ಖ್ಯಾತ ವಿಮಾ ಕಂಪನಿಯ ಸೋಗಿನಲ್ಲಿ ನಕಲಿ ಜೀವ ವಿಮೆ ನೀಡಿ ಮೋಸ ಮಾಡುತ್ತಿದ್ದವನನ್ನು ಬಂಧಿಸುವಲ್ಲಿ ಬೆಂಗಳೂರು ನಗರದ ಅಪರಾಧ ವಿಭಾಗವು ಯಶಸ್ವಿಯಾಗಿದೆ. ಆರೋಪಿಯು ದೂರುದಾರರಿಗೆ 15 ಲಕ್ಷ ನೀಡುವಂತೆ ಬಲವಂತ ಮಾಡುತ್ತಿದ್ದು, ಈ ದೂರಿನ ಬಗ್ಗೆ ತನಿಖೆ ನಡೆಸಿದ ಬಳಿಕ ಆರೋಪಿಯು ಸಾರ್ವಜನಿಕರ ಚೆಕ್ ಗಳನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ಠೇವಣಿ ಮಾಡಿ ನಂತರ ಎಟಿಎಂ ಮೂಲಕ ಹಣವನ್ನು ಪಡೆಯುತ್ತಿದ್ದ. ಆರೋಪಿ ವಿರುದ್ಧ ವಿವಿಧ CEN (ಅಪರಾಧ, ಆರ್ಥಿಕ ಅಪರಾಧ, ಮಾದಕದ್ರವ್ಯ) ಠಾಣೆಗಳಲ್ಲಿ ಒಟ್ಟು 34 ಪ್ರಕರಣ ದಾಖಲಾಗಿದ್ದು, ಒಟ್ಟು 4,51,31,288 ರೂ. ಮೋಸ ಮಾಡಿರುವ ಆರೋಪ ದಾಖಲಾಗಿದೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರು ತಿಳಿಸಿದರು.
ನಕಲಿ ಇ-ಬ್ಯಾಂಕ್ ಗ್ಯಾರಂಟಿಗಳನ್ನು ನೀಡುತ್ತಿದ್ದ ಈ ಆರೋಪಿಯನ್ನು ಮಾ.13ರಂದು ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರು ಸೈಬರ್ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದರು. ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದು ಆತನ ಪತ್ತೆಗೆ ಲುಕ್ ಔಟ್ ಸರ್ಕ್ಯುಲರ್ ನೀಡಲಾಗಿದ್ದು, ತನಿಖೆ ಮುಂದುವರಿಯುತ್ತಿದೆ ಎಂದರು.
ಆರೋಪಿ ಬಂಧನದ ವೇಳೆ ಪೊಲೀಸರು 2 ಲ್ಯಾಪ್ ಟಾಪ್, 6 ವಿವಿಧ ಕಂಪನಿಗಳ ಮೊಬೈಲ್, 1 ಪೆನ್ ಡ್ರೈವ್ ಹಾಗೂ 10 ಚೆಕ್ ಬುಕ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಹೆಚ್ಚಿನ ತನಿಖೆಯ ಮೂಲಕ ಇ-ಬ್ಯಾಂಕ್ ಗ್ಯಾರಂಟಿಗಳನ್ನು ನಕಲು ಮಾಡಿ, ಈ ಇಬ್ಬರು ಆರೋಪಿಗಳು 11 ಜನರಿಗೆ ಮೋಸ ಮಾಡಿದ್ದಾರೆ. ಇವರು 168,13,23,944 ರೂ.ನಷ್ಟು ಇ-ಬ್ಯಾಂಕ್ ಗ್ಯಾರಂಟಿಗಳನ್ನು ನಕಲು ಮಾಡಿ, 5 ಕೋಟಿಯಷ್ಟು ಕಮಿಷನ್ ಪಡೆದಿರುವ ಬಗ್ಗೆ ತನಿಖೆಯಿಂದ ತಿಳಿದುಬಂದಿರುತ್ತದೆ ಎಂದು ಮಾಹಿತಿ ನೀಡಿದರು.
