ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್ ಬಳಿಯ ಖಾಸಗಿ ಕಂಪನಿ ಅವರಣದಲ್ಲಿ ನಡೆದಿದೆ…
ಹೊಂಗೆ ಮರದಲ್ಲಿ ಅಸ್ತಿ ಪಂಜರದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಸ್ಥಳಕ್ಕೆ ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ಮತ್ತು ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಐದಾರು ತಿಂಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದ್ದು, ಫ್ಯಾಕ್ಟರಿಯು 8 ಎಕರೆ ವಿಶಾಲವಾದ ಅವರಣವನ್ನ ಹೊಂದಿದ್ದು, ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿರುವದಿಲ್ಲ, ಗಮನಕ್ಕೆ ಬರದ ಹಿನ್ನೆಲೆ ಶವ ಸಂಪೂರ್ಣ ಕೊಳೆತು ಅಸ್ತಿಪಂಜರವಾಗಿದೆ, ತಲೆಯ ಭಾಗ ಮಾತ್ರ ಮರದಲ್ಲಿ ನೇತಾಡುತ್ತಿದ್ದು, ಕೆಳಗೆ ದೇಹದ ಇತರ ಭಾಗದ ಮೂಳೆಗಳು ಬಿದ್ದಿವೆ.
ಸದ್ಯ ಮೃತನ ಹೆಸರು, ವಯಸ್ಸು, ವಿಳಾಸ ತಿಳಿದುಬಂದಿರುವುದಿಲ್ಲ.
ಮೃತ ವ್ಯಕ್ತಿಯ ಗುರುತು ಪತ್ತೆಗಾಗಿ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ, ಮೃತನು ಫ್ಯಾಕ್ಟರಿ ನೌಕರನಾ ಅಥವಾ ಹೊರಗಿನ ವ್ಯಕ್ತಿಯಾ, ಮೇಲ್ನೋಟಕ್ಕೆ ಆತ್ಮಹತ್ಯೆಯಂತೆ ಕಂಡು ಬಂದರು, ಸಂಪೂರ್ಣ ತನಿಖೆಯ ನಂತರ ಪ್ರಕರಣದ ಸತ್ಯಾಂಶ ಬೆಳಕಿಗೆ ಬರಲಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ….
ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…
ದೇವರಹಿಪ್ಪರಗಿ: ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…
ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…
ಸ್ವಾಮಿಯೇ........ ಶರಣಂ ಅಯ್ಯಪ್ಪ......... ಮಹಿಳೆಯರಿಗೆ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಎಂಬ ಬಗ್ಗೆ…
ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್ ತಲಾ ಒಂದು ಕೋಟಿ ರೂ.…
ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…