ಖ್ಯಾತ ಆಹಾರ ತಜ್ಞ, ಚಿಂತಕ, ಲೇಖಕ, ಸಾಮಾಜಿಕ ಕಾರ್ಯಕರ್ತ ಕೆ.ಸಿ.ರಘು (60) ಅವರು ಶ್ವಾಸಕೋಶದ ಕ್ಯಾನ್ಸರ್ಗೆ ತುತ್ತಾಗಿದ್ದು, ಬೆಂಗಳೂರಿನ ದಾಸರಹಳ್ಳಿಯ ಅಮೃತ ನಗರದಲ್ಲಿರುವ ಅವರ ನಿವಾಸದಲ್ಲಿ 7.30ರ ಸುಮಾರಿಗೆ ನಿಧನರಾಗಿದ್ದಾರೆ ಎಂದು ಅವರ ಪತ್ನಿ ಆಶಾ ರಘು ಅವರು ಮಾಹಿತಿ ನೀಡಿದ್ದಾರೆ.
ಆಹಾರ ಆರೋಗ್ಯದ ವಿಚಾರದಲ್ಲಿ ಸಂಪತ್ಭರಿತ ಜ್ಞಾನ ಹೊಂದಿದವರಾಗಿದ್ದರು, ಆಹಾರ ವಿಚಾರದಲ್ಲಿ ಸಾಕಷ್ಟು ನಿಖರ ವಿಚಾರ ವಿನಿಮಯ ಮಾಡುತ್ತಿದ್ದ ರಘು ಅವರ ನಿಧನಕ್ಕೆ ಹಲವು ಗಣ್ಯರು ಕಂಬನಿ ಮಿಡಿದು ಸಂತಾಪ ಸೂಚಿಸಿದ್ದಾರೆ.
ರಘು ಅವರು ಪ್ರಿಸ್ಟೀನ್ ಆರ್ಗ್ಯಾನಿಕ್ಸ್ ಎಂಬ ಸಂಸ್ಥೆ ಸ್ಥಾಪಿಸಿ ನವಜಾತ ಶಿಶುಗಳಲ್ಲಿ ಕಂಡುಬರುವ ಮಾರಕ ಕಾಯಿಲೆಗಳಿಗೆ ಪೌಷ್ಟಿಕಾಂಶದ ಪರಿಹಾರವನ್ನು ಸಂಶೋಧನೆಯಿಂದ ಕಂಡುಹಿಡಿದ್ದರು. ಈ ಕಾರ್ಯದಿಂದ ಸುಮಾರು 5 ಸಾವಿರ ನವಜಾತ ಶಿಶುಗಳನ್ನು ಸಾವಿನ ದವಡೆಯಿಂದ ಪಾರು ಮಾಡಿದ್ದರು. ಭಾರತದಲ್ಲಿ ಈ ರೀತಿಯ ಪರಿಹಾರ ಒದಗಿಸುವ ಏಕೈಕ ಸಂಸ್ಥೆಯಾಗಿದೆ.
ಕೆ.ಸಿ.ರಘು ಅವರ ಇಚ್ಛೆಯಂತೆ ಅವರ ದೇಹವನ್ನು ಎಂ.ಎಸ್ ರಾಮಯ್ಯ ವೈದ್ಯಕೀಯ ಆಸ್ಪತ್ರೆಗೆ ದಾನ ಮಾಡಲಾಗುವುದು ಎಂದು ತಿಳಿದುಬಂದಿದೆ.
ಆಟೋ ಎಲ್ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…