ಖ್ಯಾತ ಆಹಾರ ತಜ್ಞ ಕೆ.ಸಿ.ರಘು (60), ಇನ್ನಿಲ್ಲ

ಖ್ಯಾತ ಆಹಾರ ತಜ್ಞ, ಚಿಂತಕ, ಲೇಖಕ, ಸಾಮಾಜಿಕ ಕಾರ್ಯಕರ್ತ ಕೆ.ಸಿ.ರಘು (60) ಅವರು ಶ್ವಾಸಕೋಶದ ಕ್ಯಾನ್ಸರ್‌ಗೆ ತುತ್ತಾಗಿದ್ದು, ಬೆಂಗಳೂರಿನ ದಾಸರಹಳ್ಳಿಯ ಅಮೃತ ನಗರದಲ್ಲಿರುವ ಅವರ ನಿವಾಸದಲ್ಲಿ 7.30ರ ಸುಮಾರಿಗೆ ನಿಧನರಾಗಿದ್ದಾರೆ ಎಂದು ಅವರ ಪತ್ನಿ ಆಶಾ ರಘು ಅವರು ಮಾಹಿತಿ ನೀಡಿದ್ದಾರೆ.

ಆಹಾರ ಆರೋಗ್ಯದ ವಿಚಾರದಲ್ಲಿ ಸಂಪತ್ಭರಿತ ಜ್ಞಾನ ಹೊಂದಿದವರಾಗಿದ್ದರು, ಆಹಾರ ವಿಚಾರದಲ್ಲಿ  ಸಾಕಷ್ಟು ನಿಖರ ವಿಚಾರ ವಿನಿಮಯ ಮಾಡುತ್ತಿದ್ದ ರಘು ಅವರ ನಿಧನಕ್ಕೆ ಹಲವು ಗಣ್ಯರು ಕಂಬನಿ ಮಿಡಿದು ಸಂತಾಪ ಸೂಚಿಸಿದ್ದಾರೆ.

ರಘು ಅವರು ಪ್ರಿಸ್ಟೀನ್ ಆರ್ಗ್ಯಾನಿಕ್ಸ್ ಎಂಬ ಸಂಸ್ಥೆ ಸ್ಥಾಪಿಸಿ ನವಜಾತ ಶಿಶುಗಳಲ್ಲಿ ಕಂಡುಬರುವ ಮಾರಕ ಕಾಯಿಲೆಗಳಿಗೆ ಪೌಷ್ಟಿಕಾಂಶದ ಪರಿಹಾರವನ್ನು ಸಂಶೋಧನೆಯಿಂದ ಕಂಡುಹಿಡಿದ್ದರು. ಈ ಕಾರ್ಯದಿಂದ ಸುಮಾರು 5 ಸಾವಿರ ನವಜಾತ ಶಿಶುಗಳನ್ನು ಸಾವಿನ ದವಡೆಯಿಂದ ಪಾರು ಮಾಡಿದ್ದರು. ಭಾರತದಲ್ಲಿ ಈ ರೀತಿಯ ಪರಿಹಾರ ಒದಗಿಸುವ ಏಕೈಕ ಸಂಸ್ಥೆಯಾಗಿದೆ.

ಕೆ.ಸಿ.ರಘು ಅವರ ಇಚ್ಛೆಯಂತೆ ಅವರ ದೇಹವನ್ನು ಎಂ.ಎಸ್ ರಾಮಯ್ಯ ವೈದ್ಯಕೀಯ ಆಸ್ಪತ್ರೆಗೆ ದಾನ ಮಾಡಲಾಗುವುದು ಎಂದು ತಿಳಿದುಬಂದಿದೆ.

Ramesh Babu

Journalist

Recent Posts

ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ತಪಾಸಣೆ ಬಳಿಕ ಹುಸಿ ಕರೆ ಎಂದು ಸ್ಪಷ್ಟ

ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್‌ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…

9 hours ago

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

1 day ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

2 days ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

2 days ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

2 days ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

3 days ago