ಖಾಸಗಿ ನಿವೇಶನದ ಜಾಗದಲ್ಲಿ ಜೆಸಿಬಿಯಿಂದ ಕೆಲಸ: ಪ್ರಶ್ನೆ ಮಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಕ್ಕೆ ಗ್ರಾ.ಪಂ ಸದಸ್ಯನಿಂದ ಹಲ್ಲೆ ಆರೋಪ

ಖಾಸಗಿ ನಿವೇಶನದ ಜಾಗದಲ್ಲಿ ಅನಧಿಕೃತವಾಗಿ ಜೆಸಿಬಿಯಿಂದ ಕೆಲಸ ಮಾಡುತ್ತಿರುವುದನ್ನು ಪ್ರಶ್ನೆ ಮಾಡಿ, ಆನಂತರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಪೊಲೀಸ್ ಠಾಣೆಗೆ ದೂರು ನೀಡಿದ ವ್ಯಕ್ತಿ ಮೇಲೆ ಗ್ರಾಮ ಪಂಚಾಯಿತಿ ಸದಸ್ಯ ಮತ್ತು ಆತನ ಕುಟುಂಬದವರು ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಕುರಿತು ಪಂಚಾಯಿತಿ ಸದಸ್ಯನ ವಿರುದ್ಧ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೊಡ್ಡಬಳ್ಳಾಪುರ ತಾಲೂಕು ದೊಡ್ಡಬೆಳವಂಗಲ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ನಿವಾಸಿ ಉದಯಶಂಕರ್ ಮತ್ತು ಆತನ ಪತ್ನಿ ಕುಸುಮಾ ಮೇಲೆ ಗ್ರಾಮ ಪಂಚಾಯಿತಿ ಸದಸ್ಯರಾದ ಗಂಗಾಧರ್ ಹಲ್ಲೆ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ.

ಆ.1ರ ಬೆಳಗ್ಗೆ 10 ಗಂಟೆ ಸಮಯದಲ್ಲಿ ಉದಯ ಶಂಕರ್ ರವರಿಗೆ ಸೇರಲಾಗಿದೆ ಎನ್ನಲಾಗಿರುವ ನಂಬರ್ 185/2ರ ನಿವೇಶನದ ಜಾಗದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಗಂಗಾಧರ್, ಅವರ ಮಗ ನವೀನ್, ಅಳಿಯ ನರಸಿಂಹಮೂರ್ತಿ ಜೆಸಿಬಿಯಿಂದ ಕೆಲಸ ಮಾಡುತ್ತಿದ್ದರು. ವಿಷಯ ತಿಳಿದು ಸ್ಥಳಕ್ಕೆ ಬಂದ ಉದಯಶಂಕರ್ ನಮ್ಮ ನಿವೇಶದಲ್ಲಿ ಜೆಸಿಬಿ ಕೆಲಸ ಮಾಡುತ್ತಿರುವುದಕ್ಕೆ ಪ್ರಶ್ನೆ ಮಾಡಿದ್ದಾರೆ. ಈ ಜಾಗ ನನ್ನದು, ನಿನ್ನನ್ನು ಕೊಲೆ ಮಾಡುವ ಉದ್ದೇಶಕ್ಕೆ ಜೆಸಿಬಿ ತಂದಿರುವುದ್ದಾಗಿ ಪ್ರಾಣ ಬೆದರಿಕೆ ಹಾಕಿದ್ದಾರೆಂದು ಉದಯಶಂಕರ್ ಆರೋಪ ಮಾಡಿದ್ದಾರೆ.

ಪ್ರಾಣ ರಕ್ಷಣೆಗಾಗಿ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ವಾಪಸ್ ಬರುತ್ತಿದ್ದ ಉದಯಶಂಕರ್ ಮತ್ತು ಅವರ ಪತ್ನಿ ಕುಸುಮಾ ಅವರನ್ನು ಅಡ್ಡಗಟ್ಟಿದ ಗ್ರಾಮ ಪಂಚಾಯತ್ ಸದಸ್ಯರಾದ ಗಂಗಾಧರ್, ಮಗ ನವೀನ್, ಅಳಿಯ ನರಸಿಂಹಮೂರ್ತಿ ಅವಾಚ್ಯ ಶಬ್ಧಗಳಿಂದ ಬೈದು, ಹಲ್ಲೆ ಮಾಡಿದ್ದಾರೆ. ಇದೇ ಜಾಗದಲ್ಲಿ ಹೂತು ಹಾಕುವುದಾಗಿ ಜೀವ ಬೆದರಿಕೆ ಹಾಕಿದ್ದಾರೆಂದು ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

ಹಲ್ಲೆಗೆ ತುತ್ತಾಗಿರುವ ಉದಯಶಂಕರ್ ರವರ ಪತ್ನಿ ವಿಕ್ಟೋರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಘಟನೆ ಸಂಬಂಧಿಸಿದಂತೆ ಎರಡು ಕಡೆಯವರು ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

ಗ್ರಾಮದಲ್ಲಿ ಡೆಂಗ್ಯೂ ಪ್ರಕರಣಗಳು ಪತ್ತೆಯಾದ ಹಿನ್ನೆಲೆ, ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ತೆಗೆದುಕೊಂಡು ನಿರ್ಣಯದಂತೆ ಸ್ವಚ್ಛತಾ ಕಾರ್ಯ ಪ್ರಾರಂಭಿಸಲಾಗಿತ್ತು. ಈ ವೇಳೆ ನನ್ನ ಮೇಲೆ ಹಲ್ಲೆ ನಡೆಸಿದ್ದಲ್ಲದೇ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂದು ಗ್ರಾಮ ಪಂಚಾಯತ್ ಸದಸ್ಯರಾದ ಗಂಗಾಧರ್ ಆರೋಪಿಸಿದ್ದಾರೆ.

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

14 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

20 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

1 day ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago