Categories: ಲೇಖನ

ಖಾಸಗಿ ಸಂಭಾಷಣೆಗಳ‌ ಧ್ವನಿಮುದ್ರಣ ಸರಿಯೇ…? ತಪ್ಪೇ..?

ಒಂದು ಸಲಹೆ ಮತ್ತು ಮನವಿ…..

ಇಂದಿನ ಸಂದರ್ಭದ ಅತಿ ಅಗತ್ಯ ವಿಷಯ ಮತ್ತು ನಂಬಿಕೆಗಳ ಪುನರ್ ಸ್ಥಾಪನೆಯ ಪ್ರಯತ್ನ……

ಖಾಸಗಿ ಸಂಭಾಷಣೆಗಳ‌ ಧ್ವನಿಮುದ್ರಣ ಸರಿಯೇ? ತಪ್ಪೇ?……

ಇದು ತುಂಬಾ ಗಂಭೀರವಾದ ವಿಷಯ. ಅದರಲ್ಲೂ ಇತ್ತೀಚಿನ ಆಧುನಿಕ ತಂತ್ರಜ್ಞಾನದ ದಿನಗಳಲ್ಲಿ ಮಾನವೀಯ ನಂಬಿಕೆಗಳಿಗೇ ಬಹುದೊಡ್ಡ ಸವಾಲು ಎಸೆದಿರುವ ಅಂಶ………

ನಾವು ಗೆಳೆಯ/ಗೆಳತಿ ಅಥವಾ ಗೆಳೆಯರಂತಿರುವ ಜೊತೆಗಾರರೊಂದಿಗೆ ಅಥವಾ ಪರಿಚಿತ/ಅಪರಿಚಿತರೊಂದಿಗೆ ಅನೇಕ ರೀತಿಯ ಖಾಸಗಿ ಸಂಭಾಷಣೆ ನಡೆಸುತ್ತೇವೆ. ನಮ್ಮ ಅತ್ಯಂತ ಖಾಸಗಿ ಆರೋಗ್ಯದಿಂದ – ವಿಶ್ವದ ಎಲ್ಲಾ ಆಸಕ್ತಿದಾಯಕ ವಿಷಯಗಳನ್ನೂ ಚರ್ಚಿಸುತ್ತೇವೆ. ನಮ್ಮ ಆರ್ಥಿಕ ಸಂಕಷ್ಟ, ನೈತಿಕ/ಅನೈತಿಕ ಸಂಬಂಧಗಳು, ಇತರರ ಬಗ್ಗೆ ನಮಗಿರುವ ಪ್ರೀತಿ/ದ್ವೇಷ/ಅಸೂಯೆ ಎಲ್ಲವನ್ನೂ ಮಾತನಾಡುತ್ತೇವೆ. ರಾಜಕೀಯ, ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಎಲ್ಲವೂ ನಮ್ಮ ನಮ್ಮ ಆಸಕ್ತಿಗೆ ಅನುಗುಣವಾಗಿ ಸಂಭಾಷಣೆ ಇರುತ್ತದೆ. ಕೆಲವೊಮ್ಮೆ ಗಾಢ ಸ್ನೇಹ ಇರಬಹುದು ಅಥವಾ ಕೆಲವೊಮ್ಮೆ ದೂರದ ಸ್ನೇಹ/ಪರಿಚಯ ಇರಬಹುದು…..

ಆದರೆ,
ಈ ಗೆಳೆತನದ ಸಮಯದಲ್ಲಿ ನಾವು ಆಡಿದ ಸಹಜ ಲೋಕಾಭಿರಾಮದ ಮಾತುಗಳನ್ನು ನಮಗೆ ತಿಳಿಯದಂತೆ ಜೊತೆಗಾರರಲ್ಲಿ ಒಬ್ಬರು ಧ್ವನಿಮುದ್ರಿಸಿಕೊಂಡಿದ್ದು , ಮತ್ತೆಂದೋ ನಮ್ಮ ಬಗ್ಗೆ ಕೋಪ/ಬೇಸರ ಉಂಟಾದಾಗ ಅದನ್ನು ತಮಗೆ ಅನುಕೂಲಕರವಾಗಿ ಬಹಿರಂಗ ಪಡಿಸಿದರೆ ನಮ್ಮ ಸ್ಥಿತಿ ಹೇಗಾಗಬಹುದು. ಇದು ಅತ್ಯಂತ ಹಿಂಸಾತ್ಮಕ ಅನುಭವ ನೀಡುತ್ತದೆ. ಮಹಿಳೆಯರ ವಿಷಯದಲ್ಲಿ ಇನ್ನೂ ಕಠೋರವಾಗಿ ಇದು Blackmail ಆಗಿ ಅವರ ಬದುಕಿಗೇ ಬೆಂಕಿ ಹಚ್ಚುವ ಸಾಧ್ಯತೆಯೇ ಹೆಚ್ಚು……

