Categories: ಕೋಲಾರ

ಖಾಸಗಿ ಕಾಲೇಜುಗಳಲ್ಲಿ ಬಿಜೆಪಿ ಸದಸ್ಯತ್ವ ಪ್ರಾರಂಭ

ಕೋಲಾರ: ನಗರ ಮತ್ತು ಗ್ರಾಮೀಣ ಪ್ರದೇಶದ ಖಾಸಗೀ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಲ್ಲಿನ ವಿಧ್ಯಾರ್ಥಿಗಳ ಒತ್ತಾಯದ ಮೇರೆಗೆ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಓಂಶಕ್ತಿ ಚಲಪತಿ ನೇತೃತ್ವದಲ್ಲಿ ಬುಧವಾರ ಬಿಜೆಪಿ ಪಕ್ಷದ ಸದಸ್ಯತ್ವವನ್ನು ಮಾಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಓಂಶಕ್ತಿ ಚಲಪತಿ ದೇಶದಲ್ಲಿ ಶಿಕ್ಷಣವು ನಮ್ಮ ನಾಗರೀಕತೆಯ ನಿರ್ಮಾಣಕ್ಕೆ ಅಡಿಪಾಯವನ್ನು ಹಾಕಿಕೊಟ್ಟಿದೆ ವಿಧ್ಯಾರ್ಥಿಗಳಿಗೆ ಜ್ಞಾನದ ಜೊತೆಗೆ ತಮ್ಮ ಭವಿಷ್ಯವನ್ನು ಶಿಕ್ಷಣ ನಿರ್ಮಿಸುತ್ತಾ ಇದ್ದು ಇದಕ್ಕಾಗಿಯೇ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಶಿಕ್ಷಣಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದಾರೆ ದೇಶದಲ್ಲಿ ಬಿಜೆಪಿ ಪಕ್ಷವು ಉತ್ತಮ ಆಡಳಿತದೊಂದಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುವುದು ಸರಕಾರದ ಉದ್ದೇಶವಾಗಿದ್ದು ಭವಿಷ್ಯದ ದೃಷ್ಟಿಯಿಂದ ಬಿಜೆಪಿ ಪಕ್ಷದ ಸದಸ್ಯತ್ವ ಪಡೆದು ಬೆಂಬಲಿಸುವಂತೆ ಮನವಿ ಮಾಡಿದರು.

ಭಾರತ ದೇಶವು ಕಳೆದ 2014 ರ ನಂತರ ನರೇಂದ್ರ ಮೋದಿ ಅಧಿಕಾರಕ್ಕೆ ಬಂದು ವಿಶ್ವದಲ್ಲಿಯೇ ಗುರುತಿಸಿಕೊಳ್ಳುಂತೆ ಮಾಡಿದ್ದಾರೆ ಜೊತೆಗೆ ದೇಶವು ಸಮಗ್ರ ಮತ್ತು ಸರ್ವತೋಮುಖ ಅಭಿವೃದ್ಧಿಯ ಕಡೆಗೆ ಹೊರಟಿದ್ದು ಇದಕ್ಕೆ ಮೋದಿ ಮತ್ತು ಬಿಜೆಪಿಯ ಆಡಳಿತವೇ ಕಾರಣವಾಗಿದೆ ಸತತವಾಗಿ ಮೂರನೇ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬಂದಿದ್ದು ವಿಧ್ಯಾರ್ಥಿಗಳಿಗೆ ಮತ್ತು ಯುವಕರಿಗೆ ಭರವಸೆಯ ತಳಹದಿಯನ್ನು ಹಾಕಿಕೊಟ್ಟಿದೆ ವಿಧ್ಯಾರ್ಥಿಗಳು ಕೌಶಲ್ಯವನ್ನು ಬೆಳೆಸಿಕೊಂಡು ಭವಿಷ್ಯಕ್ಕೆ ದಾರಿಯಾಗಿ ಮಾಡಲು ಬಿಜೆಪಿಯನ್ನು ಬೆಂಬಲಿಸಿ ಎಂದರು.

ಬಿಜೆಪಿ ಪಕ್ಷವು ವಿಧ್ಯಾರ್ಥಿಗಳಿಗೆ ಹಾಗೂ ಜನರಿಗೆ ಸ್ಪಂದಿಸುವ ಕೆಲಸವನ್ನು ಮೊದಲಿನಿಂದಲೂ ಮಾಡಿಕೊಂಡು ಬಂದಿದೆ. ಕೋವಿಡ್ ದಿನಗಳಲ್ಲೂ ಎಲ್ಲರೂ ಸಂಕಷ್ಟದಲ್ಲಿದ್ದಾಗ ಬಿಜೆಪಿ ಕಾರ್ಯಕರ್ತರು ಮುಖಂಡರು ಮನೆಯಲ್ಲಿ ಕೂರದೆ ಜನರ ಸಂಕಷ್ಟಗಳಿಗೆ ಸ್ಪಂದಿಸಿದರು ಉಚಿತ ಆಹಾರ ಧಾನ್ಯದ ಕಿಟ್‌, ಔಷಧೀ, ಸೇರಿದಂತೆ ಅಗತ್ಯ ವಸ್ತುಗಳನ್ನು ನೀಡಿದ್ದು ನರೇಂದ್ರ ಮೋದಿ ಅವರ ಕನಸು ವಿಕಸಿತ ಭಾರತವನ್ನು ನನಸು ಮಾಡುವ ಕೆಲಸಕ್ಕೆ ವಿಧ್ಯಾರ್ಥಿಗಳು ಜನರು ಎಲ್ಲರೂ ಕೈ ಜೋಡಿಸಬೇಕು ಜೊತೆಗೆ ಈ ಅಭಿಯಾನವನ್ನು ತಮ್ಮ ತಮ್ಮ ಮನೆ ಮನೆಗೂ ತೆಗೆದುಕೊಂಡು ಹೋಗಿ ಪಕ್ಷವನ್ನು ಬಲ ಪಡಿಸಬೇಕು ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಸಾ.ಮಾ ಅನಿಲ್ ಬಾಬು, ತಾಲೂಕು ಯುವ ಮೋರ್ಚಾ ಉಪಾಧ್ಯಕ್ಷ ಕಿರಣ್, ಕಾರ್ಯದರ್ಶಿ ದಿನೇಶ್, ಮುಖಂಡರಾದ ಮೌನೀಶ್, ನರಸಿಂಹ, ಇದ್ದರು.

Ramesh Babu

Journalist

Recent Posts

NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ನಗದು-ಚಿನ್ನ ಪತ್ತೆ‌..!

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…

9 hours ago

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: MLC ಚುನಾವಣೆ, ಎಸ್‌ಐಆರ್ ಕುರಿತ ಚರ್ಚೆ

ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…

10 hours ago

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

15 hours ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

24 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

1 day ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

1 day ago