ಖ್ಯಾತ ಆಹಾರ ತಜ್ಞ ಕೆ.ಸಿ.ರಘು (60), ಇನ್ನಿಲ್ಲ

ಖ್ಯಾತ ಆಹಾರ ತಜ್ಞ, ಚಿಂತಕ, ಲೇಖಕ, ಸಾಮಾಜಿಕ ಕಾರ್ಯಕರ್ತ ಕೆ.ಸಿ.ರಘು (60) ಅವರು ಶ್ವಾಸಕೋಶದ ಕ್ಯಾನ್ಸರ್‌ಗೆ ತುತ್ತಾಗಿದ್ದು, ಬೆಂಗಳೂರಿನ ದಾಸರಹಳ್ಳಿಯ ಅಮೃತ ನಗರದಲ್ಲಿರುವ ಅವರ ನಿವಾಸದಲ್ಲಿ 7.30ರ ಸುಮಾರಿಗೆ ನಿಧನರಾಗಿದ್ದಾರೆ ಎಂದು ಅವರ ಪತ್ನಿ ಆಶಾ ರಘು ಅವರು ಮಾಹಿತಿ ನೀಡಿದ್ದಾರೆ.

ಆಹಾರ ಆರೋಗ್ಯದ ವಿಚಾರದಲ್ಲಿ ಸಂಪತ್ಭರಿತ ಜ್ಞಾನ ಹೊಂದಿದವರಾಗಿದ್ದರು, ಆಹಾರ ವಿಚಾರದಲ್ಲಿ  ಸಾಕಷ್ಟು ನಿಖರ ವಿಚಾರ ವಿನಿಮಯ ಮಾಡುತ್ತಿದ್ದ ರಘು ಅವರ ನಿಧನಕ್ಕೆ ಹಲವು ಗಣ್ಯರು ಕಂಬನಿ ಮಿಡಿದು ಸಂತಾಪ ಸೂಚಿಸಿದ್ದಾರೆ.

ರಘು ಅವರು ಪ್ರಿಸ್ಟೀನ್ ಆರ್ಗ್ಯಾನಿಕ್ಸ್ ಎಂಬ ಸಂಸ್ಥೆ ಸ್ಥಾಪಿಸಿ ನವಜಾತ ಶಿಶುಗಳಲ್ಲಿ ಕಂಡುಬರುವ ಮಾರಕ ಕಾಯಿಲೆಗಳಿಗೆ ಪೌಷ್ಟಿಕಾಂಶದ ಪರಿಹಾರವನ್ನು ಸಂಶೋಧನೆಯಿಂದ ಕಂಡುಹಿಡಿದ್ದರು. ಈ ಕಾರ್ಯದಿಂದ ಸುಮಾರು 5 ಸಾವಿರ ನವಜಾತ ಶಿಶುಗಳನ್ನು ಸಾವಿನ ದವಡೆಯಿಂದ ಪಾರು ಮಾಡಿದ್ದರು. ಭಾರತದಲ್ಲಿ ಈ ರೀತಿಯ ಪರಿಹಾರ ಒದಗಿಸುವ ಏಕೈಕ ಸಂಸ್ಥೆಯಾಗಿದೆ.

ಕೆ.ಸಿ.ರಘು ಅವರ ಇಚ್ಛೆಯಂತೆ ಅವರ ದೇಹವನ್ನು ಎಂ.ಎಸ್ ರಾಮಯ್ಯ ವೈದ್ಯಕೀಯ ಆಸ್ಪತ್ರೆಗೆ ದಾನ ಮಾಡಲಾಗುವುದು ಎಂದು ತಿಳಿದುಬಂದಿದೆ.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

11 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

14 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

15 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

18 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago