Categories: ಲೇಖನ

ಖಾಸಗಿ ಸಂಭಾಷಣೆಗಳ‌ ಧ್ವನಿಮುದ್ರಣ ಸರಿಯೇ ? ತಪ್ಪೇ ?…..

ಮಿತ್ರತ್ವ ಅಥವಾ ಸಹಜತೆಗೆ ದ್ರೋಹ…….

ಒಂದು ಸಲಹೆ ಮತ್ತು ಮನವಿ…..

ಇಂದಿನ ಸಂದರ್ಭದ ಅತಿ ಅಗತ್ಯ ವಿಷಯ ಮತ್ತು ನಂಬಿಕೆಗಳ ಪುನರ್ ಸ್ಥಾಪನೆಯ ಪ್ರಯತ್ನ……

ಖಾಸಗಿ ಸಂಭಾಷಣೆಗಳ‌ ಧ್ವನಿಮುದ್ರಣ ಸರಿಯೇ ? ತಪ್ಪೇ ?………………..

ಇದು ತುಂಬಾ ಗಂಭೀರವಾದ ವಿಷಯ. ಅದರಲ್ಲೂ ಇತ್ತೀಚಿನ ಆಧುನಿಕ ತಂತ್ರಜ್ಞಾನದ ದಿನಗಳಲ್ಲಿ ಮಾನವೀಯ ನಂಬಿಕೆಗಳಿಗೇ ಬಹುದೊಡ್ಡ ಸವಾಲು ಎಸೆದಿರುವ ಅಂಶ………

ನಾವು ಗೆಳೆಯ/ಗೆಳತಿ ಅಥವಾ ಗೆಳೆಯರಂತಿರುವ ಜೊತೆಗಾರರೊಂದಿಗೆ ಅಥವಾ ಪರಿಚಿತ/ಅಪರಿಚಿತರೊಂದಿಗೆ ಅನೇಕ ರೀತಿಯ ಖಾಸಗಿ ಸಂಭಾಷಣೆ ನಡೆಸುತ್ತೇವೆ. ನಮ್ಮ ಅತ್ಯಂತ ಖಾಸಗಿ ಆರೋಗ್ಯದಿಂದ – ವಿಶ್ವದ ಎಲ್ಲಾ ಆಸಕ್ತಿದಾಯಕ ವಿಷಯಗಳನ್ನೂ ಚರ್ಚಿಸುತ್ತೇವೆ. ನಮ್ಮ ಆರ್ಥಿಕ ಸಂಕಷ್ಟ, ನೈತಿಕ/ಅನೈತಿಕ ಸಂಬಂಧಗಳು, ಇತರರ ಬಗ್ಗೆ ನಮಗಿರುವ ಪ್ರೀತಿ/ದ್ವೇಷ/ಅಸೂಯೆ ಎಲ್ಲವನ್ನೂ ಮಾತನಾಡುತ್ತೇವೆ. ರಾಜಕೀಯ, ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಎಲ್ಲವೂ ನಮ್ಮ ನಮ್ಮ ಆಸಕ್ತಿಗೆ ಅನುಗುಣವಾಗಿ ಸಂಭಾಷಣೆ ಇರುತ್ತದೆ. ಕೆಲವೊಮ್ಮೆ ಗಾಢ ಸ್ನೇಹ ಇರಬಹುದು ಅಥವಾ ಕೆಲವೊಮ್ಮೆ ದೂರದ ಸ್ನೇಹ/ಪರಿಚಯ ಇರಬಹುದು…..

