ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯತಿ ಬಿಸವನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪಂಚಾಯಿತಿಯಿಂದ ನಿರ್ವಹಣೆ ಮಾಡದೇ ಖಾಸಗಿ ವ್ಯಕ್ತಿಗಳಿಗೆ ಟೆಂಡರ್ ನೀಡಿರುತ್ತಾರೆ. ಇದರ ಪರಿಣಾಮ ಖಾಸಗಿ ಟೆಂಡರ್ ದಾರರು ನೀಡಿರುವ ಕಾರ್ಡುಗಳನ್ನು ಒಂದು ತಿಂಗಳಿಂದ ರೀಚಾಜ್೯ ಮಾಡದೇ ಇರುವ ಪರಿಣಾಮ ಬಿಸವನಹಳ್ಳಿ ಗ್ರಾಮಸ್ಥರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ.
ಖಾಸಗಿಯವರು ಶುದ್ಧ ಕುಡಿಯುವ ನೀರಿನ ಘಟಕದ ನಿರ್ವಹಣೆ ಮಾಡುತ್ತಿದ್ದಾರೆ. ಖಾಸಗಿ ಟೆಂಡರ್ ದಾರರು ನೀಡಿರುವ ಕಾರ್ಡುಗಳನ್ನು ಒಂದು ತಿಂಗಳಿಂದ ರೀಚಾಜ್೯ ಮಾಡದೇ ಇರುವ ಪರಿಣಾಮ ಕಳೆದ ಒಂದು ತಿಂಗಳಿಂದ ಕುಡಿಯಲು ನೀರಿಲ್ಲದೇ ಜನ ಪರಿತಪಿಸುತ್ತಿದ್ದಾರೆ. ವಾರಕ್ಕೊಮ್ಮೆ ರೀಚಾರ್ಜ್ ಮಾಡಬೇಕು, ಆದರೆ ತಿಂಗಳಾದರೂ ರೀಚಾರ್ಜ್ ಮಾಡುತ್ತಿಲ್ಲ. ಕಾಯಿನ್ ಹಾಕಿ ನೀರು ಪಡೆಯಲು ಆಗುತ್ತಿಲ್ಲ. ಈ ಕುರಿತು ಪ.ಪಂ ಅಧ್ಯಕ್ಷರು, ಉಪಾದ್ಯಕ್ಷರು, ಸದಸ್ಯರು, ಆಡಳಿತಾಧಿಕಾರಿಗಳ ಗಮನಕ್ಕೆ ತಂದರೂ ಏನೂ ಕ್ರಮ ಕೈಗೊಂಡಿಲ್ಲ. ಚುನಾವಣೆ ಪೂರ್ವದಲ್ಲಿ ನೀರಿನ ಘಟಕದಲ್ಲಿ ಏನೂ ಸಮಸ್ಯೆ ಇರಲಿಲ್ಲ. ಒಂದು ವೇಳೆ ಸಮಸ್ಯೆ ಕಂಡುಬಂದಿದ್ದರೆ ಕೂಡಲೇ ಸರಿಪಡಿಸುತ್ತಿದ್ದರು. ಆದರೆ ಚುನಾವಣೆ ಮುಗಿದ ನಂತರ ನಮ್ಮ ಸಮಸ್ಯೆ ಕೇಳೋರಿಲ್ಲ. ಮುಖ್ಯಾಧಿಕಾರಿ ಜನರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ. ಸಾರ್ವಜನಿಕರ ಸಮಸ್ಯೆ ಬಗೆಹರಿಸದೇ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಕೇಳಿ ಎಂದು ತಪ್ಪಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ದೂರಿದರು.
ನಮ್ಮ ಊರಿನ ಶುದ್ಧ ಕುಡಿಯುವ ನೀರಿನ ಘಟಕದ ನಿರ್ವಹಣೆ ಮಾಡಲು ಖಾಸಗಿಯವರಿಗೆ ಟೆಂಡರ್ ನೀಡದೇ, ಪಟ್ಟಣ ಪಂಚಾಯಿತಿಯವರೇ ಜವಾಬ್ದಾರಿ ತೆಗೆದುಕೊಳ್ಳಬೇಕು. ಒಂದೆರೆಡು ದಿನಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಪಂಚಾಯಿತಿ ಎದುರು ಧರಣಿ ಕುಳಿತುಕೊಳ್ಳಲಾಗುವುದು ಎಂದು ಎಚ್ಚರಿಸಿದರು.. ಜೊತೆಗೆ ರಿಚಾರ್ಜ್ ಮಾಡುವವರೆಗೂ ಪರ್ಯಾಯವಾಗಿ ಟ್ಯಾಂಕರ್ ಮೂಲಕ ನೀರಿನ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು..
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…