ದೇವನಹಳ್ಳಿ :ಖಾಸಗಿ ವಾಹಿನಿಯ ಪ್ರತಿಷ್ಠಿತ ಕರ್ನಾಟಕ ಐಡೆಲ್ -2025 ಪ್ರಶಸ್ತಿ ಭಾಜನರಾದ ಶ್ರೀ ತ್ಯಾಗರಾಜ ಸ್ವಾಮೀಜಿರವರೆಗೆ ಸಮಾಜಸೇವಕರಾದ ಎಂ .ಪಿ ಗಿರೀಶ್ ಮತ್ತು ಸಂಗಡಿಗರ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು.
ಈ ವೇಳೆಯಲ್ಲಿ ಸಮಾಜ ಸೇವಕರಾದ ಎಂಪಿ ಗಿರೀಶ್ ಮಾತನಾಡಿ ಚಿಕ್ಕಹೊಸಳ್ಳಿಯಲ್ಲಿ ಗ್ರಾಮದ ಶ್ರೀ ತ್ಯಾಗರಾಜ ಸ್ವಾಮೀಜಿಯವರು ಆಧ್ಯಾತ್ಮಿಕ ಚಿಂತಕರಾಗಿದ್ದು, ಯಲಿಯೂರು ಗ್ರಾಮದ ನವಚೇತನ ಆಶ್ರಮದ ಸೇವಾಕರ್ತರಾಗಿದ್ದಾರೆ, ಆಶ್ರಮದಲ್ಲಿ 80ಜನ ಬಡ ಮತ್ತು ಅನಾಥ ಮಕ್ಕಳ ಪೋಷಣೆ ಮಾಡುತ್ತಿದ್ದು, ಗೋಶಾಲೆಯನ್ನು ಸಹ ನಡೆಸುತ್ತಿದ್ದಾರೆ ಅವರ ಇಂತಹ ಹಲವಾರು ಸಾಮಾಜಿಕ ಕಾರ್ಯಗಳನ್ನು ಗುರುತಿಸಿ ಖಾಸಗಿ ವಾಹಿನಿ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಿರುವುದು ನಮ್ಮೆಲ್ಲರಿಗೂ ಸಂತಸದ ವಿಷಯವಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಮನು ಸಿದ್ದಾರ್ಥ ಗುರೂಜಿ ಮತ್ತು ದೀಪಾ.ವಿ, ಎಂ.ಪಿ.ಗಿರೀಶ್, ಬೂದಿಗೆರೆ ಗ್ರಾಮ ಪಂಚಾಯತಿ ಸದಸ್ಯರು ವೆಂಕಟೇಶ್.ಸಮಾಜ ಸೇವಕರು ಚಂದ್ರು ಬೂದಿಗೆರೆ . ಕರ್ನಾಟಕ ರಕ್ಷಣಾ ವೇದಿಕೆ ಶಿಡ್ಲಘಟ್ಟ ಅಧ್ಯಕ್ಷರು ಮುನಿರಾಜ್( ಕುಟ್ಟಿ ) ಯುವ ಮುಖಂಡರ ದೇವನಹಳ್ಳಿ.ಶಿವಕುಮಾರ್.ಪೃಥ್ವಿ ಧನಂಜಯ್ ಮತ್ತು ಇತರರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…