ಖಾಸಗಿ ಕಂಪನಿಯಿಂದ ಸ್ಮಶಾನ ಜಾಗ ಒತ್ತುವರಿಯಾಗಿಲ್ಲ: ಖಾಸಗಿ ಕಂಪನಿಯಿಂದ ಸ್ಮಶಾನ ಭೂಮಿಗೆ 35 ಗುಂಟೆ ಜಮೀನು ಮಂಜೂರು

ಗ್ರಾಮದ ಸ್ಮಶಾನ ಜಾಗವನ್ನ ಖಾಸಗಿ ಕಂಪನಿ ಒತ್ತುವರಿ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದ್ದು, ಆದರೆ ಸ್ವಂತ ಊರಿನ ಗ್ರಾಮಸ್ಥರೇ ಒತ್ತುವರಿ ಆರೋಪ ತಳ್ಳಿ ಹಾಕಿದ್ದಾರೆ.. ಗ್ರಾಮಸ್ಥರ ಅನುಕೂಲಕ್ಕಾಗಿ ಸ್ಮಶಾನಕ್ಕೆ ಹೆಚ್ಚು ಭೂಮಿ ನೀಡಿದ್ದು ,ಮತ್ತು ಸ್ಮಶಾನಕ್ಕೆ ರಸ್ತೆ ಮಾಡಿಕೊಡುತ್ತಾರೆಂದು ಗ್ರಾಮಸ್ಥರು ಸಮರ್ಥನೆ ಮಾಡಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ವಡ್ಡರಹಳ್ಳಿ ಗ್ರಾಮದ ರೈಲ್ವೆ ಸ್ಟೇಷನ್ ಬಳಿ ಬಾಲಾಜಿ ಅರ್ಥ್ ಮೂವರ್ಸ್ ಕಂಪನಿ ಡಂಪಿಂಗ್ ಯಾರ್ಡ್ ನಿರ್ಮಾಣ ಮಾಡುತ್ತಿದೆ, ಸರ್ವೆ ನಂಬರ್ 19 ರಲ್ಲಿ ಗ್ರಾಮದ ಸ್ಮಶಾನ ಜಾಗವಿದ್ದು ಕಂಪನಿಗೆ ರಸ್ತೆ ಸಮಸ್ಯೆ ಎದುರಾಗಿತ್ತು..ಗ್ರಾಮಸ್ಥರ ಸಮ್ಮುಖದಲ್ಲಿ ತೀರ್ಮಾನ ಮಾಡಿ ಸ್ಮಶಾನಕ್ಕೆ ಯೋಗ್ಯವಲ್ಲದ ಭೂಮಿಯನ್ನು ಕಂಪನಿಯವರು 12 ಗುಂಟೆ ಜಮೀನನ್ನು ರಸ್ತೆಗೆ ಬಳಸಿಕೊಂಡು ಸುಮಾರು 1 ಕೋಟಿಗಿಂತ ಹೆಚ್ಚು ಬೆಲೆ ಬಾಳುವ ಜಾಗವನ್ನು ಸ್ಮಶಾನಕ್ಕೆ ಜಾಗ ನೀಡಿದ್ದಾರೆ.

ಅಲ್ಲದೆ ಗ್ರಾಮದಲ್ಲಿ ಸ್ಮಶಾನಕ್ಕೆ ಹೋಗುವ ರಸ್ತೆ ಸಂಪರ್ಕವೇ ಕಟ್ ಆಗಿತ್ತು. ಗ್ರಾಮದಲ್ಲಿ ಸಾವು ಆದಾಗ 2 ಕಿ.ಮೀ ಸುತ್ತಬಳಸಿ ಸ್ಮಶಾನಕ್ಕೆ ಬರಬೇಕಾದ ಸ್ಥಿತಿ ಇತ್ತು. ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಕಂಪನಿ ಸ್ಮಶಾನಕ್ಕೆ ಸ್ವಂತ 34 ಗುಂಟೆ ಜಾಗವನ್ನ ಬಿಟ್ಟು ಕೊಟ್ಟಿದೆ, ಇದರ ಜೊತೆಗೆ ಸ್ಮಶಾನಕ್ಕೆ ಸಂಪರ್ಕಿಸುವ ರಸ್ತೆ ನಿರ್ಮಾಣ ಮಾಡುವ ಭರವಸೆಯನ್ನು ಕೊಟ್ಟಿದೆ.

ಇನ್ನು ಈ ಭಾಗದಲ್ಲಿ ಸಾಕಷ್ಟು ಬಡ ಕುಟುಂಬಗಳು ವಾಸ ಮಾಡುತ್ತಿದ್ದು ಈ ಕಂಪನಿ ಸ್ಥಾಪನೆಯಾದರೆ ಬಡವರಿಗೆ ಉದ್ಯೋಗ ಸೃಷ್ಟಿಯಾಗುತ್ತೆ..ನಿರುದ್ಯೋಗದ ಸಮಸ್ಯೆ ನಿವಾರಣೆಯಾಗುತ್ತದೆ. ಈ ಉದ್ದೇಶದಿಂದ ಈ ಜಾಗವನ್ನು ಬಿಡಲು ಗ್ರಾಮಸ್ಥರು ಒಪ್ಪಿದ್ದಾರೆ ಎಂದು ಗ್ರಾಮಸ್ಥ ಮಂಜುನಾಥ್ ತಿಳಿಸಿದರು.

ಈ ವೇಳೆ ಗ್ರಾಮಸ್ಥರಾದ ಮಂಜುನಾಥ್, ಶ್ರೀನಿವಾಸ ರೆಡ್ಡಿ, ಮನೋಹರ್, ಶ್ರೀನಿವಾಸ ಮೂರ್ತಿ, ಕೃಷ್ಣಪ್ಪ , ರವಿಕುಮಾರ್, ರಾಮಸ್ವಾಮಿ, ಅಂಬರೀಶ್, ರಮೇಶ್, ಜಗಣ್ಣ, ವಿಜಿಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

2 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

2 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

3 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

6 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

16 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

1 day ago