ಆದರೆ,
ಈ ಗೆಳೆತನದ ಸಮಯದಲ್ಲಿ ನಾವು ಆಡಿದ ಸಹಜ ಲೋಕಾಭಿರಾಮದ ಮಾತುಗಳನ್ನು ನಮಗೆ ತಿಳಿಯದಂತೆ ಜೊತೆಗಾರರಲ್ಲಿ ಒಬ್ಬರು ಧ್ವನಿಮುದ್ರಿಸಿಕೊಂಡಿದ್ದು , ಮತ್ತೆಂದೋ ನಮ್ಮ ಬಗ್ಗೆ ಕೋಪ/ಬೇಸರ ಉಂಟಾದಾಗ ಅದನ್ನು ತಮಗೆ ಅನುಕೂಲಕರವಾಗಿ ಬಹಿರಂಗ ಪಡಿಸಿದರೆ ನಮ್ಮ ಸ್ಥಿತಿ ಹೇಗಾಗಬಹುದು. ಇದು ಅತ್ಯಂತ ಹಿಂಸಾತ್ಮಕ ಅನುಭವ ನೀಡುತ್ತದೆ. ಮಹಿಳೆಯರ ವಿಷಯದಲ್ಲಿ ಇನ್ನೂ ಕಠೋರವಾಗಿ ಇದು Blackmail ಆಗಿ ಅವರ ಬದುಕಿಗೇ ಬೆಂಕಿ ಹಚ್ಚುವ ಸಾಧ್ಯತೆಯೇ ಹೆಚ್ಚು……

ಇದು ಸರಿಯೇ ? ತಪ್ಪೇ ?……,

ನನ್ನ ದೃಷ್ಟಿಯಲ್ಲಿ ಇದು ಅತ್ಯಂತ ಅಮಾನವೀಯ/ಹೇಸಿಗೆ/ಅನಾಗರಿಕ ಮತ್ತು ಮಾನವೀಯ ನಂಬುಗೆಗೆ ಮಾಡಬಹುದಾದ ಬಹುದೊಡ್ಡ ಮೋಸ……

ನಾವು ಯಾವುದೋ ಪಕ್ಷ, ಸಂಘಟನೆ, ಸಂಸ್ಥೆಯ ಅಧಿಕೃತ ವಕ್ತಾರರೋ, ಸರ್ಕಾರಿ ಅಧಿಕಾರಿಯೋ ಆಗಿದ್ದು, ತುಂಬಾ ಜವಾಬ್ದಾರಿ ಸ್ಥಾನದಲ್ಲಿದ್ದು, ದೇಶ ಅಥವಾ ಸಮಾಜ ದ್ರೋಹದ ಅಥವಾ ಕಾನೂನಿಗೆ ವಿರುದ್ದವಾದ ಚಟುವಟಿಕೆಗಳ ಸಂದರ್ಭದಲ್ಲಿ ಇದು ಒಂದಷ್ಟು ಸಹನೀಯ.
ಅದನ್ನು ಹೊರತುಪಡಿಸಿ ನಮ್ಮ ಲೋಕಾಭಿರಾಮದ/ಬೇಸರ ಕಳೆಯುವ/ ಆಸಕ್ತಿಯ ವಿಷಯಗಳನ್ನು ಮಾತನಾಡುವಾಗ ನಾವು ವ್ಯಕ್ತಪಡಿಸುವ ಕೋಪ/ ಆಕ್ರೋಶ/ದುಃಖ/ಅಸೂಯೆ/ತಮಾಷೆ/ಪ್ರೀತಿ/ಪ್ರೇಮ ಮತ್ತು ಇನ್ನೊಬ್ಬರ ಬಗ್ಗೆ ಸಹಜವಾದ ಉದ್ದೇಶಪೂರ್ವಕವಲ್ಲದ ಕೊಂಕುನುಡಿಗಳನ್ನು ಮುದ್ರಿಸಿ ಬಹಿರಂಗಪಡಿಸಿದರೆ ಆಗುವ ಮರ್ಮಾಘಾತ ಯಾವ ಶತ್ರುವಿಗೂ ಬೇಡ ಎನಿಸುತ್ತದೆ.

