ಖ್ಯಾತ ಆಹಾರ ತಜ್ಞ, ಚಿಂತಕ, ಲೇಖಕ, ಸಾಮಾಜಿಕ ಕಾರ್ಯಕರ್ತ ಕೆ.ಸಿ.ರಘು (60) ಅವರು ಶ್ವಾಸಕೋಶದ ಕ್ಯಾನ್ಸರ್ಗೆ ತುತ್ತಾಗಿದ್ದು, ಬೆಂಗಳೂರಿನ ದಾಸರಹಳ್ಳಿಯ ಅಮೃತ ನಗರದಲ್ಲಿರುವ ಅವರ ನಿವಾಸದಲ್ಲಿ 7.30ರ ಸುಮಾರಿಗೆ ನಿಧನರಾಗಿದ್ದಾರೆ ಎಂದು ಅವರ ಪತ್ನಿ ಆಶಾ ರಘು ಅವರು ಮಾಹಿತಿ ನೀಡಿದ್ದಾರೆ.
ಆಹಾರ ಆರೋಗ್ಯದ ವಿಚಾರದಲ್ಲಿ ಸಂಪತ್ಭರಿತ ಜ್ಞಾನ ಹೊಂದಿದವರಾಗಿದ್ದರು, ಆಹಾರ ವಿಚಾರದಲ್ಲಿ ಸಾಕಷ್ಟು ನಿಖರ ವಿಚಾರ ವಿನಿಮಯ ಮಾಡುತ್ತಿದ್ದ ರಘು ಅವರ ನಿಧನಕ್ಕೆ ಹಲವು ಗಣ್ಯರು ಕಂಬನಿ ಮಿಡಿದು ಸಂತಾಪ ಸೂಚಿಸಿದ್ದಾರೆ.
ರಘು ಅವರು ಪ್ರಿಸ್ಟೀನ್ ಆರ್ಗ್ಯಾನಿಕ್ಸ್ ಎಂಬ ಸಂಸ್ಥೆ ಸ್ಥಾಪಿಸಿ ನವಜಾತ ಶಿಶುಗಳಲ್ಲಿ ಕಂಡುಬರುವ ಮಾರಕ ಕಾಯಿಲೆಗಳಿಗೆ ಪೌಷ್ಟಿಕಾಂಶದ ಪರಿಹಾರವನ್ನು ಸಂಶೋಧನೆಯಿಂದ ಕಂಡುಹಿಡಿದ್ದರು. ಈ ಕಾರ್ಯದಿಂದ ಸುಮಾರು 5 ಸಾವಿರ ನವಜಾತ ಶಿಶುಗಳನ್ನು ಸಾವಿನ ದವಡೆಯಿಂದ ಪಾರು ಮಾಡಿದ್ದರು. ಭಾರತದಲ್ಲಿ ಈ ರೀತಿಯ ಪರಿಹಾರ ಒದಗಿಸುವ ಏಕೈಕ ಸಂಸ್ಥೆಯಾಗಿದೆ.
ಕೆ.ಸಿ.ರಘು ಅವರ ಇಚ್ಛೆಯಂತೆ ಅವರ ದೇಹವನ್ನು ಎಂ.ಎಸ್ ರಾಮಯ್ಯ ವೈದ್ಯಕೀಯ ಆಸ್ಪತ್ರೆಗೆ ದಾನ ಮಾಡಲಾಗುವುದು ಎಂದು ತಿಳಿದುಬಂದಿದೆ.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…