ಗ್ರಾಮದ ಸ್ಮಶಾನ ಜಾಗವನ್ನ ಖಾಸಗಿ ಕಂಪನಿ ಒತ್ತುವರಿ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದ್ದು, ಆದರೆ ಸ್ವಂತ ಊರಿನ ಗ್ರಾಮಸ್ಥರೇ ಒತ್ತುವರಿ ಆರೋಪ ತಳ್ಳಿ ಹಾಕಿದ್ದಾರೆ.. ಗ್ರಾಮಸ್ಥರ ಅನುಕೂಲಕ್ಕಾಗಿ ಸ್ಮಶಾನಕ್ಕೆ ಹೆಚ್ಚು ಭೂಮಿ ನೀಡಿದ್ದು ,ಮತ್ತು ಸ್ಮಶಾನಕ್ಕೆ ರಸ್ತೆ ಮಾಡಿಕೊಡುತ್ತಾರೆಂದು ಗ್ರಾಮಸ್ಥರು ಸಮರ್ಥನೆ ಮಾಡಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ವಡ್ಡರಹಳ್ಳಿ ಗ್ರಾಮದ ರೈಲ್ವೆ ಸ್ಟೇಷನ್ ಬಳಿ ಬಾಲಾಜಿ ಅರ್ಥ್ ಮೂವರ್ಸ್ ಕಂಪನಿ ಡಂಪಿಂಗ್ ಯಾರ್ಡ್ ನಿರ್ಮಾಣ ಮಾಡುತ್ತಿದೆ, ಸರ್ವೆ ನಂಬರ್ 19 ರಲ್ಲಿ ಗ್ರಾಮದ ಸ್ಮಶಾನ ಜಾಗವಿದ್ದು ಕಂಪನಿಗೆ ರಸ್ತೆ ಸಮಸ್ಯೆ ಎದುರಾಗಿತ್ತು..ಗ್ರಾಮಸ್ಥರ ಸಮ್ಮುಖದಲ್ಲಿ ತೀರ್ಮಾನ ಮಾಡಿ ಸ್ಮಶಾನಕ್ಕೆ ಯೋಗ್ಯವಲ್ಲದ ಭೂಮಿಯನ್ನು ಕಂಪನಿಯವರು 12 ಗುಂಟೆ ಜಮೀನನ್ನು ರಸ್ತೆಗೆ ಬಳಸಿಕೊಂಡು ಸುಮಾರು 1 ಕೋಟಿಗಿಂತ ಹೆಚ್ಚು ಬೆಲೆ ಬಾಳುವ ಜಾಗವನ್ನು ಸ್ಮಶಾನಕ್ಕೆ ಜಾಗ ನೀಡಿದ್ದಾರೆ.
ಅಲ್ಲದೆ ಗ್ರಾಮದಲ್ಲಿ ಸ್ಮಶಾನಕ್ಕೆ ಹೋಗುವ ರಸ್ತೆ ಸಂಪರ್ಕವೇ ಕಟ್ ಆಗಿತ್ತು. ಗ್ರಾಮದಲ್ಲಿ ಸಾವು ಆದಾಗ 2 ಕಿ.ಮೀ ಸುತ್ತಬಳಸಿ ಸ್ಮಶಾನಕ್ಕೆ ಬರಬೇಕಾದ ಸ್ಥಿತಿ ಇತ್ತು. ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಕಂಪನಿ ಸ್ಮಶಾನಕ್ಕೆ ಸ್ವಂತ 34 ಗುಂಟೆ ಜಾಗವನ್ನ ಬಿಟ್ಟು ಕೊಟ್ಟಿದೆ, ಇದರ ಜೊತೆಗೆ ಸ್ಮಶಾನಕ್ಕೆ ಸಂಪರ್ಕಿಸುವ ರಸ್ತೆ ನಿರ್ಮಾಣ ಮಾಡುವ ಭರವಸೆಯನ್ನು ಕೊಟ್ಟಿದೆ.
ಇನ್ನು ಈ ಭಾಗದಲ್ಲಿ ಸಾಕಷ್ಟು ಬಡ ಕುಟುಂಬಗಳು ವಾಸ ಮಾಡುತ್ತಿದ್ದು ಈ ಕಂಪನಿ ಸ್ಥಾಪನೆಯಾದರೆ ಬಡವರಿಗೆ ಉದ್ಯೋಗ ಸೃಷ್ಟಿಯಾಗುತ್ತೆ..ನಿರುದ್ಯೋಗದ ಸಮಸ್ಯೆ ನಿವಾರಣೆಯಾಗುತ್ತದೆ. ಈ ಉದ್ದೇಶದಿಂದ ಈ ಜಾಗವನ್ನು ಬಿಡಲು ಗ್ರಾಮಸ್ಥರು ಒಪ್ಪಿದ್ದಾರೆ ಎಂದು ಗ್ರಾಮಸ್ಥ ಮಂಜುನಾಥ್ ತಿಳಿಸಿದರು.
ಈ ವೇಳೆ ಗ್ರಾಮಸ್ಥರಾದ ಮಂಜುನಾಥ್, ಶ್ರೀನಿವಾಸ ರೆಡ್ಡಿ, ಮನೋಹರ್, ಶ್ರೀನಿವಾಸ ಮೂರ್ತಿ, ಕೃಷ್ಣಪ್ಪ , ರವಿಕುಮಾರ್, ರಾಮಸ್ವಾಮಿ, ಅಂಬರೀಶ್, ರಮೇಶ್, ಜಗಣ್ಣ, ವಿಜಿಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…