ಹಾಗೆಯೇ ಕೆಲವೊಮ್ಮೆ ದೊಡ್ಡ ದೊಡ್ಡ ವ್ಯಕ್ತಿಗಳು, ಕೆಲವು ಗಂಭೀರ ವಿಷಯಗಳು, ನಮ್ಮ ಸೈದ್ಧಾಂತಿಕ ವಿರೋಧಿ ನಿಲುವುಗಳ ವ್ಯಕ್ತಿತ್ವಗಳು ಇವರನ್ನು ಆತ್ಮೀಯತೆಯ ನೆಪದಲ್ಲಿ ಕೆಟ್ಟದಾಗಿ, ಅಶ್ಲೀಲವಾಗಿ, ಲೋಕಭಿರಾಮವಾಗಿ ಗೆಳೆಯನೆಂಬ ಸಲುಗೆಯ ಸಂಬಂಧದ ನೆರಳಿನಲ್ಲಿ ಅತಿರೇಕವಾಗಿಯೇ ಮಾತನಾಡಿರುತ್ತೇವೆ. ಅದು ಧ್ವನಿಮುದ್ರಿತವಾಗಿ ಇತರರು ಕೇಳುವಾಗ ಮಹಾ ಅಪರಾಧದಂತೆ ಕಾಣುತ್ತದೆ. ಆದರೆ ಸಾಂದರ್ಭಿಕವಾಗಿ ಯೋಚಿಸಿದಾಗ ಅದು ಅಂತಹ ದೊಡ್ಡ ವಿಷಯವೇ ಅಲ್ಲ. ಬಹಿರಂಗಗೊಂಡಾಗ ಮಾತ್ರ ಉದ್ದೇಶಪೂರ್ವಕವಾದ ಮಾತುಗಳಂತೆ ಗೋಚರಿಸಿ ಬೇರೆಯವರ ಪ್ರತಿಕ್ರಿಯೆ ಊಹಿಸಿಯೇ ಮನಸ್ಸು ಕುಸಿದು ಹೋಗುತ್ತದೆ.

ಇಂತಹ ಅಪನಂಬಿಕೆಯ ಸಮಾಜದಲ್ಲಿ ಸಹಜವಾಗಿ ಮಾತನಾಡುತ್ತಾ ಬದುಕುವುದೇ ಕಷ್ಟವಾಗುತ್ತದೆ. ಇದು ಸಹ ನಮ್ಮೊಳಗೆ ಅಸಹಿಷ್ಣುತೆ, ಅಸಮಾಧಾನ, ಅತೃಪ್ತತ್ವವನ್ನು ಬೆಳೆಸುತ್ತದೆ.

ಹಾಗಾದರೆ ಇದನ್ನು ತಡೆಯುವುದು ಹೇಗೆ ?

ಇದು ಖಂಡಿತ ಈಗಿನ ವ್ಯವಸ್ಥೆಯಲ್ಲಿ ಸಾಧ್ಯವಿಲ್ಲ. ಹಾಗಂತ ಕೇವಲ ಅಧಿಕೃತ/ಕೃತಕ/ಮೇಲ್ಮಟ್ಟದ ತೋರಿಕೆಯ ಮಾತುಗಳನ್ನು ಮಾತ್ರ ಆಡುತ್ತಾ ಇರಲು ಸಾಧ್ಯವೇ ? ಮುಕ್ತ ಮಾತುಕತೆ ಬೇಡವೇ ? ಮುಕ್ತ ಮಾತುಕತೆಯಿಂದಲೆ ಅಲ್ಲವೇ ವ್ಯಕ್ತಿಗಳು ಸ್ಪಷ್ಟವಾಗುವುದು. ಸ್ನೇಹ ಸಂಬಂಧಗಳು ಬಲವಾಗುವುದು.
ಇಲ್ಲದಿದ್ದರೆ ಪ್ರಿತಿಯ ಮಾತನ್ನು ಸಹ ತುಂಬಾ ಯೋಚಿಸಿ ಬರೆದುಕೊಂಡು ಮಾತನಾಡಬೇಕಾಗುತ್ತದೆ. ಅದು ಸಾಧ್ಯವೇ ?. ಅದು ಅಸಹಜ ಮತ್ತು ಕೃತಕ ಎನಿಸುವುದಿಲ್ಲವೇ ?…..

