ಖಾಸಗಿ ಕಂಪನಿಯಿಂದ ಸ್ಮಶಾನ ಜಾಗ ಒತ್ತುವರಿಯಾಗಿಲ್ಲ: ಖಾಸಗಿ ಕಂಪನಿಯಿಂದ ಸ್ಮಶಾನ ಭೂಮಿಗೆ 35 ಗುಂಟೆ ಜಮೀನು ಮಂಜೂರು

ಗ್ರಾಮದ ಸ್ಮಶಾನ ಜಾಗವನ್ನ ಖಾಸಗಿ ಕಂಪನಿ ಒತ್ತುವರಿ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದ್ದು, ಆದರೆ ಸ್ವಂತ ಊರಿನ ಗ್ರಾಮಸ್ಥರೇ ಒತ್ತುವರಿ ಆರೋಪ ತಳ್ಳಿ ಹಾಕಿದ್ದಾರೆ.. ಗ್ರಾಮಸ್ಥರ ಅನುಕೂಲಕ್ಕಾಗಿ ಸ್ಮಶಾನಕ್ಕೆ ಹೆಚ್ಚು ಭೂಮಿ ನೀಡಿದ್ದು ,ಮತ್ತು ಸ್ಮಶಾನಕ್ಕೆ ರಸ್ತೆ ಮಾಡಿಕೊಡುತ್ತಾರೆಂದು ಗ್ರಾಮಸ್ಥರು ಸಮರ್ಥನೆ ಮಾಡಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ವಡ್ಡರಹಳ್ಳಿ ಗ್ರಾಮದ ರೈಲ್ವೆ ಸ್ಟೇಷನ್ ಬಳಿ ಬಾಲಾಜಿ ಅರ್ಥ್ ಮೂವರ್ಸ್ ಕಂಪನಿ ಡಂಪಿಂಗ್ ಯಾರ್ಡ್ ನಿರ್ಮಾಣ ಮಾಡುತ್ತಿದೆ, ಸರ್ವೆ ನಂಬರ್ 19 ರಲ್ಲಿ ಗ್ರಾಮದ ಸ್ಮಶಾನ ಜಾಗವಿದ್ದು ಕಂಪನಿಗೆ ರಸ್ತೆ ಸಮಸ್ಯೆ ಎದುರಾಗಿತ್ತು..ಗ್ರಾಮಸ್ಥರ ಸಮ್ಮುಖದಲ್ಲಿ ತೀರ್ಮಾನ ಮಾಡಿ ಸ್ಮಶಾನಕ್ಕೆ ಯೋಗ್ಯವಲ್ಲದ ಭೂಮಿಯನ್ನು ಕಂಪನಿಯವರು 12 ಗುಂಟೆ ಜಮೀನನ್ನು ರಸ್ತೆಗೆ ಬಳಸಿಕೊಂಡು ಸುಮಾರು 1 ಕೋಟಿಗಿಂತ ಹೆಚ್ಚು ಬೆಲೆ ಬಾಳುವ ಜಾಗವನ್ನು ಸ್ಮಶಾನಕ್ಕೆ ಜಾಗ ನೀಡಿದ್ದಾರೆ.

ಅಲ್ಲದೆ ಗ್ರಾಮದಲ್ಲಿ ಸ್ಮಶಾನಕ್ಕೆ ಹೋಗುವ ರಸ್ತೆ ಸಂಪರ್ಕವೇ ಕಟ್ ಆಗಿತ್ತು. ಗ್ರಾಮದಲ್ಲಿ ಸಾವು ಆದಾಗ 2 ಕಿ.ಮೀ ಸುತ್ತಬಳಸಿ ಸ್ಮಶಾನಕ್ಕೆ ಬರಬೇಕಾದ ಸ್ಥಿತಿ ಇತ್ತು. ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಕಂಪನಿ ಸ್ಮಶಾನಕ್ಕೆ ಸ್ವಂತ 34 ಗುಂಟೆ ಜಾಗವನ್ನ ಬಿಟ್ಟು ಕೊಟ್ಟಿದೆ, ಇದರ ಜೊತೆಗೆ ಸ್ಮಶಾನಕ್ಕೆ ಸಂಪರ್ಕಿಸುವ ರಸ್ತೆ ನಿರ್ಮಾಣ ಮಾಡುವ ಭರವಸೆಯನ್ನು ಕೊಟ್ಟಿದೆ.

ಇನ್ನು ಈ ಭಾಗದಲ್ಲಿ ಸಾಕಷ್ಟು ಬಡ ಕುಟುಂಬಗಳು ವಾಸ ಮಾಡುತ್ತಿದ್ದು ಈ ಕಂಪನಿ ಸ್ಥಾಪನೆಯಾದರೆ ಬಡವರಿಗೆ ಉದ್ಯೋಗ ಸೃಷ್ಟಿಯಾಗುತ್ತೆ..ನಿರುದ್ಯೋಗದ ಸಮಸ್ಯೆ ನಿವಾರಣೆಯಾಗುತ್ತದೆ. ಈ ಉದ್ದೇಶದಿಂದ ಈ ಜಾಗವನ್ನು ಬಿಡಲು ಗ್ರಾಮಸ್ಥರು ಒಪ್ಪಿದ್ದಾರೆ ಎಂದು ಗ್ರಾಮಸ್ಥ ಮಂಜುನಾಥ್ ತಿಳಿಸಿದರು.

ಈ ವೇಳೆ ಗ್ರಾಮಸ್ಥರಾದ ಮಂಜುನಾಥ್, ಶ್ರೀನಿವಾಸ ರೆಡ್ಡಿ, ಮನೋಹರ್, ಶ್ರೀನಿವಾಸ ಮೂರ್ತಿ, ಕೃಷ್ಣಪ್ಪ , ರವಿಕುಮಾರ್, ರಾಮಸ್ವಾಮಿ, ಅಂಬರೀಶ್, ರಮೇಶ್, ಜಗಣ್ಣ, ವಿಜಿಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 hour ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

9 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

9 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago