ರಾಜ್ಯದ ಎಲ್ಲಾ ಖಾಸಗಿ ಕೈಗಾರಿಕೆಗಳಲ್ಲಿ “ಸಿ ಮತ್ತು ಡಿ” ದರ್ಜೆಯ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಕನ್ನಡಿಗರ ನೇಮಕಾತಿಯನ್ನು ಕಡ್ಡಾಯಗೊಳಿಸುವ ವಿಧೇಯಕಕ್ಕೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ.
ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
7ನೇ ವೇತನ ಆಯೋಗ ವರದಿಯ ಶಿಫಾರಸ್ಸುಗಳನ್ನು ಆಗಸ್ಟ್ 01 ರಿಂದ ಜಾರಿಗೆ
ಅದೇರೀತಿ ನಮ್ಮ ಸರ್ಕಾರವು 7ನೇ ವೇತನ ಆಯೋಗದ ವರದಿಯ ಶಿಫಾರಸ್ಸುಗಳನ್ನು ಆಗಸ್ಟ್ 01 ರಿಂದ ಜಾರಿಗೆ ಕೊಡಲಿದೆ. ಇದರಿಂದ ಸರ್ಕಾರಿ ನೌಕರರ ಮೂಲವೇತನ ಮತ್ತು ಪಿಂಚಣಿಯಲ್ಲಿ ಶೇ.58.50 ಹಾಗೂ ಮನೆಬಾಡಿಗೆ ಭತ್ಯೆಯಲ್ಲಿ ಶೇ.32 ಹೆಚ್ಚಳವಾಗಲಿದೆ. ಈ ಪರಿಷ್ಕರಣೆಯು ಅನುದಾನಿತ ಶಿಕ್ಷಣ ಸಂಸ್ಥೆ ಹಾಗೂ ಸ್ಥಳೀಯ ಸಂಸ್ಥೆಗಳ ನೌಕರರು ಮತ್ತು ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳಿಗೂ ಅನ್ವಯವಾಗಲಿದ್ದು, ಇದಕ್ಕಾಗಿ ವಾರ್ಷಿಕ ರೂ.20,208 ಕೋಟಿ ಹೆಚ್ಚುವರಿ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಹೇಳಿದ್ದಾರೆ.
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…