ಇದು ಸರಿಯೇ ? ತಪ್ಪೇ ?……,

ನನ್ನ ದೃಷ್ಟಿಯಲ್ಲಿ ಇದು ಅತ್ಯಂತ ಅಮಾನವೀಯ/ಹೇಸಿಗೆ/ಅನಾಗರಿಕ ಮತ್ತು ಮಾನವೀಯ ನಂಬುಗೆಗೆ ಮಾಡಬಹುದಾದ ಬಹುದೊಡ್ಡ ಮೋಸ……

ನಾವು ಯಾವುದೋ ಪಕ್ಷ, ಸಂಘಟನೆ, ಸಂಸ್ಥೆಯ ಅಧಿಕೃತ ವಕ್ತಾರರೋ, ಸರ್ಕಾರಿ ಅಧಿಕಾರಿಯೋ ಆಗಿದ್ದು, ತುಂಬಾ ಜವಾಬ್ದಾರಿ ಸ್ಥಾನದಲ್ಲಿದ್ದು, ದೇಶ ಅಥವಾ ಸಮಾಜ ದ್ರೋಹದ ಅಥವಾ ಕಾನೂನಿಗೆ ವಿರುದ್ದವಾದ ಚಟುವಟಿಕೆಗಳ ಸಂದರ್ಭದಲ್ಲಿ ಇದು ಒಂದಷ್ಟು ಸಹನೀಯ.
ಅದನ್ನು ಹೊರತುಪಡಿಸಿ ನಮ್ಮ ಲೋಕಾಭಿರಾಮದ/ಬೇಸರ ಕಳೆಯುವ/ ಆಸಕ್ತಿಯ ವಿಷಯಗಳನ್ನು ಮಾತನಾಡುವಾಗ ನಾವು ವ್ಯಕ್ತಪಡಿಸುವ ಕೋಪ/ ಆಕ್ರೋಶ/ದುಃಖ/ಅಸೂಯೆ/ತಮಾಷೆ/ಪ್ರೀತಿ/ಪ್ರೇಮ ಮತ್ತು ಇನ್ನೊಬ್ಬರ ಬಗ್ಗೆ ಸಹಜವಾದ ಉದ್ದೇಶಪೂರ್ವಕವಲ್ಲದ ಕೊಂಕುನುಡಿಗಳನ್ನು ಮುದ್ರಿಸಿ ಬಹಿರಂಗಪಡಿಸಿದರೆ ಆಗುವ ಮರ್ಮಾಘಾತ ಯಾವ ಶತ್ರುವಿಗೂ ಬೇಡ ಎನಿಸುತ್ತದೆ……

ಹಾಗಾದರೆ ಇದನ್ನು ತಡೆಯುವುದು ಹೇಗೆ ?

ಇದು ಖಂಡಿತ ಈಗಿನ ವ್ಯವಸ್ಥೆಯಲ್ಲಿ ಸಾಧ್ಯವಿಲ್ಲ. ಹಾಗಂತ ಕೇವಲ ಅಧಿಕೃತ/ಕೃತಕ/ಮೇಲ್ಮಟ್ಟದ ತೋರಿಕೆಯ ಮಾತುಗಳನ್ನು ಮಾತ್ರ ಆಡುತ್ತಾ ಇರಲು ಸಾಧ್ಯವೇ ? ಮುಕ್ತ ಮಾತುಕತೆ ಬೇಡವೇ ? ಮುಕ್ತ ಮಾತುಕತೆಯಿಂದಲೆ ಅಲ್ಲವೇ ವ್ಯಕ್ತಿಗಳು ಸ್ಪಷ್ಟವಾಗುವುದು. ಸ್ನೇಹ ಸಂಬಂಧಗಳು ಬಲವಾಗುವುದು.
ಇಲ್ಲದಿದ್ದರೆ ಪ್ರಿತಿಯ ಮಾತನ್ನು ಸಹ ತುಂಬಾ ಯೋಚಿಸಿ ಬರೆದುಕೊಂಡು ಮಾತನಾಡಬೇಕಾಗುತ್ತದೆ. ಅದು ಸಾಧ್ಯವೇ ?. ಅದು ಅಸಹಜ ಮತ್ತು ಕೃತಕ ಎನಿಸುವುದಿಲ್ಲವೇ ?…..