ಅದಕ್ಕಾಗಿ ನಾವು ಮಾಡಬಹುದಾದ ಕೆಲಸವೆಂದರೆ,
ಈ ರೀತಿಯ ಖಾಸಗಿ ಮಾತುಕತೆಗಳನ್ನು ನಮ್ಮ ಜೊತೆಗಾರರು ಬಹಿರಂಗ ಪಡಿಸಿದ ಸಂದರ್ಭದಲ್ಲಿ ಅದು ಎಷ್ಟೇ ಗಂಭೀರ ವಿಷಯವಾಗಿದ್ದರೂ ಅದನ್ನು ಇತರರು ನಿರ್ಲಕ್ಷಿಸಬೇಕು. ಖಾಸಗಿ ಸಂಭಾಷಣೆ ಬಹಿರಂಗ ಪಡಿಸಿದವರೇ ಮೊದಲ ಅಪರಾಧಿ ಮತ್ತು ನಂಬಿಕೆಯ ವಂಚಕ ಎಂದು ಒಕ್ಕೊರಲಿನಿಂದ ಖಂಡಿಸಬೇಕು. ನಮ್ಮ ಗಮನಕ್ಕೆ ಬಾರದೆ ಧ್ವನಿಮುದ್ರಿಸಿಕೊಂಡಿರುವುದೇ ದೊಡ್ಡ ದ್ರೋಹ. ಧ್ವನಿಮುದ್ರಣದಲ್ಲಿ ಇರುವ ವಿಷಯ ಈ ಕಾರಣದಿಂದಲೇ ತನ್ನ ಮಹತ್ವ ಕಳೆದುಕೊಳ್ಳುವಂತೆ ಮಾಡಬೇಕು. ಆಗ ಈ ರೀತಿಯ ನಂಬಿಕೆ ದ್ರೋಹದ ಕೃತ್ಯಗಳಿಗೆ ಕಡಿವಾಣ ಹಾಕಬಹುದು……

ಗೆಳೆತನದಲ್ಲಿ ಇನ್ನಷ್ಟು ಮುಕ್ತ ಮತ್ತು ಆತ್ಮೀಯ ವಾತಾವರಣ ನಿರ್ಮಿಸಿ ಸ್ವತಂತ್ರವಾಗಿ ಜೊತೆಗಾರರೊಂದಿಗೆ ಮಾತನಾಡಬಹುದು. ಇದನ್ನು ಎಲ್ಲರೂ ಒಟ್ಟಾಗಿ ಪಾಲಿಸೋಣ ಎಲ್ಲಾ ಸಂಬಂಧಗಳಲ್ಲಿಯೂ…..

( ಕಾನೂನು ಬಾಹಿರ ಕ್ರಿಮಿನಲ್ ಚಟುವಟಿಕೆಗಳಿಗೆ ಅಥವಾ ಅತ್ಯಗತ್ಯ ವ್ಯಾವಹಾರಿಕ ಅನಿವಾರ್ಯತೆಗೆ ಅಥವಾ ಅನಿವಾರ್ಯ ಮುನ್ನೆಚ್ಚರಿಕೆಗೆ ಇದು ಅನ್ವಯಿಸುವುದಿಲ್ಲ. ಕೇವಲ ಸಹಜ ಗೆಳೆತನದ ಸಹಜ ವರ್ತನೆಗಳಿಗೆ ಮಾತ್ರ ಅನ್ವಯ )
ವಿಭಿನ್ನ ಸಲಹೆಗಳಿಗೆ ಸ್ವಾಗತ……….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

3 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

9 hours ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

10 hours ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

1 day ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

1 day ago

ಶ್ರಾವಣದ ಹಬ್ಬಗಳಿಗೆ ಮುನ್ನವೇ ಹೂವಿನ ದರದ ಬಿಸಿ! ಇಳುವರಿ ಶೇ.30–40ರಷ್ಟು ಕುಸಿತ: ಹವಾಮಾನ ವೈಪರೀತ್ಯದ ಪರಿಣಾಮ: ಸಾಲುಸಾಲು ಹಬ್ಬಗಳಿಂದ ಬೇಡಿಕೆ ಹೆಚ್ಚಳ

  ಬೆಂಗಳೂರು: ಹಬ್ಬಗಳ ಸೀಸನ್‌ ಆರಂಭಕ್ಕೂ ಮುನ್ನವೇ ಹೂವಿನ ದರ ಏರಿಕೆಯ ಬಿಸಿ ಗ್ರಾಹಕರಿಗೆ ತಟ್ಟಲಾರಂಭಿಸಿದೆ. ರಾಜ್ಯದಲ್ಲಿ ಅನಿರೀಕ್ಷಿತ ಬರ,…

1 day ago