ಖಾಸಗಿ ಟೆಂಡರ್ ದಾರರ ಬೇಜವಾಬ್ದಾರಿ: ಕುಡಿಯಲು ನೀರಿಲ್ಲದೇ ಜನ ಪರದಾಟ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯತಿ ಬಿಸವನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪಂಚಾಯಿತಿಯಿಂದ ನಿರ್ವಹಣೆ ಮಾಡದೇ ಖಾಸಗಿ ವ್ಯಕ್ತಿಗಳಿಗೆ ಟೆಂಡರ್ ನೀಡಿರುತ್ತಾರೆ. ಇದರ ಪರಿಣಾಮ ಖಾಸಗಿ ಟೆಂಡರ್ ದಾರರು ನೀಡಿರುವ ಕಾರ್ಡುಗಳನ್ನು ಒಂದು ತಿಂಗಳಿಂದ  ರೀಚಾಜ್೯ ಮಾಡದೇ ಇರುವ ಪರಿಣಾಮ ಬಿಸವನಹಳ್ಳಿ ಗ್ರಾಮಸ್ಥರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ.

ಖಾಸಗಿಯವರು ಶುದ್ಧ ಕುಡಿಯುವ ನೀರಿನ ಘಟಕದ ನಿರ್ವಹಣೆ ಮಾಡುತ್ತಿದ್ದಾರೆ. ಖಾಸಗಿ ಟೆಂಡರ್ ದಾರರು ನೀಡಿರುವ ಕಾರ್ಡುಗಳನ್ನು ಒಂದು ತಿಂಗಳಿಂದ ರೀಚಾಜ್೯ ಮಾಡದೇ ಇರುವ ಪರಿಣಾಮ ಕಳೆದ ಒಂದು ತಿಂಗಳಿಂದ ಕುಡಿಯಲು ನೀರಿಲ್ಲದೇ ಜನ ಪರಿತಪಿಸುತ್ತಿದ್ದಾರೆ. ವಾರಕ್ಕೊಮ್ಮೆ ರೀಚಾರ್ಜ್ ಮಾಡಬೇಕು, ಆದರೆ ತಿಂಗಳಾದರೂ ರೀಚಾರ್ಜ್ ಮಾಡುತ್ತಿಲ್ಲ. ಕಾಯಿನ್ ಹಾಕಿ ನೀರು ಪಡೆಯಲು ಆಗುತ್ತಿಲ್ಲ. ಈ ಕುರಿತು ಪ.ಪಂ ಅಧ್ಯಕ್ಷರು, ಉಪಾದ್ಯಕ್ಷರು, ಸದಸ್ಯರು, ಆಡಳಿತಾಧಿಕಾರಿಗಳ ಗಮನಕ್ಕೆ ತಂದರೂ ಏನೂ ಕ್ರಮ ಕೈಗೊಂಡಿಲ್ಲ. ಚುನಾವಣೆ ಪೂರ್ವದಲ್ಲಿ ನೀರಿನ ಘಟಕದಲ್ಲಿ ಏನೂ ಸಮಸ್ಯೆ ಇರಲಿಲ್ಲ. ಒಂದು ವೇಳೆ ಸಮಸ್ಯೆ ಕಂಡುಬಂದಿದ್ದರೆ ಕೂಡಲೇ ಸರಿಪಡಿಸುತ್ತಿದ್ದರು. ಆದರೆ ಚುನಾವಣೆ ಮುಗಿದ ನಂತರ ನಮ್ಮ ಸಮಸ್ಯೆ ಕೇಳೋರಿಲ್ಲ. ಮುಖ್ಯಾಧಿಕಾರಿ ಜನರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ. ಸಾರ್ವಜನಿಕರ ಸಮಸ್ಯೆ ಬಗೆಹರಿಸದೇ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಕೇಳಿ ಎಂದು ತಪ್ಪಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ದೂರಿದರು.

ನಮ್ಮ ಊರಿನ ಶುದ್ಧ ಕುಡಿಯುವ ನೀರಿನ ಘಟಕದ ನಿರ್ವಹಣೆ ಮಾಡಲು ಖಾಸಗಿಯವರಿಗೆ ಟೆಂಡರ್ ನೀಡದೇ, ಪಟ್ಟಣ ಪಂಚಾಯಿತಿಯವರೇ ಜವಾಬ್ದಾರಿ ತೆಗೆದುಕೊಳ್ಳಬೇಕು. ಒಂದೆರೆಡು ದಿನಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಪಂಚಾಯಿತಿ ಎದುರು ಧರಣಿ ಕುಳಿತುಕೊಳ್ಳಲಾಗುವುದು ಎಂದು ಎಚ್ಚರಿಸಿದರು.. ಜೊತೆಗೆ ರಿಚಾರ್ಜ್ ಮಾಡುವವರೆಗೂ ಪರ್ಯಾಯವಾಗಿ ಟ್ಯಾಂಕರ್ ಮೂಲಕ ನೀರಿನ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು..

Ramesh Babu

Journalist

Recent Posts

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

20 minutes ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

25 minutes ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

3 hours ago

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

6 hours ago

ಸ್ಪರ್ಶ್ ಆಸ್ಪತ್ರೆ ಹೆಣ್ಣೂರು ಒಂದು ವರ್ಷ ಪೂರ್ಣಗೊಳಿಸಿದೆ .ಉತ್ತರ ಬೆಂಗಳೂರಿನಲ್ಲಿ ಸಮಗ್ರ ಮಲ್ಟಿಸ್ಪೆಷಾಲಿಟಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪ್ರತಿಬಿಂಬಿಸುತ್ತದೆ

ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…

8 hours ago

ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ: ದರ‌‌ ಪಟ್ಟಿ‌ ಇಲ್ಲಿದೆ ನೋಡಿ

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…

12 hours ago