ಜಾತ್ರೆ ಹಾಗೂ ಮೆರವಣಿಗೆಗಳಲ್ಲಿ ಚಿನ್ನಾಭರಣ ಕಳವು
ಜಾತ್ರೆ ಹಾಗೂ ಮೆರವಣಿಗೆಗಳ ಸಂದರ್ಭದಲ್ಲಿ ವಯೋವೃದ್ಧೆಯರನ್ನು ಗುರಿಯಾಗಿಸಿ ಚಿನ್ನಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಾಜಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾ.22ರಂದು ಇಬ್ಬರು ಮಹಿಳೆಯರನ್ನು ಬಂಧಿಸಿದ್ದು, ಇವರಿಂದ 14.9 ಲಕ್ಷ ಮೌಲ್ಯದ 233 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಸದರಿ ಆರೋಪಿಗಳ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ಒಟ್ಟು 07 ಪ್ರಕರಣಗಳನ್ನು ದಾಖಲಿಸಲಾಗಿದೆ.
ಮನೆ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರಣ್ಯ ಪುರ ಠಾಣಾ ವ್ಯಾಪ್ತಿಯಲ್ಲಿ ಮಾ.17ರಂದು 3 ಆರೋಪಿಗಳನ್ನು ಬಂಧಿಸಿದ್ದು, ಪೊಲೀಸಲು ಇವರಿಂದ 200 ಗ್ರಾಂ ಚಿನ್ನಾಭರಣ, 2 ಕೆ.ಜಿಯಷ್ಟು ಬೆಳ್ಳಿ ಸಾಮಾಗ್ರಿಗಳು, 3 ದ್ವಿಚಕ್ರವಾಹನಗಳನ್ನು ವಶಪಡಿಸಿಕೊಂಡಿದ್ದು, ಇದರ ಒಟ್ಟಾರೆ ಮೌಲ್ಯ ₹ 16,60,000 ಆಗಿದೆ ಎಂದರು.
ಸ್ಪಾ ಮೇಲಿನ ದಾಳಿ
ಇತ್ತೀಚೆಗೆ ಸ್ಪಾ ಮೇಲಿನ ದಾಳಿಗಳ ವಿಚಾರವಾಗಿ ಮಾಹಿತಿ ನೀಡಿದ್ದು, ದಾಳಿಯಲ್ಲಿ 31 ಮಂದಿಯನ್ನು ಬಂಧಿಸಲಾಗಿದೆ. ಜ.1ರಿಂದ ಮಾ.25ರವರೆಗೆ 21 ಪ್ರಕರಣಗಳನ್ನು ದಾಖಲಿಸಲಾಗಿದ್ದು, 118 ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿಸಿದರು
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…
ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…
ಅಧ್ಯಾತ್ಮ ಮತ್ತು ಸದ್ಗುರು ಜಗ್ಗಿ ವಾಸುದೇವ್........ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಜನಪ್ರಿಯರಾದ ಅಧ್ಯಾತ್ಮ ಗುರು. ಅಧ್ಯಾತ್ಮಿಕ ಚಿಂತಕರಲ್ಲಿ ವಿವಿಧ ರೀತಿಯ…
ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ…
ಫೆ.26ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ ಎಂದು ದೇವಾಲಯದ ಪ್ರಧಾನ ಅರ್ಚಕ…
ನೆಲಮಂಗಲದ ಜಿಂದಾಲ್ ಸಮೀಪ ನಡೆದ ಭೀಕರ ಅಪಘಾತದಲ್ಲಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ದುರ್ಮರಣಕ್ಕೀಡಾಗಿದ್ದಾರೆ. ಕಳೆದ ರಾತ್ರಿ 11 ಗಂಟೆಯ ಸುಮಾರಿಗೆ…