ಅದಕ್ಕಾಗಿ ನಾವು ಮಾಡಬಹುದಾದ ಕೆಲಸವೆಂದರೆ,
ಈ ರೀತಿಯ ಖಾಸಗಿ ಮಾತುಕತೆಗಳನ್ನು ನಮ್ಮ ಜೊತೆಗಾರರು ಬಹಿರಂಗ ಪಡಿಸಿದ ಸಂದರ್ಭದಲ್ಲಿ ಅದು ಎಷ್ಟೇ ಗಂಭೀರ ವಿಷಯವಾಗಿದ್ದರೂ ಅದನ್ನು ಇತರರು ನಿರ್ಲಕ್ಷಿಸಬೇಕು.
ಖಾಸಗಿ ಸಂಭಾಷಣೆ ಬಹಿರಂಗ ಪಡಿಸಿದವರೇ ಮೊದಲ ಅಪರಾಧಿ ಮತ್ತು ನಂಬಿಕೆಯ ವಂಚಕ ಎಂದು ಒಕ್ಕೊರಲಿನಿಂದ ಖಂಡಿಸಬೇಕು. ನಮ್ಮ ಗಮನಕ್ಕೆ ಬಾರದೆ ಧ್ವನಿಮುದ್ರಿಸಿಕೊಂಡಿರುವುದೇ ದೊಡ್ಡ ದ್ರೋಹ. ಧ್ವನಿಮುದ್ರಣದಲ್ಲಿ ಇರುವ ವಿಷಯ ಈ ಕಾರಣದಿಂದಲೇ ತನ್ನ ಮಹತ್ವ ಕಳೆದುಕೊಳ್ಳುವಂತೆ ಮಾಡಬೇಕು. ಆಗ ಈ ರೀತಿಯ ನಂಬಿಕೆ ದ್ರೋಹದ ಕೃತ್ಯಗಳಿಗೆ ಕಡಿವಾಣ ಹಾಕಬಹುದು……

ಗೆಳೆತನದಲ್ಲಿ ಇನ್ನಷ್ಟು ಮುಕ್ತ ಮತ್ತು ಆತ್ಮೀಯ ವಾತಾವರಣ ನಿರ್ಮಿಸಿ ಸ್ವತಂತ್ರವಾಗಿ ಜೊತೆಗಾರರೊಂದಿಗೆ ಮಾತನಾಡಬಹುದು. ಇದನ್ನು ಎಲ್ಲರೂ ಒಟ್ಟಾಗಿ ಪಾಲಿಸೋಣ ಎಲ್ಲಾ ಸಂಬಂಧಗಳಲ್ಲಿಯೂ…..

( ಕಾನೂನು ಬಾಹಿರ ಕ್ರಿಮಿನಲ್ ಚಟುವಟಿಕೆಗಳಿಗೆ ಅಥವಾ ಅತ್ಯಗತ್ಯ ವ್ಯಾವಹಾರಿಕ ಅನಿವಾರ್ಯತೆಗೆ ಅಥವಾ ಅನಿವಾರ್ಯ ಮುನ್ನೆಚ್ಚರಿಕೆಗೆ ಇದು ಅನ್ವಯಿಸುವುದಿಲ್ಲ. ಕೇವಲ ಸಹಜ ಗೆಳೆತನದ ಸಹಜ ವರ್ತನೆಗಳಿಗೆ ಮಾತ್ರ ಅನ್ವಯ )
ವಿಭಿನ್ನ ಸಲಹೆಗಳಿಗೆ ಸ್ವಾಗತ……….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

4 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

9 hours ago

ವೈಚಾರಿಕ ( ವೈಜ್ಞಾನಿಕ ) ಅಧ್ಯಾತ್ಮ………

ಅಧ್ಯಾತ್ಮ ಮತ್ತು ಸದ್ಗುರು ಜಗ್ಗಿ ವಾಸುದೇವ್........ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಜನಪ್ರಿಯರಾದ ಅಧ್ಯಾತ್ಮ ಗುರು. ಅಧ್ಯಾತ್ಮಿಕ ಚಿಂತಕರಲ್ಲಿ ವಿವಿಧ ರೀತಿಯ…

10 hours ago

ಐಸಿಸಿ ಟಿ-20 ವಿಶ್ವಕಪ್ ಟೂರ್ನಿ: ಪಾಕಿಸ್ತಾನ ತಂಡವನ್ನು 61 ರನ್ ಗಳಿಂದ ಬಗ್ಗುಬಡಿದ ಭಾರತ: ದೇಶದ ಜನತೆಗೆ ಮಹಾಶಿವರಾತ್ರಿ ಗಿಫ್ಟ್

ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ…

10 hours ago

ಫೆ.26ರಂದು ಪ್ರಸಿದ್ದ ಮಧುರೆ ಶನಿಮಹಾತ್ಮಸ್ವಾಮಿ 71ನೇ ಬ್ರಹ್ಮರಥೋತ್ಸವ

ಫೆ.26ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ ಎಂದು ದೇವಾಲಯದ ಪ್ರಧಾನ ಅರ್ಚಕ…

21 hours ago