ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ‘ಸೀ ಬರ್ಡ್’ ಖಾಸಗಿ ಬಸ್ ಲಾರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಪರಿಣಾಮ 9 ಪ್ರಯಾಣಿಕರು ಸಜೀವ ದಹನವಾಗಿದ್ದಾರೆ.
ಇಂದು ಮುಂಜಾನೆ ಈ ಭೀಕರ ದುರಂತ ಸಂಭವಿಸಿದೆ. ಬೆಂಗಳೂರಿನಿಂದ ರಾತ್ರಿ 8.30ಕ್ಕೆ ಹೊರಟಿದ್ದ ಕೆಎ 01-ಎಇ 5217 ನಂಬರಿನ ಸೀ ಬರ್ಡ್ ಬಸ್, ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದಾಗ ವಿರುದ್ಧ ದಿಕ್ಕಿನಿಂದ ಬಂದ ಲಾರಿಯೊಂದು ವೇಗವಾಗಿ ಬಂದು ಬಸ್ನ ಡೀಸೆಲ್ ಟ್ಯಾಂಕ್ಗೆ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಮೊದಲು ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಬಸ್ಗೂ ಆವರಿಸಿದೆ.
ಬಸ್ನಲ್ಲಿ ಒಟ್ಟು 29 ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ. ಡೀಸೆಲ್ ಟ್ಯಾಂಕ್ ಬಳಿಯೇ ಲಾರಿ ಗುದ್ದಿದ್ದರಿಂದ ಬೆಂಕಿ ತೀವ್ರವಾಗಿ ಹರಡಿದ್ದು, ಗಾಢ ನಿದ್ರೆಯಲ್ಲಿದ್ದ ಪ್ರಯಾಣಿಕರಿಗೆ ಹೊರಬರಲು ಸಾಧ್ಯವಾಗಿಲ್ಲ. ಈ ಪೈಕಿ 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನವಾಗಿದ್ದಾರೆ. ಉಳಿದ 18 ಪ್ರಯಾಣಿಕರು ಕಿಟಕಿ ಹಾಗೂ ಎಮರ್ಜೆನ್ಸಿ ಡೋರ್ ಮೂಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಸಮೀಪದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…