ಖಾಸಗಿ ಕಂಪನಿಯಲ್ಲಿ ಪ್ರಕಟಿಸಿದ 10 ಹುದ್ದೆಗಳಿಗೆ 1,800ಕ್ಕೂ ಹೆಚ್ಚು ಜನರು ಮುಕ್ತ ಸಂದರ್ಶನಕ್ಕೆ ಹಾಜರು

ಇದು ಉತ್ತರಪ್ರದೇಶವಲ್ಲ, ಬಿಹಾರವೂ ಅಲ್ಲ… ಬದಲಿಗೆ ವಿಶ್ವಗುರು ನರೇಂದ್ರ ಮೋದಿಯವರ ತವರು ರಾಜ್ಯ ಗುಜರಾತ್‌ನಲ್ಲಿ ಖಾಸಗೀ ಕಂಪನಿಯ ಉದ್ಯೋಗಕ್ಕಾಗಿ ಒದ್ದಾಡುತ್ತಿರುವ ಯುವಜನತೆಯ ದೃಶ್ಯ.

ಗುಜರಾತ್‌ನ ಜಗಾಡಿಯಾದ ಭರೂಚ್‌ನಲ್ಲಿರುವ ಇಂಜಿನಿಯರಿಂಗ್ ಕಂಪನಿಯೊಂದು ಪ್ರಕಟಿಸಿದ 10 ಖಾಲಿ ಹುದ್ದೆಗಳಿಗೆ 1,800ಕ್ಕೂ ಹೆಚ್ಚು ಜನರು ಮುಕ್ತ ಸಂದರ್ಶನಕ್ಕೆ ಹಾಜರಾಗಿದ್ದರು.

ಸಂದರ್ಶನ ನಡೆಯುತ್ತಿದ್ದ ಹೊಟೇಲ್‌ನ ಪ್ರವೇಶದ್ವಾರಕ್ಕೆ ಎರಡೂ ಕಡೆಯಿಂದ ಎರಡು ಮೆಟ್ಟಿಲುಗಳ ಮೂಲಕ ನೂರಾರು ಮಂದಿ ಸರತಿ ಸಾಲಿನಲ್ಲಿ ಸಾಗುತ್ತಿರುವುದು ಕಂಡುಬಂದಿದೆ.

ನೇರ ಸಂದರ್ಶನಕ್ಕೆ ಅವಕಾಶ ಇದ್ದುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದ ಯುವಕರು ಸಂದರ್ಶನ ನೀಡಲು ನಾ ಮುಂದು ತಾ ಮುಂದು ಎಂದು ನುಗ್ಗಿದ್ದಾರೆ ಈ ವೇಳೆ ನೂಕು ನುಗ್ಗಲು ಉಂಟಾಗಿ ಹೋಟೆಲ್ ಕಟ್ಟಡ ರೇಲಿಂಗ್ಸ್ ಮುರಿದು ಹೋಗಿದೆ.

ದೇಶದಲ್ಲಿ ನಿರುದ್ಯೋಗ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದಕ್ಕೆ ಇದು ಉದಾಹರಣೆಯಾಗಿದೆ. ವರ್ಷಕ್ಕೆ ಲೆಕ್ಕಕ್ಕೆ ಇಲ್ಲದಷ್ಟು ಯುವಕ, ಯುವತಿಯರು ವಿದ್ಯಾಭ್ಯಾಸ ಮುಗಿಸಿ ಕೆಲಸ ಹುಡುಕಲು ಆರಂಭಿಸುತ್ತಾರೆ. ಆದರೆ, ಕೆಲವರಿಗೆ ವಿದ್ಯಾಭ್ಯಾಸ ಮುಗಿಯುವ ಹೊತ್ತಿಗೆ ಕೆಲಸ ಸಿಕ್ಕರೆ ಇನ್ನು ಕೆಲವರು ಉದ್ಯೋಗದಿಂದ ವಂಚಿತರಾಗುತ್ತಾರೆ.

ಸದ್ಯ ಸಾಮಾಜಿಕ ಜಾಲತಾಣದಲ್ಲಿ ಯುವಕರ ನೂಕು ನುಗ್ಗಲಿನ ವಿಡಿಯೋ ವೈರಲ್ ಆಗಿದ್ದು ದೇಶದಲ್ಲಿ ನಿರುದ್ಯೋಗ ಯಾವ ಮಟ್ಟಿಗೆ ಇದೆ ಎಂಬುದನ್ನು ತೋರಿಸುವಂತಿದೆ.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

9 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

3 days ago