.
ಗುಜರಾತ್ನ ಜಗಾಡಿಯಾದ ಭರೂಚ್ನಲ್ಲಿರುವ ಇಂಜಿನಿಯರಿಂಗ್ ಕಂಪನಿಯೊಂದು ಪ್ರಕಟಿಸಿದ 10 ಖಾಲಿ ಹುದ್ದೆಗಳಿಗೆ 1,800ಕ್ಕೂ ಹೆಚ್ಚು ಜನರು ಮುಕ್ತ ಸಂದರ್ಶನಕ್ಕೆ ಹಾಜರಾಗಿದ್ದರು.
ಸಂದರ್ಶನ ನಡೆಯುತ್ತಿದ್ದ ಹೊಟೇಲ್ನ ಪ್ರವೇಶದ್ವಾರಕ್ಕೆ ಎರಡೂ ಕಡೆಯಿಂದ ಎರಡು ಮೆಟ್ಟಿಲುಗಳ ಮೂಲಕ ನೂರಾರು ಮಂದಿ ಸರತಿ ಸಾಲಿನಲ್ಲಿ ಸಾಗುತ್ತಿರುವುದು ಕಂಡುಬಂದಿದೆ.
ನೇರ ಸಂದರ್ಶನಕ್ಕೆ ಅವಕಾಶ ಇದ್ದುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದ ಯುವಕರು ಸಂದರ್ಶನ ನೀಡಲು ನಾ ಮುಂದು ತಾ ಮುಂದು ಎಂದು ನುಗ್ಗಿದ್ದಾರೆ ಈ ವೇಳೆ ನೂಕು ನುಗ್ಗಲು ಉಂಟಾಗಿ ಹೋಟೆಲ್ ಕಟ್ಟಡ ರೇಲಿಂಗ್ಸ್ ಮುರಿದು ಹೋಗಿದೆ.
ದೇಶದಲ್ಲಿ ನಿರುದ್ಯೋಗ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದಕ್ಕೆ ಇದು ಉದಾಹರಣೆಯಾಗಿದೆ. ವರ್ಷಕ್ಕೆ ಲೆಕ್ಕಕ್ಕೆ ಇಲ್ಲದಷ್ಟು ಯುವಕ, ಯುವತಿಯರು ವಿದ್ಯಾಭ್ಯಾಸ ಮುಗಿಸಿ ಕೆಲಸ ಹುಡುಕಲು ಆರಂಭಿಸುತ್ತಾರೆ. ಆದರೆ, ಕೆಲವರಿಗೆ ವಿದ್ಯಾಭ್ಯಾಸ ಮುಗಿಯುವ ಹೊತ್ತಿಗೆ ಕೆಲಸ ಸಿಕ್ಕರೆ ಇನ್ನು ಕೆಲವರು ಉದ್ಯೋಗದಿಂದ ವಂಚಿತರಾಗುತ್ತಾರೆ.
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಯುವಕರ ನೂಕು ನುಗ್ಗಲಿನ ವಿಡಿಯೋ ವೈರಲ್ ಆಗಿದ್ದು ದೇಶದಲ್ಲಿ ನಿರುದ್ಯೋಗ ಯಾವ ಮಟ್ಟಿಗೆ ಇದೆ ಎಂಬುದನ್ನು ತೋರಿಸುವಂತಿದೆ.
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…