ಖ್ಯಾತ ಆಹಾರ ತಜ್ಞ, ಚಿಂತಕ, ಲೇಖಕ, ಸಾಮಾಜಿಕ ಕಾರ್ಯಕರ್ತ ಕೆ.ಸಿ.ರಘು (60) ಅವರು ಶ್ವಾಸಕೋಶದ ಕ್ಯಾನ್ಸರ್ಗೆ ತುತ್ತಾಗಿದ್ದು, ಬೆಂಗಳೂರಿನ ದಾಸರಹಳ್ಳಿಯ ಅಮೃತ ನಗರದಲ್ಲಿರುವ ಅವರ ನಿವಾಸದಲ್ಲಿ 7.30ರ ಸುಮಾರಿಗೆ ನಿಧನರಾಗಿದ್ದಾರೆ ಎಂದು ಅವರ ಪತ್ನಿ ಆಶಾ ರಘು ಅವರು ಮಾಹಿತಿ ನೀಡಿದ್ದಾರೆ.
ಆಹಾರ ಆರೋಗ್ಯದ ವಿಚಾರದಲ್ಲಿ ಸಂಪತ್ಭರಿತ ಜ್ಞಾನ ಹೊಂದಿದವರಾಗಿದ್ದರು, ಆಹಾರ ವಿಚಾರದಲ್ಲಿ ಸಾಕಷ್ಟು ನಿಖರ ವಿಚಾರ ವಿನಿಮಯ ಮಾಡುತ್ತಿದ್ದ ರಘು ಅವರ ನಿಧನಕ್ಕೆ ಹಲವು ಗಣ್ಯರು ಕಂಬನಿ ಮಿಡಿದು ಸಂತಾಪ ಸೂಚಿಸಿದ್ದಾರೆ.
ರಘು ಅವರು ಪ್ರಿಸ್ಟೀನ್ ಆರ್ಗ್ಯಾನಿಕ್ಸ್ ಎಂಬ ಸಂಸ್ಥೆ ಸ್ಥಾಪಿಸಿ ನವಜಾತ ಶಿಶುಗಳಲ್ಲಿ ಕಂಡುಬರುವ ಮಾರಕ ಕಾಯಿಲೆಗಳಿಗೆ ಪೌಷ್ಟಿಕಾಂಶದ ಪರಿಹಾರವನ್ನು ಸಂಶೋಧನೆಯಿಂದ ಕಂಡುಹಿಡಿದ್ದರು. ಈ ಕಾರ್ಯದಿಂದ ಸುಮಾರು 5 ಸಾವಿರ ನವಜಾತ ಶಿಶುಗಳನ್ನು ಸಾವಿನ ದವಡೆಯಿಂದ ಪಾರು ಮಾಡಿದ್ದರು. ಭಾರತದಲ್ಲಿ ಈ ರೀತಿಯ ಪರಿಹಾರ ಒದಗಿಸುವ ಏಕೈಕ ಸಂಸ್ಥೆಯಾಗಿದೆ.
ಕೆ.ಸಿ.ರಘು ಅವರ ಇಚ್ಛೆಯಂತೆ ಅವರ ದೇಹವನ್ನು ಎಂ.ಎಸ್ ರಾಮಯ್ಯ ವೈದ್ಯಕೀಯ ಆಸ್ಪತ್ರೆಗೆ ದಾನ ಮಾಡಲಾಗುವುದು ಎಂದು ತಿಳಿದುಬಂದಿದೆ.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…