Categories: ಕೋಲಾರ

ಖಾಸಗಿ ಕಾಲೇಜುಗಳಲ್ಲಿ ಬಿಜೆಪಿ ಸದಸ್ಯತ್ವ ಪ್ರಾರಂಭ

ಕೋಲಾರ: ನಗರ ಮತ್ತು ಗ್ರಾಮೀಣ ಪ್ರದೇಶದ ಖಾಸಗೀ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಲ್ಲಿನ ವಿಧ್ಯಾರ್ಥಿಗಳ ಒತ್ತಾಯದ ಮೇರೆಗೆ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಓಂಶಕ್ತಿ ಚಲಪತಿ ನೇತೃತ್ವದಲ್ಲಿ ಬುಧವಾರ ಬಿಜೆಪಿ ಪಕ್ಷದ ಸದಸ್ಯತ್ವವನ್ನು ಮಾಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಓಂಶಕ್ತಿ ಚಲಪತಿ ದೇಶದಲ್ಲಿ ಶಿಕ್ಷಣವು ನಮ್ಮ ನಾಗರೀಕತೆಯ ನಿರ್ಮಾಣಕ್ಕೆ ಅಡಿಪಾಯವನ್ನು ಹಾಕಿಕೊಟ್ಟಿದೆ ವಿಧ್ಯಾರ್ಥಿಗಳಿಗೆ ಜ್ಞಾನದ ಜೊತೆಗೆ ತಮ್ಮ ಭವಿಷ್ಯವನ್ನು ಶಿಕ್ಷಣ ನಿರ್ಮಿಸುತ್ತಾ ಇದ್ದು ಇದಕ್ಕಾಗಿಯೇ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಶಿಕ್ಷಣಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದಾರೆ ದೇಶದಲ್ಲಿ ಬಿಜೆಪಿ ಪಕ್ಷವು ಉತ್ತಮ ಆಡಳಿತದೊಂದಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುವುದು ಸರಕಾರದ ಉದ್ದೇಶವಾಗಿದ್ದು ಭವಿಷ್ಯದ ದೃಷ್ಟಿಯಿಂದ ಬಿಜೆಪಿ ಪಕ್ಷದ ಸದಸ್ಯತ್ವ ಪಡೆದು ಬೆಂಬಲಿಸುವಂತೆ ಮನವಿ ಮಾಡಿದರು.

ಭಾರತ ದೇಶವು ಕಳೆದ 2014 ರ ನಂತರ ನರೇಂದ್ರ ಮೋದಿ ಅಧಿಕಾರಕ್ಕೆ ಬಂದು ವಿಶ್ವದಲ್ಲಿಯೇ ಗುರುತಿಸಿಕೊಳ್ಳುಂತೆ ಮಾಡಿದ್ದಾರೆ ಜೊತೆಗೆ ದೇಶವು ಸಮಗ್ರ ಮತ್ತು ಸರ್ವತೋಮುಖ ಅಭಿವೃದ್ಧಿಯ ಕಡೆಗೆ ಹೊರಟಿದ್ದು ಇದಕ್ಕೆ ಮೋದಿ ಮತ್ತು ಬಿಜೆಪಿಯ ಆಡಳಿತವೇ ಕಾರಣವಾಗಿದೆ ಸತತವಾಗಿ ಮೂರನೇ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬಂದಿದ್ದು ವಿಧ್ಯಾರ್ಥಿಗಳಿಗೆ ಮತ್ತು ಯುವಕರಿಗೆ ಭರವಸೆಯ ತಳಹದಿಯನ್ನು ಹಾಕಿಕೊಟ್ಟಿದೆ ವಿಧ್ಯಾರ್ಥಿಗಳು ಕೌಶಲ್ಯವನ್ನು ಬೆಳೆಸಿಕೊಂಡು ಭವಿಷ್ಯಕ್ಕೆ ದಾರಿಯಾಗಿ ಮಾಡಲು ಬಿಜೆಪಿಯನ್ನು ಬೆಂಬಲಿಸಿ ಎಂದರು.

ಬಿಜೆಪಿ ಪಕ್ಷವು ವಿಧ್ಯಾರ್ಥಿಗಳಿಗೆ ಹಾಗೂ ಜನರಿಗೆ ಸ್ಪಂದಿಸುವ ಕೆಲಸವನ್ನು ಮೊದಲಿನಿಂದಲೂ ಮಾಡಿಕೊಂಡು ಬಂದಿದೆ. ಕೋವಿಡ್ ದಿನಗಳಲ್ಲೂ ಎಲ್ಲರೂ ಸಂಕಷ್ಟದಲ್ಲಿದ್ದಾಗ ಬಿಜೆಪಿ ಕಾರ್ಯಕರ್ತರು ಮುಖಂಡರು ಮನೆಯಲ್ಲಿ ಕೂರದೆ ಜನರ ಸಂಕಷ್ಟಗಳಿಗೆ ಸ್ಪಂದಿಸಿದರು ಉಚಿತ ಆಹಾರ ಧಾನ್ಯದ ಕಿಟ್‌, ಔಷಧೀ, ಸೇರಿದಂತೆ ಅಗತ್ಯ ವಸ್ತುಗಳನ್ನು ನೀಡಿದ್ದು ನರೇಂದ್ರ ಮೋದಿ ಅವರ ಕನಸು ವಿಕಸಿತ ಭಾರತವನ್ನು ನನಸು ಮಾಡುವ ಕೆಲಸಕ್ಕೆ ವಿಧ್ಯಾರ್ಥಿಗಳು ಜನರು ಎಲ್ಲರೂ ಕೈ ಜೋಡಿಸಬೇಕು ಜೊತೆಗೆ ಈ ಅಭಿಯಾನವನ್ನು ತಮ್ಮ ತಮ್ಮ ಮನೆ ಮನೆಗೂ ತೆಗೆದುಕೊಂಡು ಹೋಗಿ ಪಕ್ಷವನ್ನು ಬಲ ಪಡಿಸಬೇಕು ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಸಾ.ಮಾ ಅನಿಲ್ ಬಾಬು, ತಾಲೂಕು ಯುವ ಮೋರ್ಚಾ ಉಪಾಧ್ಯಕ್ಷ ಕಿರಣ್, ಕಾರ್ಯದರ್ಶಿ ದಿನೇಶ್, ಮುಖಂಡರಾದ ಮೌನೀಶ್, ನರಸಿಂಹ, ಇದ್ದರು.

Ramesh Babu

Journalist

Recent Posts

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

26 minutes ago

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…

1 hour ago

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

2 hours ago

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

4 hours ago

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

11 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

11 hours ago