ಖ್ಯಾತ ಕಾದಂಬರಿಕಾರ ಎಸ್‌.ಎಲ್‌ ಭೈರಪ್ಪ‌ ವಿಧಿವಶ

ಖ್ಯಾತ ಕಾದಂಬರಿಕಾರ ಎಸ್‌.ಎಲ್‌ ಭೈರಪ್ಪ ಬುಧವಾರ ನಿಧನರಾದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು.ಮೈ ಸೂರಿನಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದು, ನಿವೃತ್ತಿ ಜೀವನನ್ನು ನಡೆಸುತ್ತಿದ್ದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಇರುವ ರಾಷ್ಟ್ರೋತ್ತಾನ ಆಸ್ಪತ್ರೆಯಲ್ಲಿ ನಿಧರಾಗಿದ್ದಾರೆ. ಹೃದಯಾಘಾತದಿಂದಾಗಿ ಮಧ್ಯಾಹ್ನ 2.38ಕ್ಕೆ ನಿಧನರಾದರು ಎಂದು ಆಸ್ಪತ್ರೆಯು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದೆ.

ವಂಶವೃಕ್ಷ, ದಾಟು, ತಂತು, ಪರ್ವ, ಗೃಹಭಂಗ, ಸಾರ್ಥ, ಮಂದ್ರ ಸೇರಿದಂತೆ ಹಲವಾರ ಕಾದಂಬರಿಗಳನ್ನು ರಚಿಸಿದ್ದಾರೆ. ಅವರ ಕೃತಿಗಳು ಕನ್ನಡದಲ್ಲಿ ಹೆಚ್ಚು ಮಾರಾಟವಾಗುತ್ತಿದ್ದವು. ಹಿಂದಿ, ಮರಾಠಿ, ಮತ್ತು ಇಂಗ್ಲಿಷ್ ಸೇರಿದಂತೆ ಹಲವು ಭಾರತೀಯ ಭಾಷೆಗಳಿಗೆ ಭೈರಪ್ಪ ಅವರ ಕಾದಂಬರಿಗಳು ಅನುವಾದಗೊಂಡಿವೆ.

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ,  ಸರಸ್ವತಿ ಸಮ್ಮಾನ್‌, ಪದ್ಮಭೂಷಣ, ಪದ್ಮಶ್ರೀ ಹಾಗೂ ನಾಡೋಜ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

ಪ್ರಮುಖ ಪುಸ್ತಕಗಳು

ಗಾಥಾ ಜನ್ಮ ಮಾತೆರಡು ಕಥೆಗಳು (1955)

ಭೀಮಕಾಯ (1958)

ಧರ್ಮಶ್ರೀ (1961)

ದೂರ ಸರಿದರು (1962)

ಮಾತಾಡನಾ (1965)

ವಂಶವೃಕ್ಷ (1965)

ಜಲಪಾತ (1967)

ನಾಯಿ ನೇರಲು (1968)

ತಬ್ಬಲಿಯು ನೀನಾದೆ ಮಗನೆ (1968)

ಗೃಹಭಂಗ (1970)

ನಿರಾಕರಣ (1971)

ಗ್ರಹಾನಾ (1972)

ದಾತು (1972)

ಅನ್ವೇಷಣೆ (1976)

ಪರ್ವ (1979)

ನೆಲೆ (1983)

ಸಾಕ್ಷಿ (1986)

ಅಂಚು (1990)

ತಂತು (1993)

ಸಾರ್ಥ (1998)

ಮಂದ್ರ (2001)

ಆವರಣ (2007)

ಕವಲು (2010)

Yaana (2014)

ಉತ್ತರಕಾಂಡ (2017)

Ramesh Babu

Journalist

Recent Posts

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

1 hour ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

12 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

23 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

24 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

24 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

1 day ago