ಗ್ರಾಮದ ಸ್ಮಶಾನ ಜಾಗವನ್ನ ಖಾಸಗಿ ಕಂಪನಿ ಒತ್ತುವರಿ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದ್ದು, ಆದರೆ ಸ್ವಂತ ಊರಿನ ಗ್ರಾಮಸ್ಥರೇ ಒತ್ತುವರಿ ಆರೋಪ ತಳ್ಳಿ ಹಾಕಿದ್ದಾರೆ.. ಗ್ರಾಮಸ್ಥರ ಅನುಕೂಲಕ್ಕಾಗಿ ಸ್ಮಶಾನಕ್ಕೆ ಹೆಚ್ಚು ಭೂಮಿ ನೀಡಿದ್ದು ,ಮತ್ತು ಸ್ಮಶಾನಕ್ಕೆ ರಸ್ತೆ ಮಾಡಿಕೊಡುತ್ತಾರೆಂದು ಗ್ರಾಮಸ್ಥರು ಸಮರ್ಥನೆ ಮಾಡಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ವಡ್ಡರಹಳ್ಳಿ ಗ್ರಾಮದ ರೈಲ್ವೆ ಸ್ಟೇಷನ್ ಬಳಿ ಬಾಲಾಜಿ ಅರ್ಥ್ ಮೂವರ್ಸ್ ಕಂಪನಿ ಡಂಪಿಂಗ್ ಯಾರ್ಡ್ ನಿರ್ಮಾಣ ಮಾಡುತ್ತಿದೆ, ಸರ್ವೆ ನಂಬರ್ 19 ರಲ್ಲಿ ಗ್ರಾಮದ ಸ್ಮಶಾನ ಜಾಗವಿದ್ದು ಕಂಪನಿಗೆ ರಸ್ತೆ ಸಮಸ್ಯೆ ಎದುರಾಗಿತ್ತು..ಗ್ರಾಮಸ್ಥರ ಸಮ್ಮುಖದಲ್ಲಿ ತೀರ್ಮಾನ ಮಾಡಿ ಸ್ಮಶಾನಕ್ಕೆ ಯೋಗ್ಯವಲ್ಲದ ಭೂಮಿಯನ್ನು ಕಂಪನಿಯವರು 12 ಗುಂಟೆ ಜಮೀನನ್ನು ರಸ್ತೆಗೆ ಬಳಸಿಕೊಂಡು ಸುಮಾರು 1 ಕೋಟಿಗಿಂತ ಹೆಚ್ಚು ಬೆಲೆ ಬಾಳುವ ಜಾಗವನ್ನು ಸ್ಮಶಾನಕ್ಕೆ ಜಾಗ ನೀಡಿದ್ದಾರೆ.
ಅಲ್ಲದೆ ಗ್ರಾಮದಲ್ಲಿ ಸ್ಮಶಾನಕ್ಕೆ ಹೋಗುವ ರಸ್ತೆ ಸಂಪರ್ಕವೇ ಕಟ್ ಆಗಿತ್ತು. ಗ್ರಾಮದಲ್ಲಿ ಸಾವು ಆದಾಗ 2 ಕಿ.ಮೀ ಸುತ್ತಬಳಸಿ ಸ್ಮಶಾನಕ್ಕೆ ಬರಬೇಕಾದ ಸ್ಥಿತಿ ಇತ್ತು. ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಕಂಪನಿ ಸ್ಮಶಾನಕ್ಕೆ ಸ್ವಂತ 34 ಗುಂಟೆ ಜಾಗವನ್ನ ಬಿಟ್ಟು ಕೊಟ್ಟಿದೆ, ಇದರ ಜೊತೆಗೆ ಸ್ಮಶಾನಕ್ಕೆ ಸಂಪರ್ಕಿಸುವ ರಸ್ತೆ ನಿರ್ಮಾಣ ಮಾಡುವ ಭರವಸೆಯನ್ನು ಕೊಟ್ಟಿದೆ.
ಇನ್ನು ಈ ಭಾಗದಲ್ಲಿ ಸಾಕಷ್ಟು ಬಡ ಕುಟುಂಬಗಳು ವಾಸ ಮಾಡುತ್ತಿದ್ದು ಈ ಕಂಪನಿ ಸ್ಥಾಪನೆಯಾದರೆ ಬಡವರಿಗೆ ಉದ್ಯೋಗ ಸೃಷ್ಟಿಯಾಗುತ್ತೆ..ನಿರುದ್ಯೋಗದ ಸಮಸ್ಯೆ ನಿವಾರಣೆಯಾಗುತ್ತದೆ. ಈ ಉದ್ದೇಶದಿಂದ ಈ ಜಾಗವನ್ನು ಬಿಡಲು ಗ್ರಾಮಸ್ಥರು ಒಪ್ಪಿದ್ದಾರೆ ಎಂದು ಗ್ರಾಮಸ್ಥ ಮಂಜುನಾಥ್ ತಿಳಿಸಿದರು.
ಈ ವೇಳೆ ಗ್ರಾಮಸ್ಥರಾದ ಮಂಜುನಾಥ್, ಶ್ರೀನಿವಾಸ ರೆಡ್ಡಿ, ಮನೋಹರ್, ಶ್ರೀನಿವಾಸ ಮೂರ್ತಿ, ಕೃಷ್ಣಪ್ಪ , ರವಿಕುಮಾರ್, ರಾಮಸ್ವಾಮಿ, ಅಂಬರೀಶ್, ರಮೇಶ್, ಜಗಣ್ಣ, ವಿಜಿಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…