Categories: ಕೋಲಾರ

ಖಾಸಗಿ ಕಾಲೇಜುಗಳಲ್ಲಿ ಬಿಜೆಪಿ ಸದಸ್ಯತ್ವ ಪ್ರಾರಂಭ

ಕೋಲಾರ: ನಗರ ಮತ್ತು ಗ್ರಾಮೀಣ ಪ್ರದೇಶದ ಖಾಸಗೀ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಲ್ಲಿನ ವಿಧ್ಯಾರ್ಥಿಗಳ ಒತ್ತಾಯದ ಮೇರೆಗೆ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಓಂಶಕ್ತಿ ಚಲಪತಿ ನೇತೃತ್ವದಲ್ಲಿ ಬುಧವಾರ ಬಿಜೆಪಿ ಪಕ್ಷದ ಸದಸ್ಯತ್ವವನ್ನು ಮಾಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಓಂಶಕ್ತಿ ಚಲಪತಿ ದೇಶದಲ್ಲಿ ಶಿಕ್ಷಣವು ನಮ್ಮ ನಾಗರೀಕತೆಯ ನಿರ್ಮಾಣಕ್ಕೆ ಅಡಿಪಾಯವನ್ನು ಹಾಕಿಕೊಟ್ಟಿದೆ ವಿಧ್ಯಾರ್ಥಿಗಳಿಗೆ ಜ್ಞಾನದ ಜೊತೆಗೆ ತಮ್ಮ ಭವಿಷ್ಯವನ್ನು ಶಿಕ್ಷಣ ನಿರ್ಮಿಸುತ್ತಾ ಇದ್ದು ಇದಕ್ಕಾಗಿಯೇ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಶಿಕ್ಷಣಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದಾರೆ ದೇಶದಲ್ಲಿ ಬಿಜೆಪಿ ಪಕ್ಷವು ಉತ್ತಮ ಆಡಳಿತದೊಂದಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುವುದು ಸರಕಾರದ ಉದ್ದೇಶವಾಗಿದ್ದು ಭವಿಷ್ಯದ ದೃಷ್ಟಿಯಿಂದ ಬಿಜೆಪಿ ಪಕ್ಷದ ಸದಸ್ಯತ್ವ ಪಡೆದು ಬೆಂಬಲಿಸುವಂತೆ ಮನವಿ ಮಾಡಿದರು.

ಭಾರತ ದೇಶವು ಕಳೆದ 2014 ರ ನಂತರ ನರೇಂದ್ರ ಮೋದಿ ಅಧಿಕಾರಕ್ಕೆ ಬಂದು ವಿಶ್ವದಲ್ಲಿಯೇ ಗುರುತಿಸಿಕೊಳ್ಳುಂತೆ ಮಾಡಿದ್ದಾರೆ ಜೊತೆಗೆ ದೇಶವು ಸಮಗ್ರ ಮತ್ತು ಸರ್ವತೋಮುಖ ಅಭಿವೃದ್ಧಿಯ ಕಡೆಗೆ ಹೊರಟಿದ್ದು ಇದಕ್ಕೆ ಮೋದಿ ಮತ್ತು ಬಿಜೆಪಿಯ ಆಡಳಿತವೇ ಕಾರಣವಾಗಿದೆ ಸತತವಾಗಿ ಮೂರನೇ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬಂದಿದ್ದು ವಿಧ್ಯಾರ್ಥಿಗಳಿಗೆ ಮತ್ತು ಯುವಕರಿಗೆ ಭರವಸೆಯ ತಳಹದಿಯನ್ನು ಹಾಕಿಕೊಟ್ಟಿದೆ ವಿಧ್ಯಾರ್ಥಿಗಳು ಕೌಶಲ್ಯವನ್ನು ಬೆಳೆಸಿಕೊಂಡು ಭವಿಷ್ಯಕ್ಕೆ ದಾರಿಯಾಗಿ ಮಾಡಲು ಬಿಜೆಪಿಯನ್ನು ಬೆಂಬಲಿಸಿ ಎಂದರು.

ಬಿಜೆಪಿ ಪಕ್ಷವು ವಿಧ್ಯಾರ್ಥಿಗಳಿಗೆ ಹಾಗೂ ಜನರಿಗೆ ಸ್ಪಂದಿಸುವ ಕೆಲಸವನ್ನು ಮೊದಲಿನಿಂದಲೂ ಮಾಡಿಕೊಂಡು ಬಂದಿದೆ. ಕೋವಿಡ್ ದಿನಗಳಲ್ಲೂ ಎಲ್ಲರೂ ಸಂಕಷ್ಟದಲ್ಲಿದ್ದಾಗ ಬಿಜೆಪಿ ಕಾರ್ಯಕರ್ತರು ಮುಖಂಡರು ಮನೆಯಲ್ಲಿ ಕೂರದೆ ಜನರ ಸಂಕಷ್ಟಗಳಿಗೆ ಸ್ಪಂದಿಸಿದರು ಉಚಿತ ಆಹಾರ ಧಾನ್ಯದ ಕಿಟ್‌, ಔಷಧೀ, ಸೇರಿದಂತೆ ಅಗತ್ಯ ವಸ್ತುಗಳನ್ನು ನೀಡಿದ್ದು ನರೇಂದ್ರ ಮೋದಿ ಅವರ ಕನಸು ವಿಕಸಿತ ಭಾರತವನ್ನು ನನಸು ಮಾಡುವ ಕೆಲಸಕ್ಕೆ ವಿಧ್ಯಾರ್ಥಿಗಳು ಜನರು ಎಲ್ಲರೂ ಕೈ ಜೋಡಿಸಬೇಕು ಜೊತೆಗೆ ಈ ಅಭಿಯಾನವನ್ನು ತಮ್ಮ ತಮ್ಮ ಮನೆ ಮನೆಗೂ ತೆಗೆದುಕೊಂಡು ಹೋಗಿ ಪಕ್ಷವನ್ನು ಬಲ ಪಡಿಸಬೇಕು ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಸಾ.ಮಾ ಅನಿಲ್ ಬಾಬು, ತಾಲೂಕು ಯುವ ಮೋರ್ಚಾ ಉಪಾಧ್ಯಕ್ಷ ಕಿರಣ್, ಕಾರ್ಯದರ್ಶಿ ದಿನೇಶ್, ಮುಖಂಡರಾದ ಮೌನೀಶ್, ನರಸಿಂಹ, ಇದ್ದರು.

Ramesh Babu

Journalist

Recent Posts

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

1 hour ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

2 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

7 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

8 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

15 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

23 hours ago