ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯತಿ ಬಿಸವನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪಂಚಾಯಿತಿಯಿಂದ ನಿರ್ವಹಣೆ ಮಾಡದೇ ಖಾಸಗಿ ವ್ಯಕ್ತಿಗಳಿಗೆ ಟೆಂಡರ್ ನೀಡಿರುತ್ತಾರೆ. ಇದರ ಪರಿಣಾಮ ಖಾಸಗಿ ಟೆಂಡರ್ ದಾರರು ನೀಡಿರುವ ಕಾರ್ಡುಗಳನ್ನು ಒಂದು ತಿಂಗಳಿಂದ ರೀಚಾಜ್೯ ಮಾಡದೇ ಇರುವ ಪರಿಣಾಮ ಬಿಸವನಹಳ್ಳಿ ಗ್ರಾಮಸ್ಥರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ.
ಖಾಸಗಿಯವರು ಶುದ್ಧ ಕುಡಿಯುವ ನೀರಿನ ಘಟಕದ ನಿರ್ವಹಣೆ ಮಾಡುತ್ತಿದ್ದಾರೆ. ಖಾಸಗಿ ಟೆಂಡರ್ ದಾರರು ನೀಡಿರುವ ಕಾರ್ಡುಗಳನ್ನು ಒಂದು ತಿಂಗಳಿಂದ ರೀಚಾಜ್೯ ಮಾಡದೇ ಇರುವ ಪರಿಣಾಮ ಕಳೆದ ಒಂದು ತಿಂಗಳಿಂದ ಕುಡಿಯಲು ನೀರಿಲ್ಲದೇ ಜನ ಪರಿತಪಿಸುತ್ತಿದ್ದಾರೆ. ವಾರಕ್ಕೊಮ್ಮೆ ರೀಚಾರ್ಜ್ ಮಾಡಬೇಕು, ಆದರೆ ತಿಂಗಳಾದರೂ ರೀಚಾರ್ಜ್ ಮಾಡುತ್ತಿಲ್ಲ. ಕಾಯಿನ್ ಹಾಕಿ ನೀರು ಪಡೆಯಲು ಆಗುತ್ತಿಲ್ಲ. ಈ ಕುರಿತು ಪ.ಪಂ ಅಧ್ಯಕ್ಷರು, ಉಪಾದ್ಯಕ್ಷರು, ಸದಸ್ಯರು, ಆಡಳಿತಾಧಿಕಾರಿಗಳ ಗಮನಕ್ಕೆ ತಂದರೂ ಏನೂ ಕ್ರಮ ಕೈಗೊಂಡಿಲ್ಲ. ಚುನಾವಣೆ ಪೂರ್ವದಲ್ಲಿ ನೀರಿನ ಘಟಕದಲ್ಲಿ ಏನೂ ಸಮಸ್ಯೆ ಇರಲಿಲ್ಲ. ಒಂದು ವೇಳೆ ಸಮಸ್ಯೆ ಕಂಡುಬಂದಿದ್ದರೆ ಕೂಡಲೇ ಸರಿಪಡಿಸುತ್ತಿದ್ದರು. ಆದರೆ ಚುನಾವಣೆ ಮುಗಿದ ನಂತರ ನಮ್ಮ ಸಮಸ್ಯೆ ಕೇಳೋರಿಲ್ಲ. ಮುಖ್ಯಾಧಿಕಾರಿ ಜನರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ. ಸಾರ್ವಜನಿಕರ ಸಮಸ್ಯೆ ಬಗೆಹರಿಸದೇ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಕೇಳಿ ಎಂದು ತಪ್ಪಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ದೂರಿದರು.
ನಮ್ಮ ಊರಿನ ಶುದ್ಧ ಕುಡಿಯುವ ನೀರಿನ ಘಟಕದ ನಿರ್ವಹಣೆ ಮಾಡಲು ಖಾಸಗಿಯವರಿಗೆ ಟೆಂಡರ್ ನೀಡದೇ, ಪಟ್ಟಣ ಪಂಚಾಯಿತಿಯವರೇ ಜವಾಬ್ದಾರಿ ತೆಗೆದುಕೊಳ್ಳಬೇಕು. ಒಂದೆರೆಡು ದಿನಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಪಂಚಾಯಿತಿ ಎದುರು ಧರಣಿ ಕುಳಿತುಕೊಳ್ಳಲಾಗುವುದು ಎಂದು ಎಚ್ಚರಿಸಿದರು.. ಜೊತೆಗೆ ರಿಚಾರ್ಜ್ ಮಾಡುವವರೆಗೂ ಪರ್ಯಾಯವಾಗಿ ಟ್ಯಾಂಕರ್ ಮೂಲಕ ನೀರಿನ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು..
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…