ಖಾಸಗಿ ಟೆಂಡರ್ ದಾರರ ಬೇಜವಾಬ್ದಾರಿ: ಕುಡಿಯಲು ನೀರಿಲ್ಲದೇ ಜನ ಪರದಾಟ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯತಿ ಬಿಸವನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪಂಚಾಯಿತಿಯಿಂದ ನಿರ್ವಹಣೆ ಮಾಡದೇ ಖಾಸಗಿ ವ್ಯಕ್ತಿಗಳಿಗೆ ಟೆಂಡರ್ ನೀಡಿರುತ್ತಾರೆ. ಇದರ ಪರಿಣಾಮ ಖಾಸಗಿ ಟೆಂಡರ್ ದಾರರು ನೀಡಿರುವ ಕಾರ್ಡುಗಳನ್ನು ಒಂದು ತಿಂಗಳಿಂದ  ರೀಚಾಜ್೯ ಮಾಡದೇ ಇರುವ ಪರಿಣಾಮ ಬಿಸವನಹಳ್ಳಿ ಗ್ರಾಮಸ್ಥರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ.

ಖಾಸಗಿಯವರು ಶುದ್ಧ ಕುಡಿಯುವ ನೀರಿನ ಘಟಕದ ನಿರ್ವಹಣೆ ಮಾಡುತ್ತಿದ್ದಾರೆ. ಖಾಸಗಿ ಟೆಂಡರ್ ದಾರರು ನೀಡಿರುವ ಕಾರ್ಡುಗಳನ್ನು ಒಂದು ತಿಂಗಳಿಂದ ರೀಚಾಜ್೯ ಮಾಡದೇ ಇರುವ ಪರಿಣಾಮ ಕಳೆದ ಒಂದು ತಿಂಗಳಿಂದ ಕುಡಿಯಲು ನೀರಿಲ್ಲದೇ ಜನ ಪರಿತಪಿಸುತ್ತಿದ್ದಾರೆ. ವಾರಕ್ಕೊಮ್ಮೆ ರೀಚಾರ್ಜ್ ಮಾಡಬೇಕು, ಆದರೆ ತಿಂಗಳಾದರೂ ರೀಚಾರ್ಜ್ ಮಾಡುತ್ತಿಲ್ಲ. ಕಾಯಿನ್ ಹಾಕಿ ನೀರು ಪಡೆಯಲು ಆಗುತ್ತಿಲ್ಲ. ಈ ಕುರಿತು ಪ.ಪಂ ಅಧ್ಯಕ್ಷರು, ಉಪಾದ್ಯಕ್ಷರು, ಸದಸ್ಯರು, ಆಡಳಿತಾಧಿಕಾರಿಗಳ ಗಮನಕ್ಕೆ ತಂದರೂ ಏನೂ ಕ್ರಮ ಕೈಗೊಂಡಿಲ್ಲ. ಚುನಾವಣೆ ಪೂರ್ವದಲ್ಲಿ ನೀರಿನ ಘಟಕದಲ್ಲಿ ಏನೂ ಸಮಸ್ಯೆ ಇರಲಿಲ್ಲ. ಒಂದು ವೇಳೆ ಸಮಸ್ಯೆ ಕಂಡುಬಂದಿದ್ದರೆ ಕೂಡಲೇ ಸರಿಪಡಿಸುತ್ತಿದ್ದರು. ಆದರೆ ಚುನಾವಣೆ ಮುಗಿದ ನಂತರ ನಮ್ಮ ಸಮಸ್ಯೆ ಕೇಳೋರಿಲ್ಲ. ಮುಖ್ಯಾಧಿಕಾರಿ ಜನರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ. ಸಾರ್ವಜನಿಕರ ಸಮಸ್ಯೆ ಬಗೆಹರಿಸದೇ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಕೇಳಿ ಎಂದು ತಪ್ಪಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ದೂರಿದರು.

ನಮ್ಮ ಊರಿನ ಶುದ್ಧ ಕುಡಿಯುವ ನೀರಿನ ಘಟಕದ ನಿರ್ವಹಣೆ ಮಾಡಲು ಖಾಸಗಿಯವರಿಗೆ ಟೆಂಡರ್ ನೀಡದೇ, ಪಟ್ಟಣ ಪಂಚಾಯಿತಿಯವರೇ ಜವಾಬ್ದಾರಿ ತೆಗೆದುಕೊಳ್ಳಬೇಕು. ಒಂದೆರೆಡು ದಿನಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಪಂಚಾಯಿತಿ ಎದುರು ಧರಣಿ ಕುಳಿತುಕೊಳ್ಳಲಾಗುವುದು ಎಂದು ಎಚ್ಚರಿಸಿದರು.. ಜೊತೆಗೆ ರಿಚಾರ್ಜ್ ಮಾಡುವವರೆಗೂ ಪರ್ಯಾಯವಾಗಿ ಟ್ಯಾಂಕರ್ ಮೂಲಕ ನೀರಿನ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು..

Ramesh Babu

Journalist

Recent Posts

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

1 hour ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

3 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

6 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

20 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago