ಖಾಸಗಿ ಕಂಪನಿಯಿಂದ ಸ್ಮಶಾನ ಜಾಗ ಒತ್ತುವರಿಯಾಗಿಲ್ಲ: ಖಾಸಗಿ ಕಂಪನಿಯಿಂದ ಸ್ಮಶಾನ ಭೂಮಿಗೆ 35 ಗುಂಟೆ ಜಮೀನು ಮಂಜೂರು

ಗ್ರಾಮದ ಸ್ಮಶಾನ ಜಾಗವನ್ನ ಖಾಸಗಿ ಕಂಪನಿ ಒತ್ತುವರಿ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದ್ದು, ಆದರೆ ಸ್ವಂತ ಊರಿನ ಗ್ರಾಮಸ್ಥರೇ ಒತ್ತುವರಿ ಆರೋಪ ತಳ್ಳಿ ಹಾಕಿದ್ದಾರೆ.. ಗ್ರಾಮಸ್ಥರ ಅನುಕೂಲಕ್ಕಾಗಿ ಸ್ಮಶಾನಕ್ಕೆ ಹೆಚ್ಚು ಭೂಮಿ ನೀಡಿದ್ದು ,ಮತ್ತು ಸ್ಮಶಾನಕ್ಕೆ ರಸ್ತೆ ಮಾಡಿಕೊಡುತ್ತಾರೆಂದು ಗ್ರಾಮಸ್ಥರು ಸಮರ್ಥನೆ ಮಾಡಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ವಡ್ಡರಹಳ್ಳಿ ಗ್ರಾಮದ ರೈಲ್ವೆ ಸ್ಟೇಷನ್ ಬಳಿ ಬಾಲಾಜಿ ಅರ್ಥ್ ಮೂವರ್ಸ್ ಕಂಪನಿ ಡಂಪಿಂಗ್ ಯಾರ್ಡ್ ನಿರ್ಮಾಣ ಮಾಡುತ್ತಿದೆ, ಸರ್ವೆ ನಂಬರ್ 19 ರಲ್ಲಿ ಗ್ರಾಮದ ಸ್ಮಶಾನ ಜಾಗವಿದ್ದು ಕಂಪನಿಗೆ ರಸ್ತೆ ಸಮಸ್ಯೆ ಎದುರಾಗಿತ್ತು..ಗ್ರಾಮಸ್ಥರ ಸಮ್ಮುಖದಲ್ಲಿ ತೀರ್ಮಾನ ಮಾಡಿ ಸ್ಮಶಾನಕ್ಕೆ ಯೋಗ್ಯವಲ್ಲದ ಭೂಮಿಯನ್ನು ಕಂಪನಿಯವರು 12 ಗುಂಟೆ ಜಮೀನನ್ನು ರಸ್ತೆಗೆ ಬಳಸಿಕೊಂಡು ಸುಮಾರು 1 ಕೋಟಿಗಿಂತ ಹೆಚ್ಚು ಬೆಲೆ ಬಾಳುವ ಜಾಗವನ್ನು ಸ್ಮಶಾನಕ್ಕೆ ಜಾಗ ನೀಡಿದ್ದಾರೆ.

ಅಲ್ಲದೆ ಗ್ರಾಮದಲ್ಲಿ ಸ್ಮಶಾನಕ್ಕೆ ಹೋಗುವ ರಸ್ತೆ ಸಂಪರ್ಕವೇ ಕಟ್ ಆಗಿತ್ತು. ಗ್ರಾಮದಲ್ಲಿ ಸಾವು ಆದಾಗ 2 ಕಿ.ಮೀ ಸುತ್ತಬಳಸಿ ಸ್ಮಶಾನಕ್ಕೆ ಬರಬೇಕಾದ ಸ್ಥಿತಿ ಇತ್ತು. ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಕಂಪನಿ ಸ್ಮಶಾನಕ್ಕೆ ಸ್ವಂತ 34 ಗುಂಟೆ ಜಾಗವನ್ನ ಬಿಟ್ಟು ಕೊಟ್ಟಿದೆ, ಇದರ ಜೊತೆಗೆ ಸ್ಮಶಾನಕ್ಕೆ ಸಂಪರ್ಕಿಸುವ ರಸ್ತೆ ನಿರ್ಮಾಣ ಮಾಡುವ ಭರವಸೆಯನ್ನು ಕೊಟ್ಟಿದೆ.

ಇನ್ನು ಈ ಭಾಗದಲ್ಲಿ ಸಾಕಷ್ಟು ಬಡ ಕುಟುಂಬಗಳು ವಾಸ ಮಾಡುತ್ತಿದ್ದು ಈ ಕಂಪನಿ ಸ್ಥಾಪನೆಯಾದರೆ ಬಡವರಿಗೆ ಉದ್ಯೋಗ ಸೃಷ್ಟಿಯಾಗುತ್ತೆ..ನಿರುದ್ಯೋಗದ ಸಮಸ್ಯೆ ನಿವಾರಣೆಯಾಗುತ್ತದೆ. ಈ ಉದ್ದೇಶದಿಂದ ಈ ಜಾಗವನ್ನು ಬಿಡಲು ಗ್ರಾಮಸ್ಥರು ಒಪ್ಪಿದ್ದಾರೆ ಎಂದು ಗ್ರಾಮಸ್ಥ ಮಂಜುನಾಥ್ ತಿಳಿಸಿದರು.

ಈ ವೇಳೆ ಗ್ರಾಮಸ್ಥರಾದ ಮಂಜುನಾಥ್, ಶ್ರೀನಿವಾಸ ರೆಡ್ಡಿ, ಮನೋಹರ್, ಶ್ರೀನಿವಾಸ ಮೂರ್ತಿ, ಕೃಷ್ಣಪ್ಪ , ರವಿಕುಮಾರ್, ರಾಮಸ್ವಾಮಿ, ಅಂಬರೀಶ್, ರಮೇಶ್, ಜಗಣ್ಣ, ವಿಜಿಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಹುಟ್ಟಿಸುವವನೂ ಅವನೇ…. ಸಾಯಿಸುವವನೂ ಅವನೇ…

ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…

2 hours ago

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

12 hours ago

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

14 hours ago

ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ

ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…

15 hours ago

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

24 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

1 day ago